ವಿಶ್ವದ ಅತ್ಯಂತ ಸುಂದರ ಭಾಷೆ ತಮಿಳು, ಫ್ರಾನ್ಸ್ನಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ: ಪ್ರಧಾನಿ ಮೋದಿ ಘೋಷಣೆ
ಪ್ಯಾರಿಸ್, ಜುಲೈ 14: ಪ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಮತ್ತೊಮ್ಮೆ ತಮಿಳು ಬಾಷೆ ಹಾಗೂ ಸಂಸ್ಕೃತಿಯನ್ನು ಹಾಡಿ ಹೊಗಳಿದ್ದಾರೆ. ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿರುವ ಅವರು ವಿಶ್ವದ ಅತ್ಯಂತ ಸುಂದರ ಭಾಷೆ ತಮಿಳು ಎಂದು ಬಣ್ಣಿಸಿದ್ದಾರೆ.
ತಮಿಳು ಕಲ್ಚರಲ್ ಅಸೋಸಿಯೇಷನ್ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.
ತಮಿಳಿನ ಮಹಾಕವಿ ಹಾಗೂ ತತ್ವಜ್ಞಾನಿ ತಿರುವಳ್ಳುವರ್ ಬಗ್ಗೆಯೂ ಮಾತನಾಡಿರುವ ಮೋದಿ, ಫ್ರಾನ್ಸ್ನಲ್ಲಿ ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ತಿರುವಳ್ಳುವರ್ ಪ್ರತಿಮೆ ಮೂಲಕ ಫ್ರಾನ್ಸ್ನಲ್ಲಿ ತಮಿಳು ಭಾಷೆ ಹಾಗೂ ಸಂಸ್ಕೃತಿಯ ಮಹತ್ವವನ್ನು ತಿಳಿಸಿಕೊಡಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ತಿರುವಳ್ಳುವರ್ ಮಹತ್ವದ ಕೊಡುಗೆಗಳನ್ನು ಸ್ಮರಿಸಿರುವ ಮೋದಿ, ತಮಿಳು ಪ್ರಪಂಚದ ಅತ್ಯಂತ ಹಳೆಯ ಭಾಷೆ ಹಾಗೂ ವಿಶ್ವದ ಅತಿ ಸುಂದರ ಭಾಷೆ ಎಂದು ಮೋದಿ ಶ್ಲಾಘಿಸಿದ್ದಾರೆ.
ತಿರುವಳ್ಳುವರ್ ಭಾರತದ ಹೆಮ್ಮೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ತಿರುವಳ್ಳುವರ್ ಪ್ರತಿಮೆಯು ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯ ಸಂಕೇತವಾಗಿ ಕಾರ್ಯನಿರ್ವಹಿಸುತ್ತದೆ. ಅಂತರರಾಷ್ಟ್ರೀಯ ವೇದಿಕೆಯಲ್ಲಿ ತಮಿಳು ಸಾಹಿತ್ಯ ಮತ್ತು ತತ್ವಶಾಸ್ತ್ರದ ಶ್ರೀಮಂತ ಪರಂಪರೆಯನ್ನು ಎತ್ತಿಹಿಡಿಯುತ್ತದೆ ಎಂದು ಅವರು ಹೇಳಿದ್ದಾರೆ.

ಕೆಲವೇ ತಿಂಗಳುಗಳಲ್ಲಿ, ಫ್ರಾನ್ಸ್ನ ಸೆರ್ಗೆ ಪ್ರಾಂತ್ಯದಲ್ಲಿ ಸಂತ ತಿರುವಳ್ಳುವರ್ ಅವರ ಪ್ರತಿಮೆ ಇರಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಈ ಘೋಷಣೆಯಾಗುತ್ತಿದಂತೆ ಅನಿವಾಸಿ ಭಾರತೀಯರು ಚಪ್ಪಾಳೆ ತಟ್ಟುವ ಮೂಲಕ ಶ್ಲಾಘಿಸಿದ್ದಾರೆ.
ತನ್ನ ಮಗುವನ್ನು ಹೊಗಳಿದಾಗ ತಾಯಿ ಹೇಗೆ ಸಂತೋಷಪಡುತ್ತಾಳೆ ಎಂಬ ತಿರುವಳ್ಳುವರ್ ಅವರ ಕವಿತೆಯನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.
ಜಗತ್ತು ನಿಮ್ಮನ್ನು ಹೊಗಳಿದಾಗ, 'ತಾಯಿ ಭಾರತಿ' ಅದೇ ರೀತಿಯ ಸಂತೋಷವನ್ನು ಅನುಭವಿಸುತ್ತಾಳೆ ಎಂದು ಅವರು ತಿಳಿಸಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications