ಮೇ 1ಕ್ಕೆ ಪಾಕಿಸ್ತಾನಕ್ಕೆ ಹಿಂತಿರುಗಲಿರುವ ಮಾಜಿ ಮಿಲಿಟರಿ ಸರ್ವಾಧಿಕಾರಿ ಮುಷರಫ್
ಇಸ್ಲಾಮಾಬಾದ್, ಏಪ್ರಿಲ್ 28: ಪಾಕಿಸ್ತಾನದ ಮಾಜಿ ಮಿಲಿಟರಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಮೇ ಒಂದನೇ ತಾರೀಕು ತವರಿಗೆ ಹಿಂತಿರುಗಲಿದ್ದಾರೆ ಎಂದು ಅವರ ವಕೀಲರು ಶನಿವಾರ ತಿಳಿಸಿದ್ದಾರೆ. ಎಪ್ಪತ್ತೈದು ವರ್ಷದ ಮುಷರಫ್ ಮೇಲೆ ದೇಶ ದ್ರೋಹದ ಆರೋಪ ಹೊರಿಸಲಾಗಿದೆ. ಮೂರು ವರ್ಷದ ಹಿಂದೆ ವೈದ್ಯಕೀಯ ಚಿಕಿತ್ಸೆಗಾಗಿ ದುಬೈಗೆ ತೆರಳಿದ್ದ ಅವರು, ಪಾಕ್ ಗೆ ಹಿಂತಿರುಗಿರಲಿಲ್ಲ.
ಅಪರೂಪದ ಕಾಯಿಲೆಯೊಂದರಿಂದ ಬಳಲುತ್ತಿರುವ ಅವರು ಕಳೆದ ತಿಂಗಳು ದುಬೈನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. "ಅವರ ಆರೋಗ್ಯ ಕ್ಷೀಣಿಸುತ್ತಿದ್ದರೂ ಮೇ ಎರಡನೇ ತಾರೀಕು ಕೋರ್ಟ್ ವಿಚಾರಣೆಗೆ ಹಜರಾಗಲು ಮುಷರಫ್ ನಿರ್ಧರಿಸಿದ್ದಾರೆ" ಎಂದು ವಕೀಲ ಸಲ್ಮಾನ್ ಸಫ್ದಾರ್ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಮೇ ಎರಡನೇ ತಾರೀಕು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಅರ್ಜಿಯೊಂದರ ವಿಚಾರಣೆ ವೇಳೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಹೇಳಿದೆ. ಒಂದು ವೇಳೆ ಪಾಕಿಸ್ತಾನಕ್ಕೆ ವಾಪಸಾಗಿ, ತಮ್ಮ ಹೇಳಿಕೆ ದಾಖಲಿಸಲು ವಿಫಲರಾದಲ್ಲಿ ಆ ನಂತರ ತಮ್ಮ ಹೇಳಿಕೆ ದಾಖಲಿಸುವ ಹಕ್ಕನ್ನೇ ಮುಷರಫ್ ಕಳೆದುಕೊಳ್ಳುತ್ತಾರೆ ಎಂದು ಮೂವರು ಸದಸ್ಯರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

ಹನ್ನೆರಡು ವರ್ಷದ ಹಿಂದೆ ತುರ್ತು ಪರಿಸ್ಥಿತಿ ಹೇರಿದ್ದ ಮುಷರಫ್ ವಿರುದ್ಧ ಸದ್ಯಕ್ಕೆ ಪಾಕಿಸ್ತಾನ್ ಮುಸ್ಲಿಮ್ ಲೀಗ್-ನವಾಜ್ (ಪಿಎಂಎಲ್-ಎನ್) ಸರಕಾರವು ದೇಶದ್ರೋಹದ ಆರೋಪ ಹೊರಿಸಿತ್ತು. ಮುಷರಫ್ ರನ್ನು ತಪ್ಪಿತಸ್ಥ ಎಂದು ಘೋಷಿಸಿದ ವಿಶೇಷ ಕೋರ್ಟ್ ಅವರ ಆಸ್ತಿ ಜಪ್ತಿಗೆ ಆದೇಶಿಸಿತ್ತು. ಜತೆಗೆ ಮುಷರಫ್ ಪಾಸ್ ಪೋರ್ಟ್, ರಾಷ್ಟ್ರೀಯ ಗುರುತು ಪತ್ರವನ್ನು ರದ್ದುಪಡಿಸಿತ್ತು.
1999ರಿಂದ 2008ರ ತನಕ ಮುಷರಫ್ ಅವರು ಪಾಕಿಸ್ತಾನದಲ್ಲಿ ಆಡಳಿತ ನಡೆಸಿದ್ದರು. ದೇಶದ ವಿರುದ್ಧ ಪಿತೂರಿ ನಡೆಸಿದ ಆರೋಪ ಮುಷರಫ್ ಅವರ ಮೇಲಿದೆ. ಆ ತಪ್ಪು ಸಾಬೀತಾದರೆ ಮರಣ ದಂಡನೆ ಅಥವಾ ಜೀವಾವಧಿ ಜೈಲು ಶಿಕ್ಷೆ ವಿಧಿಸಬಹುದು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications