ಮೇ 1ಕ್ಕೆ ಪಾಕಿಸ್ತಾನಕ್ಕೆ ಹಿಂತಿರುಗಲಿರುವ ಮಾಜಿ ಮಿಲಿಟರಿ ಸರ್ವಾಧಿಕಾರಿ ಮುಷರಫ್
ಇಸ್ಲಾಮಾಬಾದ್, ಏಪ್ರಿಲ್ 28: ಪಾಕಿಸ್ತಾನದ ಮಾಜಿ ಮಿಲಿಟರಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಮೇ ಒಂದನೇ ತಾರೀಕು ತವರಿಗೆ ಹಿಂತಿರುಗಲಿದ್ದಾರೆ ಎಂದು ಅವರ ವಕೀಲರು ಶನಿವಾರ ತಿಳಿಸಿದ್ದಾರೆ. ಎಪ್ಪತ್ತೈದು ವರ್ಷದ ಮುಷರಫ್ ಮೇಲೆ ದೇಶ ದ್ರೋಹದ ಆರೋಪ ಹೊರಿಸಲಾಗಿದೆ. ಮೂರು ವರ್ಷದ ಹಿಂದೆ ವೈದ್ಯಕೀಯ ಚಿಕಿತ್ಸೆಗಾಗಿ ದುಬೈಗೆ ತೆರಳಿದ್ದ ಅವರು, ಪಾಕ್ ಗೆ ಹಿಂತಿರುಗಿರಲಿಲ್ಲ.
ಅಪರೂಪದ ಕಾಯಿಲೆಯೊಂದರಿಂದ ಬಳಲುತ್ತಿರುವ ಅವರು ಕಳೆದ ತಿಂಗಳು ದುಬೈನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. "ಅವರ ಆರೋಗ್ಯ ಕ್ಷೀಣಿಸುತ್ತಿದ್ದರೂ ಮೇ ಎರಡನೇ ತಾರೀಕು ಕೋರ್ಟ್ ವಿಚಾರಣೆಗೆ ಹಜರಾಗಲು ಮುಷರಫ್ ನಿರ್ಧರಿಸಿದ್ದಾರೆ" ಎಂದು ವಕೀಲ ಸಲ್ಮಾನ್ ಸಫ್ದಾರ್ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಮೇ ಎರಡನೇ ತಾರೀಕು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಅರ್ಜಿಯೊಂದರ ವಿಚಾರಣೆ ವೇಳೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಹೇಳಿದೆ. ಒಂದು ವೇಳೆ ಪಾಕಿಸ್ತಾನಕ್ಕೆ ವಾಪಸಾಗಿ, ತಮ್ಮ ಹೇಳಿಕೆ ದಾಖಲಿಸಲು ವಿಫಲರಾದಲ್ಲಿ ಆ ನಂತರ ತಮ್ಮ ಹೇಳಿಕೆ ದಾಖಲಿಸುವ ಹಕ್ಕನ್ನೇ ಮುಷರಫ್ ಕಳೆದುಕೊಳ್ಳುತ್ತಾರೆ ಎಂದು ಮೂವರು ಸದಸ್ಯರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

ಹನ್ನೆರಡು ವರ್ಷದ ಹಿಂದೆ ತುರ್ತು ಪರಿಸ್ಥಿತಿ ಹೇರಿದ್ದ ಮುಷರಫ್ ವಿರುದ್ಧ ಸದ್ಯಕ್ಕೆ ಪಾಕಿಸ್ತಾನ್ ಮುಸ್ಲಿಮ್ ಲೀಗ್-ನವಾಜ್ (ಪಿಎಂಎಲ್-ಎನ್) ಸರಕಾರವು ದೇಶದ್ರೋಹದ ಆರೋಪ ಹೊರಿಸಿತ್ತು. ಮುಷರಫ್ ರನ್ನು ತಪ್ಪಿತಸ್ಥ ಎಂದು ಘೋಷಿಸಿದ ವಿಶೇಷ ಕೋರ್ಟ್ ಅವರ ಆಸ್ತಿ ಜಪ್ತಿಗೆ ಆದೇಶಿಸಿತ್ತು. ಜತೆಗೆ ಮುಷರಫ್ ಪಾಸ್ ಪೋರ್ಟ್, ರಾಷ್ಟ್ರೀಯ ಗುರುತು ಪತ್ರವನ್ನು ರದ್ದುಪಡಿಸಿತ್ತು.
1999ರಿಂದ 2008ರ ತನಕ ಮುಷರಫ್ ಅವರು ಪಾಕಿಸ್ತಾನದಲ್ಲಿ ಆಡಳಿತ ನಡೆಸಿದ್ದರು. ದೇಶದ ವಿರುದ್ಧ ಪಿತೂರಿ ನಡೆಸಿದ ಆರೋಪ ಮುಷರಫ್ ಅವರ ಮೇಲಿದೆ. ಆ ತಪ್ಪು ಸಾಬೀತಾದರೆ ಮರಣ ದಂಡನೆ ಅಥವಾ ಜೀವಾವಧಿ ಜೈಲು ಶಿಕ್ಷೆ ವಿಧಿಸಬಹುದು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications