ಭಾರತಕ್ಕೆ ಬರುವಂತೆ ಪೋಪ್ ಫ್ರಾನ್ಸಿಸ್ಗೆ ಆಹ್ವಾನವಿತ್ತ ಪ್ರಧಾನಿ ಮೋದಿ
ರೋಮ್, ಅಕ್ಟೋಬರ್ 30: ಜಿ-20 ಶೃಂಗಸಭೆಗಾಗಿ ರೋಮ್ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದರು. ಪೋಪ್ ಫ್ರಾನ್ಸಿಸ್ ಅವರೊಂದಿಗೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿದೆ. ಪೋಪ್ ಫ್ರಾನ್ಸಿಸ್ ಭೇಟಿ ವೇಳೆ ಹವಾಮಾನ ಬದಲಾವಣೆಯ ವಿರುದ್ಧ ಹೋರಾಡುವುದು ಮತ್ತು ಬಡತನವನ್ನು ತೊಡೆದುಹಾಕುವುದು ಸೇರಿದಂತೆ ಗ್ರಹವನ್ನು ಉತ್ತಮಗೊಳಿಸುವ ಗುರಿಯನ್ನು ಹೊಂದಿರುವ ವಿಷಯಗಳ ಕುರಿತು ಪಿಎಂ ಮೋದಿ ಮತ್ತು ಪೋಪ್ ಚರ್ಚಿಸಿದರು. ಜೊತೆಗೆ ಪೋಪ್ ಫ್ರಾನ್ಸಿಸ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ಆಹ್ವಾನ ನೀಡಿದ್ದಾರೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಲು ಪ್ರಧಾನಿ ಮೋದಿ ಜೊತೆಗಿದ್ದರು. ಮೂಲಗಳ ಪ್ರಕಾರ ಕೇವಲ ಇಪ್ಪತ್ತು ನಿಮಿಷಗಳ ಕಾಲ ನಿಗದಿಯಾಗಿದ್ದ ಸಭೆ ಒಂದು ಗಂಟೆ ಕಾಲ ನಡೆಯಿತು.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್, ಜಪಾನ್ನ ಪಿಎಂ ಫುಮಿಯೊ ಕಿಶಿಡಾ, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಮತ್ತು ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಸೇರಿದಂತೆ ಹಲವು ನಾಯಕರು ಈ ಶೃಂಗಸಭೆಗೆ ಗೈರಾಗಲಿದ್ದಾರೆ ಎನ್ನಲಾಗಿದೆ.
|
ಅನಿವಾಸಿ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ
1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಪೋಪ್ ಜಾನ್ ಪಾಲ್ II ಭಾರತಕ್ಕೆ ಬಂದಿದ್ದ ಕೊನೆಯ ಭೇಟಿಯನ್ನು ಇಲ್ಲಿ ಸ್ಮರಿಸಬಹುದು. ಈಗ, ಪ್ರಧಾನಿ ಮೋದಿಯವರ ಅವಧಿಯಲ್ಲಿ ಪೋಪ್ ಅವರನ್ನು ದೇಶಕ್ಕೆ ಭೇಟಿ ನೀಡುವಂತೆ ಆಹ್ವಾನಿಸಲಾಗಿದೆ. ಪ್ರಧಾನಿ ಮೋದಿ ಅವರು ಶುಕ್ರವಾರ ಸಂಜೆ ರೋಮ್ನಲ್ಲಿ ಅನಿವಾಸಿ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಿದರು.

ರೋಮ್ ಮತ್ತು ವ್ಯಾಟಿಕನ್ ನಗರಕ್ಕೆ ಭೇಟಿ
ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅಕ್ಟೋಬರ್ 29 ರಿಂದ 31 ರವರೆಗೆ ವ್ಯಾಟಿಕನ್ ಸಿಟಿಗೆ ಭೇಟಿ ನೀಡುತ್ತಿದ್ದಾರೆ. ಗುರುವಾರದ ನಿರ್ಗಮನ ಹೇಳಿಕೆಯಲ್ಲಿ ಮೋದಿ ಅವರು ಅಕ್ಟೋಬರ್ 29-31 ರವರೆಗೆ ರೋಮ್ ಮತ್ತು ವ್ಯಾಟಿಕನ್ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು. "ನನ್ನ ಇಟಲಿಗೆ ಭೇಟಿಯ ಸಮಯದಲ್ಲಿ, ನಾನು ವ್ಯಾಟಿಕನ್ ನಗರಕ್ಕೆ ಭೇಟಿ ನೀಡುತ್ತೇನೆ, ಅಲ್ಲಿ ಪವಿತ್ರ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡುತ್ತೇನೆ ಮತ್ತು ವಿದೇಶಾಂಗ ಕಾರ್ಯದರ್ಶಿ ಹಿಸ್ ಎಮಿನೆನ್ಸ್ ಕಾರ್ಡಿನಲ್ ಪಿಯೆಟ್ರೋ ಪರೋಲಿನ್ ಅವರನ್ನು ಭೇಟಿ ಮಾಡುತ್ತೇನೆ" ಎಂದು ಮೋದಿ ಹೇಳಿದರು.

16ನೇ ಜಿ20 ನಾಯಕರ ಶೃಂಗಸಭೆ
ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರ ಆಹ್ವಾನದ ಮೇರೆಗೆ ರೋಮ್ನಲ್ಲಿ ನಡೆಯಲಿರುವ 16ನೇ ಜಿ20 ರಾಷ್ಟ್ರಗಳ ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಅವರು ರೋಮ್ನಲ್ಲಿರುವ ವ್ಯಾಟಿಕನ್ ಸಿಟಿಗೂ ಭೇಟಿ, ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಿದ್ದಾರೆ. ರೋಮ್ನಲ್ಲಿ ನಡೆಯಲಿರುವ 16ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆಯಿಂದ ಜಾಗತಿಕ ಆರ್ಥಿಕ ಮತ್ತು ಆರೋಗ್ಯ ಚೇತರಿಕೆ ಬಗ್ಗೆ ಚರ್ಚೆ ನಡೆಸಲಿದ್ದೇನೆ ಎಂದು ತಿಳಿಸಿದ್ದಾರೆ.
Recommended Video

ಹವಾಮಾನ ವೈಪರಿತ್ಯ ಸಮಸ್ಯೆಗೆ ಪರಿಹಾರ
ಜಿ20 ಶೃಂಗಸಭೆಗಾಗಿ ಇಟಲಿಗೆ ಭೇಟಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 31ರವರೆಗೆ ಅಲ್ಲಿಯೇ ಇರಲಿದ್ದಾರೆ. ಈ ವೇಳೆ ವ್ಯಾಟಿಕನ್ ನಗರಕ್ಕೂ ಭೇಟಿ ನೀಡುವರು. ನಂತರ ಅಲ್ಲಿಂದ ಯುಕೆ (ಇಂಗ್ಲೆಂಡ್)ಗೆ ತೆರಳುವರು. ಇನ್ನು ರೋಮ್ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಅವರು, ಕೊರೊನಾ ಸಾಂಕ್ರಾಮಿಕದಿಂದ ಆರೋಗ್ಯ ಚೇತರಿಕೆ ಮತ್ತು ಜಾಗತಿಕ ಆರ್ಥಿಕತೆ ಚೇತರಿಕೆ ಕಾಣುತ್ತಿರುವ ಬಗ್ಗೆ ಮಾತನಾಡಲಿದ್ದಾರೆ. ನಂತರ ಯುಕೆಯ ಗ್ಲಾಸ್ಗೋದಲ್ಲಿ, ಹವಾಮಾನ ವೈಪರಿತ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯತೆಯ ಬಗ್ಗೆ ಸಮಗ್ರವಾಗಿ ಮಾತನಾಡಲಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications