ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯಿಂದ ಪ್ರತಿಷ್ಠಿತ 'ಚಾಂಪಿಯನ್ ಆಫ್ ಅರ್ಥ್' ಪ್ರಶಸ್ತಿ
ನ್ಯೂಯಾರ್ಕ್, ಸೆಪ್ಟೆಂಬರ್ 26: ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಪರಿಸರಕ್ಕೆ ಸಂಬಂಧಿಸಿದ ಅತ್ಯುನ್ನತ ಪ್ರಶಸ್ತಿಯಾದ 'ಚಾಂಪಿಯನ್ ಆಫ್ ಅರ್ಥ್' ಪ್ರಶಸ್ತಿಗೆ ವಿಶ್ವಸಂಸ್ಥೆ ಆಯ್ಕೆ ಮಾಡಿದೆ.
'ಆಯುಷ್ಮಾನ್ ಭಾರತ' ನೀಡಿದ್ದಕ್ಕೆ ನರೇಂದ್ರ ಮೋದಿಗೆ ನೊಬೆಲ್ ಶಾಂತಿ ಪುರಸ್ಕಾರ?
ಮೋದಿ ಅವರ ಹೆಸರಿನೊಂದಿಗೆ, ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುಲ್ ಮ್ಯಾಕ್ರೋನ್ ಅವರ ಹೆಸರನ್ನೂ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ ಎರಚಿದ ಕೆಸರಿನಲ್ಲಿ ಕಮಲ ಅರಳಿ ಹೊಳೆಯುತ್ತಿದೆ: ಮೋದಿ
ಪರಿಸರ ಜಾಗೃತಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಹತ್ತು ಹಲವು ಯೋಜನೆಗಳು ಮತ್ತು 2010 ರ ಹೊತ್ತಿಗೆ ಭಾರತದಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ಉಪಯೋಗವನ್ನು ನಿಲ್ಲಿಸುವುದಕ್ಕೆ ನಿರ್ಧರಿಸಿರುವ ಅವರ ನಡೆಯನ್ನು ವಿಶ್ವಸಂಸ್ಥೆ ಶ್ಲಾಘಿಸಿದೆ.
ಸೌರಶಕ್ತಿ ಬಳಕೆ ಮತ್ತು ಪರಿಸರ ಕಾಳಜಿಗೆ ಸಂಬಂಧಿಸಿದಂತೆ ಭಾರತ ಮತ್ತು ಫ್ರಾನ್ಸ್ ದೇಶಗಳು ಒತ್ತು ನೀಡುತ್ತಿರುವುದನ್ನು ಮನಗಂಡ ವಿಶ್ವಸಂಸ್ಥೆ ಈ ಪ್ರಶಸ್ತಿಗೆ ಮೋದಿ ಮತ್ತು ಮ್ಯಾರ್ಕೋನ್ ಅವರನ್ನು ಆರಿಸಿದೆ.
ಹಲವು ಮಹತ್ವದ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಸುಸ್ಥಿರ ಶಕ್ತಿಗಳ ಬಳಕೆಗಾಗಿ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 'ಎಂಟ್ರಪ್ರಿನರಿಯಲ್ ವಿಶನ್' ಪ್ರಶಸ್ತಿ ಲಭಿಸಿದೆ.
ಈ ಪ್ರಶಸ್ತಿಯನ್ನು ಅಮೆರಿಕದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ 73 ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರದಾನ ಮಾಡಲಾಗುತ್ತದೆ.