ಹೀಗೊಂದು ಫೋನ್ ಕಾಲ್: ಭಾರತ-ನೆದರ್ಲೆಂಡ್ ಪ್ರಧಾನಿಗಳ ರಾಜತಾಂತ್ರಿಕ ಮಾತುಕತೆ
ನವದೆಹಲಿ, ಜುಲೈ 13: ಭಾರತ ಮತ್ತು ನೆದರ್ಲೆಂಡ್ ನಡುವಿನ ಕಾರ್ಯತಂತ್ರ ಮತ್ತು ಬಾಂಧವ್ಯದ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಲ್ಲಿನ ಪ್ರಧಾನಿ ಮಾರ್ಕ್ ರುಟ್ಟೆ ಪರಸ್ಪರ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ.
ಬುಧವಾರ ಉಭಯ ರಾಷ್ಟ್ರಗಳ ನಾಯಕರು ಎರಡೂ ರಾಷ್ಟ್ರಗಳ ನಡುವಿನ ಉತ್ತಮ ಸಂಬಂಧ ವೃದ್ಧಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ನೀರಿನ ವಿಷಯದಲ್ಲಿ ಸಹಭಾಗಿತ್ವ, ಕೃಷಿಯ ಪ್ರಮುಖ ಕ್ಷೇತ್ರದಲ್ಲಿ ಸಹಕಾರ, ಹೈಟೆಕ್ ಮತ್ತು ಉದಯೋನ್ಮುಖ ವಲಯಗಳಲ್ಲಿ ದ್ವಿಪಕ್ಷೀಯ ಸಹಕಾರದ ಸಾಮರ್ಥ್ಯದ ಕುರಿತು ಚರ್ಚಿಸಿದ್ದಾರೆ.
ಉಭಯ ನಾಯಕರು ಭಾರತ-ಯುರೋಪಿಯನ್ ಒಕ್ಕೂಟದ ಸಂಬಂಧಗಳು, ಇಂಡೋ-ಪೆಸಿಫಿಕ್ನಲ್ಲಿ ಒಮ್ಮುಖ ಮತ್ತು ಸಹಕಾರ ಸೇರಿದಂತೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯ ವಿನಿಮಯ ಮಾಡಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಭಾರತ-ನೆದರ್ಲೆಂಡ್ ನಡುವಿನ ಸಂಬಂಧಕ್ಕೆ ವೇಗ: ಜಾಗತಿಕ ಮಟ್ಟದಲ್ಲಿ ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ನೆದರ್ಲೆಂಡ್ ನಡುವಿನ ಸಂಬಂಧವನ್ನು ವೃದ್ಧಿಸಿಕೊಳ್ಳಲಾಗುತ್ತಿದೆ. ಈ ಹಂತದಲ್ಲಿ ನಿಯಮಿತ ಉನ್ನತ ಮಟ್ಟದ ಭೇಟಿ ಮತ್ತು ಸಂವಾದಗಳು ಎರಡು ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬೆಸೆಯುತ್ತಿವೆ.
ಕಳೆದ 2021ರ ಏಪ್ರಿಲ್ 9ರಂದು ಉಭಯ ರಾಷ್ಟ್ರದ ಪ್ರಧಾನಿಗಳು ವರ್ಚುವಲ್ ಶೃಂಗಸಭೆಯನ್ನು ನಡೆಸಿದ್ದರು. ಈ ವೇಳೆ ವರ್ಚುವಲ್ ಶೃಂಗಸಭೆಯಲ್ಲಿ ನೆದರ್ಲೆಂಡ್ನೊಂದಿಗೆ 'ನೀರಿನ ಮೇಲಿನ ಕಾರ್ಯತಂತ್ರದ ಪಾಲುದಾರಿಕೆ'ಯನ್ನು ಪ್ರಾರಂಭಿಸಲಾಗಿತ್ತು.
ಪ್ರಸಕ್ತ ವರ್ಷದಲ್ಲಿ ಭಾರತವು 75ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಆಚರಿಸುತ್ತಿದ್ದು ಈ ಸಂದರ್ಭದಲ್ಲಿ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಮತ್ತಷ್ಟು ಬಲಗೊಳಿಸಬೇಕಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications