ಸುಡಾನ್ ನಲ್ಲಿ ವಿಮಾನ ಪತನ; ಪ್ರಯಾಣಿಕರು ಪವಾಡ ಸದೃಶ ಪಾರು!
ಆಕಾಶದಲ್ಲಿ ಹಾರಾಡುವಾಗ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನ ಪತನಗೊಂಡಿದೆ ಎಂದು ಹೇಳಲಾಗಿದೆ.
ಜುಬಾ, ಮಾರ್ಚ್ 20: ಸುಮಾರು ನಲವತ್ತನಾಲ್ಕು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆ ವೇಳೆಗೆ ದಕ್ಷಿಣ ಸುಡಾನ್ ನಲ್ಲಿ ಅಗ್ನಿ ಅವಗಢಕ್ಕೆ ತುತ್ತಾಗಿದೆ ಎಂದು ಮೂಲಗಳು ತಿಳಿಸಿದೆ. ಈ ವಿಮಾನವು ಸೌತ್ ಸ್ಪಿಯರ್ ಮಿಯರ್ ವಿಮಾನ ಸಂಸ್ಥೆಗೆ ಸೇರಿದ ವಿಮಾನ ಎನ್ನಲಾಗಿದೆ.
ಪವಾಡ ಎಂಬಂತೆ, ವಿಮಾನದಲ್ಲಿದ್ದ ಎಲ್ಲಾ 43 ಪ್ರಯಾಣಿಕರೂ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದಾರೆಂದು ಸಿಎನ್ ಎನ್ ಹೇಳಿದೆ. ಆರಂಭದಲ್ಲಿ ಕೆಲ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಬಂದ ವರದಿಗಳ ಪ್ರಕಾರ, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರೂ ಸಾವನ್ನಪ್ಪಿದ್ದಾರೆಂದು ಹೇಳಲಾಗಿತ್ತು.

ಆನಂತರ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಂತಾರಾಷ್ಟ್ರೀಯ ಸುದ್ದಿ ಮಾಧ್ಯಮಗಳು, ವಿಮಾನ ಕೆಳಗಿಳಿದ ಮೇಲೆ ಭಸ್ಮವಾಗುತ್ತಾ ನಿಂತಿದ್ದಾಗ ಒಳಗಿರುವ ಎಲ್ಲರೂ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿತ್ತು. ಆದರೆ, ಕೆಲ ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಎಲ್ಲಾ ಪ್ರಯಾಣಿಕರೂ ಬದುಕುಳಿದಿರುವುದಾಗಿ ಹೇಳಲಾಗಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಆಕಾಶದಲ್ಲಿ ಹಾರಾಡುವಾಗ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನವನ್ನು ತಕ್ಷಣವೇ ಕೆಳಗಿಸಲು ಪ್ರಯತ್ನಿಸಲಾಯಿತು. ಆಗ, ದಕ್ಷಿಣ ಸುಡಾನ್ ನ ವುವು ವಿಮಾನ ನಿಲ್ದಾಣದ ಕಂಟ್ರೋಲ್ ರೂಂ ಸಹಾಯ ಪಡೆದು ವಿಮಾನವನ್ನು ತುರ್ತು ಭೂ ಸ್ಪರ್ಶ ಮಾಡುತ್ತಲಿರುವಾಗಲೇ ಇಡೀ ವಿಮಾನ ಭಸ್ಮವಾಯಿತು ಎಂದು ಹೇಳಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications