ವಿಶ್ವದ ಅತ್ಯಂತ ಸುಂದರ ಭಾಷೆ ತಮಿಳು, ಫ್ರಾನ್ಸ್ನಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ: ಪ್ರಧಾನಿ ಮೋದಿ ಘೋಷಣೆ
ಪ್ಯಾರಿಸ್, ಜುಲೈ 14: ಪ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಮತ್ತೊಮ್ಮೆ ತಮಿಳು ಬಾಷೆ ಹಾಗೂ ಸಂಸ್ಕೃತಿಯನ್ನು ಹಾಡಿ ಹೊಗಳಿದ್ದಾರೆ. ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿರುವ ಅವರು ವಿಶ್ವದ ಅತ್ಯಂತ ಸುಂದರ ಭಾಷೆ ತಮಿಳು ಎಂದು ಬಣ್ಣಿಸಿದ್ದಾರೆ.
ತಮಿಳು ಕಲ್ಚರಲ್ ಅಸೋಸಿಯೇಷನ್ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.
ತಮಿಳಿನ ಮಹಾಕವಿ ಹಾಗೂ ತತ್ವಜ್ಞಾನಿ ತಿರುವಳ್ಳುವರ್ ಬಗ್ಗೆಯೂ ಮಾತನಾಡಿರುವ ಮೋದಿ, ಫ್ರಾನ್ಸ್ನಲ್ಲಿ ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ತಿರುವಳ್ಳುವರ್ ಪ್ರತಿಮೆ ಮೂಲಕ ಫ್ರಾನ್ಸ್ನಲ್ಲಿ ತಮಿಳು ಭಾಷೆ ಹಾಗೂ ಸಂಸ್ಕೃತಿಯ ಮಹತ್ವವನ್ನು ತಿಳಿಸಿಕೊಡಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ತಿರುವಳ್ಳುವರ್ ಮಹತ್ವದ ಕೊಡುಗೆಗಳನ್ನು ಸ್ಮರಿಸಿರುವ ಮೋದಿ, ತಮಿಳು ಪ್ರಪಂಚದ ಅತ್ಯಂತ ಹಳೆಯ ಭಾಷೆ ಹಾಗೂ ವಿಶ್ವದ ಅತಿ ಸುಂದರ ಭಾಷೆ ಎಂದು ಮೋದಿ ಶ್ಲಾಘಿಸಿದ್ದಾರೆ.
ತಿರುವಳ್ಳುವರ್ ಭಾರತದ ಹೆಮ್ಮೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ತಿರುವಳ್ಳುವರ್ ಪ್ರತಿಮೆಯು ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯ ಸಂಕೇತವಾಗಿ ಕಾರ್ಯನಿರ್ವಹಿಸುತ್ತದೆ. ಅಂತರರಾಷ್ಟ್ರೀಯ ವೇದಿಕೆಯಲ್ಲಿ ತಮಿಳು ಸಾಹಿತ್ಯ ಮತ್ತು ತತ್ವಶಾಸ್ತ್ರದ ಶ್ರೀಮಂತ ಪರಂಪರೆಯನ್ನು ಎತ್ತಿಹಿಡಿಯುತ್ತದೆ ಎಂದು ಅವರು ಹೇಳಿದ್ದಾರೆ.

ಕೆಲವೇ ತಿಂಗಳುಗಳಲ್ಲಿ, ಫ್ರಾನ್ಸ್ನ ಸೆರ್ಗೆ ಪ್ರಾಂತ್ಯದಲ್ಲಿ ಸಂತ ತಿರುವಳ್ಳುವರ್ ಅವರ ಪ್ರತಿಮೆ ಇರಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಈ ಘೋಷಣೆಯಾಗುತ್ತಿದಂತೆ ಅನಿವಾಸಿ ಭಾರತೀಯರು ಚಪ್ಪಾಳೆ ತಟ್ಟುವ ಮೂಲಕ ಶ್ಲಾಘಿಸಿದ್ದಾರೆ.
ತನ್ನ ಮಗುವನ್ನು ಹೊಗಳಿದಾಗ ತಾಯಿ ಹೇಗೆ ಸಂತೋಷಪಡುತ್ತಾಳೆ ಎಂಬ ತಿರುವಳ್ಳುವರ್ ಅವರ ಕವಿತೆಯನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.
ಜಗತ್ತು ನಿಮ್ಮನ್ನು ಹೊಗಳಿದಾಗ, 'ತಾಯಿ ಭಾರತಿ' ಅದೇ ರೀತಿಯ ಸಂತೋಷವನ್ನು ಅನುಭವಿಸುತ್ತಾಳೆ ಎಂದು ಅವರು ತಿಳಿಸಿದರು.
-
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ












Click it and Unblock the Notifications