Narendra Modi: ನೀವೆ ಭಾರತದ ರಾಯಭಾರಿಗಳು; ಅಮೆರಿಕದ ಭಾರತೀಯರಿಗೆ ಪ್ರಧಾನಿ ಧನ್ಯವಾದ
ಯುಎಸ್ಗೆ ಮೂರು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಲಾಂಗ್ ಐಲ್ಯಾಂಡ್ನ ನಸ್ಸೌ ಕೊಲಿಜಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮೆರಿಕದಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದರು. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರನ್ನು ಬ್ರಾಂಡ್ ಅಂಬಾಸಿಡರ್ ಗಳು ಎಂದು ಹಾಡಿ ಹೊಗಳಿರುವ ಮೋದಿ, ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಧನ್ಯವಾದ ತಿಳಿಸಿದರು.
ನಸ್ಸೌ ಕೊಲಿಜಿಯಂನಲ್ಲಿ ನಡೆದ ಮಹಾ ಸಮುದಾಯ ಕಾರ್ಯಕ್ರಮದಲ್ಲಿ ಭಾರತೀಯ-ಅಮೆರಿಕನ್ನರನ್ನು ಉದ್ದೇಶಿಸಿ ಮಾತನಾಡಿದರು. ಮೋದಿ ಭಾಷಣ ಆರಂಭಿಸಲು ವೇದಿಕೆ ಮೇಲೆ ಬರುತ್ತಿದ್ದಂತೆ ನೆರೆದಿದ್ದ ಜನ "ಮೋದಿ, ಮೋದಿ" ಎಂದು ಕೂಗುವ ಮೂಲಕ ಸಂತಸ ವ್ಯಕ್ತಪಡಿಸಿದರು.

"ಭಾರತ ಮಾತೆಗೆ ಜೈ" ಎನ್ನುವ ಘೋಷಣೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣವನ್ನು ಆರಂಭಿಸಿದರು. ನಮಸ್ತೆ ಕೂಡ ಸ್ಥಳೀಯತೆಯಿಂದ ಜಾಗತಿಕ ಮಟ್ಟಕ್ಕೆ ಹೋಗಿದೆ ಎನ್ನುವ ಮೂಲಕ, ವಿಶ್ವ ಮಟ್ಟದಲ್ಲಿ ಭಾರತದ ಪ್ರಭಾವ ಹೆಚ್ಚುತ್ತಿದೆ ಎನ್ನುವುದನ್ನು ತಿಳಿಸಿದರು. ಅಲ್ಲದೆ ವಿದೇಶದಲ್ಲಿ ನೆಲೆಸಿರುವ ಭಾರತೀಯರಿಗೆ ಧನ್ಯವಾದ ಹೇಳಿದರು.
ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಯುಎಸ್ನಲ್ಲಿ ತಾವು ಹಿಂದೆ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದ ಕಾರ್ಯಕ್ರಮಗಳನ್ನು ನೆನಒಉ ಮಾಡಿಕೊಂಡರು. ಅವರು 2014ರಲ್ಲಿ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್, 2016ರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಜೋಸ್, 2018 ರಲ್ಲಿ ಹೂಸ್ಟನ್, ಟೆಕ್ಸಾಸ್, 2023 ವಾಷಿಂಗ್ಟನ್ ಮತ್ತು ಈ ಬಾರಿ ಲಾಂಗ್ ಐಲ್ಯಾಂಡ್ನಲ್ಲಿ ಭಾರತೀಯ ಸಮುದಾಯಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಧನ್ಯವಾದ ತಿಳಿಸಿದ ಅವರು, ಇಲ್ಲಿ ನೆಲೆಸಿರುವ ಭಾರತೀಯರು ಎರಡೂ ದೇಶಗಳ ನಡುವೆ ಸೇತುವೆಯಾಗಿದ್ದಾರೆ ಎಂದರು. ಭಾರತ-ಯುಎಸ್ ಸಂಬಂಧವನ್ನು ಬಲಪಡಿಸಲು ಇವರು ಸಹಾಯ ಮಾಡಿದ್ದಾರೆ ಎಂದು ಹೇಳಿದರು. ನೀವೆಲ್ಲರೂ ಏಳು ಸಮುದ್ರಗಳನ್ನು ದಾಟಿ ಬಂದಿದ್ದರೂ, ಭಾರತದ ಪ್ರೀತಿಯನ್ನು ದೂರ ಮಾಡಲು ಸಾಧ್ಯವಿಲ್ಲ ಎಂದರು.
ಭಾರತದ ವಿವಿಧ ಭಾಗದ ಜನ ವಿದೇಶಗಳಲ್ಲಿ ನೆಲೆಸಿರಬಹುದು, ಯುಎಸ್ನಲ್ಲಿ ಕೂಡ ನೆಲೆಸಿದ್ದಾರೆ ಅವರು ಇಲ್ಲಿನ ಪ್ರಜೆಗಳಾಗಿದ್ದಾರೆ ಆದರೆ ನಮ್ಮನ್ನೆಲ್ಲಾ ಒಂದು ಮಾಡುವ ಭಾವನೆ 'ಭಾರತ ಮಾತೆಗೆ ಜೈ' ಘೋಷವಾಕ್ಯ ಎಂದು ಕೂಗಿದರು. ಪ್ರೇಕ್ಷಕರು ಕೂಡ ಜೈ ಎಂದು ಕೂಗುವ ಮೂಲಕ ಸಹಮತ ವ್ಯಕ್ತಪಡಿಸಿದರು.
ನಾವೆಲ್ಲರೂ ಭಾರತೀಯರು ಎನ್ನುವ ಭಾವನೆಯೇ ನಮ್ಮನ್ನು ಒಂದುಗೂಡಿಸುತ್ತದೆ. ಇದೇ ನಮ್ಮ ದೊಡ್ಡ ಶಕ್ತಿಯಾಗಿದೆ ಎಂದರು. ಯುಎಸ್ನಲ್ಲಿ ನೆಲೆಸಿರುವ ಭಾರತೀಯರನ್ನು ರಾಯಭಾರಿಗಳು ಎಂದು ಕರೆದ ಪ್ರಧಾನಿ ನರೇಂದ್ರ ಮೋದಿ, ಭಾರತವು ಈಗ ಗಳಿಸಿರುವ ಗೌರವಕ್ಕೆ ಯುಎಸ್ನಲ್ಲಿರುವ ಭಾರತೀಯ ಸಮುದಾಯಕ್ಕೆ ಧನ್ಯವಾದ ತಿಳಿಸಿದರು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ












Click it and Unblock the Notifications