ವಾಘಾ ಗಡಿಯಲ್ಲಿ ಉಗ್ರರ ದಾಳಿ, ಮೋದಿ ಖಂಡನೆ
ಇಸ್ಲಾಮಾಬಾದ್/ ನವದೆಹಲಿ, ನ.3: ಪಾಕಿಸ್ತಾನದ ಗಡಿಭಾಗ್ದ ವಾಘಾದ ಸಮೀಪ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಿಂದ ಆಘಾತವಾಗಿದೆ. ಗಡಿಭಾಗದಲ್ಲಿ ಇಂಥ ದುಷ್ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ, ಉಗ್ರರ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ವಾಘಾ ಗಡಿಯ ಅರ್ಧ ಕಿ.ಮೀ ದೂರದಲ್ಲಿ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಪಾಕಿಸ್ತಾನದ ರೇಂಜರ್ಸ್ ಸೇರಿದಂತೆ ಸುಮಾರು 55 ಮಂದಿ ಮೃತಪಟ್ಟಿದ್ದು, 200 ಮಂದಿಗೆ ಗಂಭೀರ ಗಾಯಗಳಾಗಿವೆ. ಮೃತಪಟ್ಟವರಲ್ಲಿ 11 ಮಂದಿ ಮಹಿಳೆಯರು, ಮೂವರು ಭದ್ರತಾ ಸಿಬ್ಬಂದಿ ಸೇರಿದ್ದಾರೆ.

ವಾಘಾ ಗಡಿಯಲ್ಲಿ ಧ್ವಜ ಅವರೋಹಣ ಸಂದರ್ಭದಲ್ಲೇ ಬಾಂಬ್ ದಾಳಿ ನಡೆದಿದೆ.ರೇಂಜರ್ಸ್ ಧ್ವಜ ಅವರೋಹಣ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಅನೇಕ ಜನ ನಿರ್ಗಮನ ಗೇಟ್ ಬಳಿ ಇದ್ದರು ಈ ಸಂದರ್ಭದಲ್ಲಿ ಆತ್ಮಾಹುತಿ ಬಾಂಬ್ ಸಿಡಿದಿದೆ. ವಾಘಾ ಗಡಿಯ ಪಾರ್ಕಿಂಗ್ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ. ಮೊದಲಿಗೆ ಇದು ಸಿಲಿಂಡರ್ ಸ್ಫೋಟವೆಂದು ಭಾವಿಸಲಾಗಿತ್ತು. ನಂತತ ಆತ್ಮಹತ್ಯಾ ಬಾಂಬ್ ದಾಳಿ ಎಂದು ಖಾತ್ರಿಯಾಯಿತು ಎಂದು ಪಂಜಾಬ್ ಪೊಲೀಸ್ ಐಜಿ ಮುಷ್ತಾಕ್ ಸುರೇಖ ಪಿಟಿಐಗೆ ತಿಳಿಸಿದ್ದಾರೆ.
Terror attack in Pakistan near Wagah Border is shocking. I strongly condemn such a dastardly act of terrorism.
— Narendra Modi (@narendramodi) November 2, 2014 ಉಗ್ರರ ಕೃತ್ಯದಿಂದ ಗಡಿ ಪ್ರದೇಶದ ಅಂಗಡಿ-ಮುಂಗಟ್ಟುಗಳೂ ಧ್ವಂಸವಾಗಿವೆ. ಅಲ್ಖೈದಾ ಬೆಂಬಲಿತ ಜನಾದುಲ್ಲಾ ಉಗ್ರ ಸಂಘಟನೆ ಈ ಸ್ಫೋಟದ ಹೊಣೆ ಹೊತ್ತಿದೆ. ಘಟನೆಯನ್ನು ಖಂಡಿಸಿರುವ ಪ್ರಧಾನಿ ನವಾಜ್ ಷರೀಫ್ ಅವರು ಕೂಡಲೇ ಸಂಬಂಧ ವರದಿ ನೀಡುವಂತೆ ಆದೇಶಿಸಿದ್ದಾರೆ. ಲಾಹೋರ್ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಖರ್ಕಿ ಆಸ್ಪತ್ರೆ, ಶಾಲಿಮರ್ ಆಸ್ಪತ್ರೆಗಳಲ್ಲಿ ಶವಗಳನ್ನು ಇರಿಸಲಾಗಿದೆ. 15 ದಿನಗಳ ಹಿಂದೆ ದುಷ್ಕೃತ್ಯದ ಬಗ್ಗೆ ಸುಳಿವು ಸಿಕ್ಕಿತ್ತು, ಹೀಗಾಗಿ ಗಡಿಭಾಗದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು ಎಂದು ತಿಳಿದು ಬಂದಿದೆ.
My condolences to the families of the deceased. Prayers with the injured.
— Narendra Modi (@narendramodi) November 2, 2014 ಆತ್ಮಾಹುತಿ ಬಾಂಬ್ ದಾಳಿಗೊಳಗಾಗಿ ಸಾವನ್ನಪ್ಪಿದ ಉಗ್ರನನ್ನು 20 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದ್ದು ತನ್ನ ಜಾಕೆಟ್ ನಲ್ಲಿ ಬಾಂಬ್ ಇರಿಸಿಕೊಂಡಿದ್ದ ಎಂದು ತಿಳಿದು ಬಂದಿದೆ. ಕಳೆದ ವರ್ಷ ಪೇಷಾವರದ ಚರ್ಚ್ ನಲ್ಲಿ 78 ಕ್ರಿಶ್ಚಿಯನ್ನರನ್ನು ಬಲಿ ತೆಗೆದುಕೊಂಡ ಜಾನಾದುಲ್ಲಾ ಸಂಘಟನೆಯೇ ಈ ಕೃತ್ಯವನ್ನು ಎಸಗಿದೆ ಎಂದು ಇತರೆ ಉಗ್ರ ಸಂಘಟನೆಗಳು ಘೋಷಿಸಿವೆ. ಭಾರತದ ವಾಘಾ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸದ್ಯಕ್ಕೆ ಧ್ವಜ ಅವರೋಹಣ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.(ಪಿಟಿಐ)
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications