ಬ್ರಿಟನ್ನಿಗೆ ಬನ್ನಿ ಮೋದಿಯವರೆ ಎಂದ ಕ್ಯಾಮರೂನ್
ಲಂಡನ್, ಅ 29: ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್ ತಮ್ಮ ದೇಶಕ್ಕೆ ಬರುವಂತೆ ಮತ್ತೊಮ್ಮೆ ಆಹ್ವಾನ ರವಾನಿಸಿದ್ದಾರೆ.
CNN-IBN ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಕ್ಯಾಮರೂನ್, ಕಾಶ್ಮೀರ ವಿವಾದ ಭಾರತ ಮತ್ತು ಪಾಕಿಸ್ತಾನಕ್ಕೆ ಸಂಬಂಧಿಸಿದ್ದು. ಬ್ರಿಟನ್ ಈ ವಿವಾದದಲ್ಲಿ ಮೂಗು ತೂರಿಸುವುದಿಲ್ಲ. ಮೋದಿ ಭೇಟಿಯ ವೇಳೆ ಈ ವಿಚಾರ ಚರ್ಚೆಗೆ ಬರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈಗಾಗಲೇ ಮೋದಿಯವರಿಗೆ ಬ್ರಿಟನ್ ಭೇಟಿ ನೀಡಲು ಮುಕ್ತ ಆಹ್ವಾನ ನೀಡಲಾಗಿದೆ. ಈ ಸಂದರ್ಶನದ ಮೂಲಕ ಮತ್ತೊಮ್ಮೆ ಆಹ್ವಾನ ನೀಡುತ್ತಿದ್ದೇವೆ. ಉಪ ಪ್ರಧಾನಿ ಮತ್ತು ವಿದೇಶಾಂಗ ಕಾರ್ಯದರ್ಶಿ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮೋದಿ ಭೇಟಿಯನ್ನು ನಾವು ಎದುರು ನೋಡುತ್ತಿದ್ದೇವೆ ಎಂದು ಕ್ಯಾಮರೂನ್ ಸಂದರ್ಶನದಲ್ಲಿ ಹೇಳಿದ್ದಾರೆ.

ಮೋದಿ ಪ್ರಧಾನಿಯಾಗಿ ಆಯ್ಕೆಯಾದಾಗ ಅವರನ್ನು ಅಭಿನಂದಿಸಿದ ವಿಶ್ವದ ನಾಯಕರಲ್ಲಿ ಮೊದಲಿಗರಾಗಿದ್ದ ಕ್ಯಾಮರೂನ್, ಪ್ರಧಾನಿಯಾಗಿ ಮೂರು ಬಾರಿ ಭಾರತಕ್ಕೆ ಭೇಟಿ ನೀಡಿದ್ದೇನೆ. ಮೋದಿ ಯುಕೆಗೆ ಭೇಟಿ ನೀಡಿದಾಗ ಅವರಿಗೆ ಹೃತ್ಪೂರ್ವಕ ಸ್ವಾಗತ ನೀಡಲಾಗುವುದು ಎಂದು ಕ್ಯಾಮರೂನ್ ತಿಳಿಸಿದ್ದಾರೆ.
ಭಾರತ ಮತ್ತು ಬ್ರಿಟನ್ ವಿಶ್ವದ ಪ್ರಬಲ ಪ್ರಜಾಪ್ರಭುತ್ವ ರಾಷ್ಟ್ರಗಳು. ಕೆಲವೊಂದು ಸಮಸ್ಯೆಗಳನ್ನು ಎರಡೂ ದೇಶಗಳು ಎದುರಿಸುತ್ತಿವೆ. ಕೈಗಾರಿಕಾ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಯಾಗಬೇಕಾಗಿದೆ ಎಂದು ಕ್ಯಾಮರೂನ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಕಾಶ್ಮೀರ ಸಮಸ್ಯೆಯನ್ನು ದ್ವಿಪಕ್ಷೀಯ ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಪರಿಹರಿಸಿ ಕೊಳ್ಳಬೇಕು ಎನ್ನುವುದು ನಮ್ಮ ಆಶಯ. ಆದರೆ ಬ್ರಿಟನ್ ಸರಕಾರ ಈ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಪ್ರಧಾನಿ ಕ್ಯಾಮರೂನ್ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications