Narendra Modi: ನೀವೆ ಭಾರತದ ರಾಯಭಾರಿಗಳು; ಅಮೆರಿಕದ ಭಾರತೀಯರಿಗೆ ಪ್ರಧಾನಿ ಧನ್ಯವಾದ
ಯುಎಸ್ಗೆ ಮೂರು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಲಾಂಗ್ ಐಲ್ಯಾಂಡ್ನ ನಸ್ಸೌ ಕೊಲಿಜಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮೆರಿಕದಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದರು. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರನ್ನು ಬ್ರಾಂಡ್ ಅಂಬಾಸಿಡರ್ ಗಳು ಎಂದು ಹಾಡಿ ಹೊಗಳಿರುವ ಮೋದಿ, ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಧನ್ಯವಾದ ತಿಳಿಸಿದರು.
ನಸ್ಸೌ ಕೊಲಿಜಿಯಂನಲ್ಲಿ ನಡೆದ ಮಹಾ ಸಮುದಾಯ ಕಾರ್ಯಕ್ರಮದಲ್ಲಿ ಭಾರತೀಯ-ಅಮೆರಿಕನ್ನರನ್ನು ಉದ್ದೇಶಿಸಿ ಮಾತನಾಡಿದರು. ಮೋದಿ ಭಾಷಣ ಆರಂಭಿಸಲು ವೇದಿಕೆ ಮೇಲೆ ಬರುತ್ತಿದ್ದಂತೆ ನೆರೆದಿದ್ದ ಜನ "ಮೋದಿ, ಮೋದಿ" ಎಂದು ಕೂಗುವ ಮೂಲಕ ಸಂತಸ ವ್ಯಕ್ತಪಡಿಸಿದರು.

"ಭಾರತ ಮಾತೆಗೆ ಜೈ" ಎನ್ನುವ ಘೋಷಣೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣವನ್ನು ಆರಂಭಿಸಿದರು. ನಮಸ್ತೆ ಕೂಡ ಸ್ಥಳೀಯತೆಯಿಂದ ಜಾಗತಿಕ ಮಟ್ಟಕ್ಕೆ ಹೋಗಿದೆ ಎನ್ನುವ ಮೂಲಕ, ವಿಶ್ವ ಮಟ್ಟದಲ್ಲಿ ಭಾರತದ ಪ್ರಭಾವ ಹೆಚ್ಚುತ್ತಿದೆ ಎನ್ನುವುದನ್ನು ತಿಳಿಸಿದರು. ಅಲ್ಲದೆ ವಿದೇಶದಲ್ಲಿ ನೆಲೆಸಿರುವ ಭಾರತೀಯರಿಗೆ ಧನ್ಯವಾದ ಹೇಳಿದರು.
ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಯುಎಸ್ನಲ್ಲಿ ತಾವು ಹಿಂದೆ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದ ಕಾರ್ಯಕ್ರಮಗಳನ್ನು ನೆನಒಉ ಮಾಡಿಕೊಂಡರು. ಅವರು 2014ರಲ್ಲಿ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್, 2016ರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಜೋಸ್, 2018 ರಲ್ಲಿ ಹೂಸ್ಟನ್, ಟೆಕ್ಸಾಸ್, 2023 ವಾಷಿಂಗ್ಟನ್ ಮತ್ತು ಈ ಬಾರಿ ಲಾಂಗ್ ಐಲ್ಯಾಂಡ್ನಲ್ಲಿ ಭಾರತೀಯ ಸಮುದಾಯಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಧನ್ಯವಾದ ತಿಳಿಸಿದ ಅವರು, ಇಲ್ಲಿ ನೆಲೆಸಿರುವ ಭಾರತೀಯರು ಎರಡೂ ದೇಶಗಳ ನಡುವೆ ಸೇತುವೆಯಾಗಿದ್ದಾರೆ ಎಂದರು. ಭಾರತ-ಯುಎಸ್ ಸಂಬಂಧವನ್ನು ಬಲಪಡಿಸಲು ಇವರು ಸಹಾಯ ಮಾಡಿದ್ದಾರೆ ಎಂದು ಹೇಳಿದರು. ನೀವೆಲ್ಲರೂ ಏಳು ಸಮುದ್ರಗಳನ್ನು ದಾಟಿ ಬಂದಿದ್ದರೂ, ಭಾರತದ ಪ್ರೀತಿಯನ್ನು ದೂರ ಮಾಡಲು ಸಾಧ್ಯವಿಲ್ಲ ಎಂದರು.
ಭಾರತದ ವಿವಿಧ ಭಾಗದ ಜನ ವಿದೇಶಗಳಲ್ಲಿ ನೆಲೆಸಿರಬಹುದು, ಯುಎಸ್ನಲ್ಲಿ ಕೂಡ ನೆಲೆಸಿದ್ದಾರೆ ಅವರು ಇಲ್ಲಿನ ಪ್ರಜೆಗಳಾಗಿದ್ದಾರೆ ಆದರೆ ನಮ್ಮನ್ನೆಲ್ಲಾ ಒಂದು ಮಾಡುವ ಭಾವನೆ 'ಭಾರತ ಮಾತೆಗೆ ಜೈ' ಘೋಷವಾಕ್ಯ ಎಂದು ಕೂಗಿದರು. ಪ್ರೇಕ್ಷಕರು ಕೂಡ ಜೈ ಎಂದು ಕೂಗುವ ಮೂಲಕ ಸಹಮತ ವ್ಯಕ್ತಪಡಿಸಿದರು.
ನಾವೆಲ್ಲರೂ ಭಾರತೀಯರು ಎನ್ನುವ ಭಾವನೆಯೇ ನಮ್ಮನ್ನು ಒಂದುಗೂಡಿಸುತ್ತದೆ. ಇದೇ ನಮ್ಮ ದೊಡ್ಡ ಶಕ್ತಿಯಾಗಿದೆ ಎಂದರು. ಯುಎಸ್ನಲ್ಲಿ ನೆಲೆಸಿರುವ ಭಾರತೀಯರನ್ನು ರಾಯಭಾರಿಗಳು ಎಂದು ಕರೆದ ಪ್ರಧಾನಿ ನರೇಂದ್ರ ಮೋದಿ, ಭಾರತವು ಈಗ ಗಳಿಸಿರುವ ಗೌರವಕ್ಕೆ ಯುಎಸ್ನಲ್ಲಿರುವ ಭಾರತೀಯ ಸಮುದಾಯಕ್ಕೆ ಧನ್ಯವಾದ ತಿಳಿಸಿದರು.
-
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
Gold Price: ಸತತ 2ನೇ ದಿನವು ಬಂಗಾರದ ಬೆಲೆ ಭಾರೀ ಏರಿಕೆ, ದಾಖಲೆ ಬರೆದ ಬೆಳ್ಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications