Peshawar Mosque Blast: ಪೇಶಾವರ ಮಸೀದಿಯಲ್ಲಿ ಆತ್ಮಾಹುತಿ ಬಾಂಬರ್ನ ತುಂಡಾದ ತಲೆ ಪತ್ತೆ!
ಪಾಕಿಸ್ತಾನದ ಮಸೀದಿ ಸ್ಫೋಟದ ಸ್ಥಳದಲ್ಲಿ ಆತ್ಮಹತ್ಯಾ ಬಾಂಬರ್ನ ತುಂಡಾದ ತಲೆ ಪತ್ತೆಯಾಗಿದೆ.
ಪೇಶಾವರ ಜನವರಿ 31: ಪಾಕಿಸ್ತಾನದ ಮಸೀದಿ ಸ್ಫೋಟದ ಸ್ಥಳದಲ್ಲಿ ಆತ್ಮಹತ್ಯಾ ಬಾಂಬರ್ನ ತುಂಡಾದ ತಲೆ ಪತ್ತೆಯಾಗಿದೆ. ಪೇಶಾವರ ನಗರದಲ್ಲಿ ಸೋಮವಾರ ಮಧ್ಯಾಹ್ನ ಪ್ರಾರ್ಥನೆಯ ವೇಳೆ ಆತ್ಮಾಹುತಿ ಬಾಂಬರ್ ಸ್ಪೋಟಕವನ್ನು ಸ್ಪೋಟಿಸಿದ್ದನು. ಶಂಕಿತ ಉಗ್ರನ ತಲೆಯನ್ನು ರಕ್ಷಣಾ ಅಧಿಕಾರಿಗಳು ಇಂದು ವಶಪಡಿಸಿಕೊಂಡಿದ್ದಾರೆ.
ಬಾಂಬ್ ಸ್ಫೋಟದಿಂದ ಸಾವಿನ ಸಂಖ್ಯೆ 93ಕ್ಕೆ ಏರಿಕೆಯಾಗಿದೆ. ಇದರಿಂದ 221 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಪೋಟದ ತೀವ್ರತೆಗೆ ದೇಹಗಳು ಛಿದ್ರಗೊಂಡಿದ್ದು ಅವಶೇಷಗಳಿಂದ ದೇಹದ ಭಾಗಗಳನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ಇಂದಿಗೂ ಮುಂದುವರೆದಿದೆ. ಸೋಮವಾರ ಮಧ್ಯಾಹ್ನ 1.40ರ ಸುಮಾರಿಗೆ ಹೆಚ್ಚು ಜನ ಪೊಲೀಸರು, ಸೇನೆ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳನ್ನು ಒಳಗೊಂಡಂತೆ ಭಕ್ತರು ಜುಹ್ರ್ (ಮಧ್ಯಾಹ್ನ) ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಪ್ರಬಲ ಸ್ಫೋಟ ಸಂಭವಿಸಿದೆ.
ಮುಂದಿನ ಸಾಲಿನಲ್ಲಿದ್ದ ಆತ್ಮಹತ್ಯಾ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದು, ಇದರಿಂದ ಮೇಲ್ಛಾವಣಿಯು ಭಕ್ತರ ಮೇಲೆ ಕುಸಿದಿದೆ. ಕ್ಯಾಪಿಟಲ್ ಸಿಟಿ ಪೊಲೀಸ್ ಅಧಿಕಾರಿ (ಸಿಸಿಪಿಒ) ಪೇಶಾವರ ಮೊಹಮ್ಮದ್ ಐಜಾಜ್ ಖಾನ್ ಜಿಯೋ ಟಿವಿಗೆ ಸ್ಪೋಟವು ಆತ್ಮಾಹುತಿ ದಾಳಿಯಂತೆ ತೋರುತ್ತಿದೆ. ಪೇಶಾವರದ ಸ್ಥಳದಲ್ಲಿ ಶಂಕಿತ ಬಾಂಬರ್ನ ತಲೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಗಿದ ಬಳಿಕ ಸ್ಫೋಟದ ನಿಖರ ಸ್ವರೂಪ ತಿಳಿಯಲಿದೆ ಎಂದು ಖಾನ್ ತಿಳಿಸಿದ್ದಾರೆ.

ದಾಳಿಯ ನಂತರ ಖೈಬರ್ ಪಖ್ತುಂಖ್ವಾದ ಉಸ್ತುವಾರಿ ಮುಖ್ಯಮಂತ್ರಿ ಮುಹಮ್ಮದ್ ಅಜಮ್ ಖಾನ್ ಮಂಗಳವಾರ ಪ್ರಾಂತ್ಯದಲ್ಲಿ ಶೋಕಾಚರಣೆಯ ದಿನವನ್ನು ಘೋಷಿಸಿದರು. ಪಾಕಿಸ್ತಾನಿ ತಾಲಿಬಾನ್ ಎಂದು ಕರೆಯಲ್ಪಡುವ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಆತ್ಮಾಹುತಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಇದು ಕಳೆದ ಆಗಸ್ಟ್ನಲ್ಲಿ ಅಫ್ಘಾನಿಸ್ತಾನದಲ್ಲಿ ಕೊಲ್ಲಲ್ಪಟ್ಟ ಟಿಟಿಪಿ ಕಮಾಂಡರ್ ಉಮರ್ ಖಾಲಿದ್ ಖುರಾಸಾನಿ ಅವರ ಪ್ರತೀಕಾರದ ದಾಳಿಯ ಭಾಗವಾಗಿದೆ ಎಂದು ತಿಳಿದು ಬಂದಿದೆ.
2007 ರಲ್ಲಿ ಹಲವಾರು ಭಯೋತ್ಪಾದಕ ಸಂಘಟನೆಗಳ ಗುಂಪಿನಂತೆ ಸ್ಥಾಪಿಸಲಾದ TTP ದೇಶಾದ್ಯಂತ ದಾಳಿಗಳನ್ನು ನಡೆಸಲು ತನ್ನ ಭಯೋತ್ಪಾದಕರಿಗೆ ಆದೇಶ ನೀಡಿತು. ಅಲ್-ಖೈದಾಗೆ ನಿಕಟವಾಗಿದೆ ಎಂದು ನಂಬಲಾದ ಗುಂಪು, 2009 ರಲ್ಲಿ ಸೇನಾ ಪ್ರಧಾನ ಕಛೇರಿಯ ಮೇಲಿನ ದಾಳಿ, ಸೇನಾ ನೆಲೆಗಳ ಮೇಲಿನ ದಾಳಿ ಮತ್ತು 2008 ರಲ್ಲಿ ಇಸ್ಲಾಮಾಬಾದ್ನ ಮ್ಯಾರಿಯಟ್ ಹೋಟೆಲ್ನ ಬಾಂಬ್ ದಾಳಿ ಸೇರಿದಂತೆ ಪಾಕಿಸ್ತಾನದಾದ್ಯಂತ ಹಲವಾರು ಮಾರಣಾಂತಿಕ ದಾಳಿಗಳಿಗೆ ಆರೋಪಿಸಲ್ಪಟ್ಟಿದೆ.

2014 ರಲ್ಲಿ, ಪಾಕಿಸ್ತಾನಿ ತಾಲಿಬಾನ್ ವಾಯುವ್ಯ ನಗರದ ಪೇಶಾವರ್ನಲ್ಲಿರುವ ಆರ್ಮಿ ಪಬ್ಲಿಕ್ ಸ್ಕೂಲ್ (ಎಪಿಎಸ್) ಮೇಲೆ ದಾಳಿ ಮಾಡಿ 131 ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ 150 ಜನರನ್ನು ಕೊಂದಿತು. ಈ ದಾಳಿಯು ಪ್ರಪಂಚದಾದ್ಯಂತ ಆಘಾತ ತಂದಿವೆ ಮತ್ತು ವ್ಯಾಪಕ ಖಂಡನೆಗೆ ಒಳಗಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications