ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ, ಇಂದು ಫ್ರಾನ್ಸ್ ಭೇಟಿ
ಕೋಪನ್ ಹೇಗನ್ ಮೇ 04: 3 ದಿನಗಳ ಯುರೋಪ್ ಪ್ರವಾಸದ ಅಂತಿಮ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಡೆನ್ಮಾರ್ಕ್ನಲ್ಲಿ ನಡೆಯಲಿರುವ ಎರಡನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ನೂತನವಾಗಿ ಮರು ಚುನಾಯಿತರಾದ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಲು ಪ್ಯಾರಿಸ್ಗೆ ತೆರಳಲಿದ್ದಾರೆ.
ಎರಡನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಡೆನ್ಮಾರ್ಕ್, ಐಸ್ಲ್ಯಾಂಡ್, ಫಿನ್ಲ್ಯಾಂಡ್, ಸ್ವೀಡನ್ ಮತ್ತು ನಾರ್ವೆಯ ಪ್ರಧಾನ ಮಂತ್ರಿಗಳು ಭಾಗವಹಿಸಲಿದ್ದಾರೆ. 2018 ರಲ್ಲಿ ಸ್ವೀಡನ್ನ ಸ್ಟಾಕ್ಹೋಮ್ನಲ್ಲಿ ಭಾರತ-ನಾರ್ಡಿಕ್ ಮೊದಲ ಶೃಂಗಸಭೆಯನ್ನು ನಡೆಸಲಾಗಿತ್ತು.
ಭಾರತ-ನಾರ್ಡಿಕ್ ಶೃಂಗಸಭೆ: ಕಾರ್ಯಸೂಚಿಯಲ್ಲಿ ಏನಿದೆ
ಡೆನ್ಮಾರ್ಕ್ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಾಂಕ್ರಾಮಿಕ ನಂತರದ ಆರ್ಥಿಕ ಚೇತರಿಕೆ, ಹವಾಮಾನ ಬದಲಾವಣೆ, ತಂತ್ರಜ್ಞಾನ, ನವೀಕರಿಸಬಹುದಾದ ಇಂಧನ, ವಿಕಸನಗೊಳ್ಳುತ್ತಿರುವ ಜಾಗತಿಕ ಭದ್ರತಾ ಸನ್ನಿವೇಶ ಮತ್ತು ಆರ್ಕ್ಟಿಕ್ ಪ್ರದೇಶದಲ್ಲಿ ಭಾರತ-ನಾರ್ಡಿಕ್ ಸಹಕಾರದಂತಹ ವಿಷಯಗಳ ಮೇಲೆ ಶೃಂಗಸಭೆಯು ಗಮನಹರಿಸುತ್ತದೆ.

ಭಾರತವು ನಾರ್ಡಿಕ್ ದೇಶಗಳೊಂದಿಗೆ ಬಿಲಿಯನ್ ಡಾಲರ್ ವಾಣಿಜ್ಯ ವಹಿವಾಟು ಹೊಂದಿದೆ. ಭಾರತವು ಯುರೋಪಿಯನ್ ಒಕ್ಕೂಟದೊಂದಿಗೆ ಪ್ರಮುಖ ವ್ಯಾಪಾರ ಸಂಬಂಧಗಳನ್ನು ಹೊಂದಿದೆ. 2020 ರಲ್ಲಿ, ಯುರೋಪಿಯನ್ ಒಕ್ಕೂಟದೊಂದಿಗೆ ಸುಮಾರು 66.6 ಮಿಲಿಯನ್ ಡಾಲರ್ನಷ್ಟು ವಾಣಿಜ್ಯ ಸಂಬಂಧ ಹೊಂದಿದೆ.
ಇಂದು ಪ್ರಧಾನಿ ಮೋದಿ, ಮ್ಯಾಕ್ರನ್ ಭೇಟಿ
ಡೆನ್ಮಾರ್ಕ್ ಶೃಂಗಸಭೆಯ ನಂತರ ಫ್ರಾನ್ಸ್ನ ಹೊಸದಾಗಿ ಮರು ಆಯ್ಕೆಯಾದ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗಿನ ಸಭೆಗಾಗಿ ಪಿಎಂ ಮೋದಿ ಪ್ಯಾರಿಸ್ನಲ್ಲಿ ಸ್ವಲ್ಪ ಸಮಯ ಕಳೆಯಲು ನಿರ್ಧರಿಸಿದ್ದಾರೆ. ಸೋಮವಾರ ಬರ್ಲಿನ್ಗೆ ಆಗಮಿಸಿದ ಪ್ರಧಾನಿ ಮೋದಿ ಅವರು ಆರನೇ ಭಾರತ-ಜರ್ಮನಿ ಅಂತರ ಸರ್ಕಾರಿ ಸಮಾಲೋಚನೆಯಲ್ಲಿ ಭಾಗವಹಿಸುವ ಮೊದಲು ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಿದರು.

ಡೆನ್ಮಾರ್ಕ್ ರಾಣಿ ಮಾರ್ಗರೆಥೆ II ಮಂಗಳವಾರ ಕೋಪನ್ ಹ್ಯಾಗನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಆತ್ಮೀಯ ಸ್ವಾಗತವನ್ನು ಕೋರಿದರು. ರಾಣಿಯ ಆಳ್ವಿಕೆಯ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ. 82 ವರ್ಷ ವಯಸ್ಸಿನ ರಾಣಿ 1972 ರಿಂದ ಡೆನ್ಮಾರ್ಕ್ನ ಆಳ್ವಿಕೆಯ ರಾಣಿಯಾಗಿದ್ದಾರೆ. ಡ್ಯಾನಿಶ್ ರಾಜಪ್ರಭುತ್ವವು ವಿಶ್ವದ ಅತ್ಯಂತ ಹಳೆಯದಾಗಿದೆ.
-
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ












Click it and Unblock the Notifications