ಮೋದಿ, ಜಿನ್ಪಿಂಗ್ ಜವಾಬ್ದಾರಿಯುತ ನಾಯಕರು ಚೀನಾ-ಭಾರತ ಸಮಸ್ಯೆ ಪರಿಹರಿಸಬಹುದು: ರಷ್ಯಾ ಅಧ್ಯಕ್ಷ
ಮಾಸ್ಕೋ, ಜೂ. 05: ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಇಬ್ಬರೂ "ಜವಾಬ್ದಾರಿಯುತ" ನಾಯಕರು ಎಂದು ಪ್ರತಿಪಾದಿಸಿರುವ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಉಭಯ ದೇಶಗಳ ನಡುವಿನ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಈ ಇಬ್ಬರು ನಾಯಕರು ಸಮರ್ಥರಾಗಿದ್ದಾರೆ ಎಂದು ಹೇಳಿದ್ದಾರೆ.
ಭಾರತ, ಯುಎಸ್, ಜಪಾನ್ ಮತ್ತು ಆಸ್ಟ್ರೇಲಿಯಾ ನಾಲ್ಕು ರಾಷ್ಟ್ರಗಳ ಕ್ವಾಡ್ ಅನ್ನು ರಷ್ಯಾ ಸಾರ್ವಜನಿಕವಾಗಿ ಟೀಕಿಸುವುದರ ಬಗ್ಗೆ ಪಿಟಿಐಗೆ ಪ್ರತಿಕ್ರಿಯಿಸಿದ ರಷ್ಯಾ ಅಧ್ಯಕ್ಷ ಪುಟಿನ್, ಯಾವುದೇ ರಾಷ್ಟ್ರವು ಹೇಗೆ ಭಾಗವಹಿಸಬೇಕು ಹಾಗೂ ಎಷ್ಟರ ಮಟ್ಟಿಗೆ ಭಾಗವಹಿಸಬೇಕು ಎಂಬುದನ್ನು ನಿರ್ಣಯಿಸುವುದು ಮಾಸ್ಕೋಗೆ ಬಿಟ್ಟ ವಿಚಾರವಲ್ಲ. ಎಲ್ಲಾ ದೇಶಗಳು ಇತರ ದೇಶಗಳೊಂದಿಗೆ ತಮ್ಮ ಸಂಬಂಧವನ್ನು ಬೆಳೆಸಿಕೊಳ್ಳಬೇಕು. ಆದರೆ ಯಾವುದೇ ಸಹಭಾಗಿತ್ವವು ಬೇರೆ ಯಾರ ವಿರುದ್ದವೂ ಗುರಿಯಾಗಿಸಿಕೊಂಡು ಮಾಡಿರಬಾರದು ಎಂದು ಹೇಳಿದ್ದಾರೆ.
ಭಾರತದೊಂದಿಗೆ ರಷ್ಯಾದ ಪಾಲುದಾರಿಕೆ ಮತ್ತು ಮಾಸ್ಕೋ ಮತ್ತು ಬೀಜಿಂಗ್ ನಡುವಿನ ಸಂಬಂಧಗಳಲ್ಲಿ ಯಾವುದೇ "ವಿರೋಧಾಭಾಸಗಳು" ಇಲ್ಲ ಎಂದು ಕೂಡಾ ಈ ಸಂದರ್ಭದಲ್ಲೇ ತಿಳಿಸಿದ್ದಾರೆ.

"ಹೌದು, ಭಾರತ ಚೀನಾ ಸಂಬಂಧಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳಿವೆ ಎಂದು ನನಗೆ ತಿಳಿದಿದೆ. ನೆರೆಯ ರಾಷ್ಟ್ರಗಳ ನಡುವೆ ಯಾವಾಗಲೂ ಬಹಳಷ್ಟು ಸಮಸ್ಯೆಗಳಿರುತ್ತದೆ. ಆದರೆ ನನಗೆ ಭಾರತದ ಪ್ರಧಾನಿ ಮತ್ತು ಚೀನಾ ಅಧ್ಯಕ್ಷರ ಮನೋಭಾವ ನನಗೆ ತಿಳಿದಿದೆ ಎಂದಿದ್ದಾರೆ.
ಇವರಿಬ್ಬರೂ ಬಹಳ ಜವಾಬ್ದಾರಿಯುತ ನಾಯಕರು. ಒಬ್ಬರಿಗೊಬ್ಬರು ಅತ್ಯಂತ ಗೌರವದಿಂದ ವರ್ತಿಸುತ್ತಾರೆ. ಇಬ್ಬರೂ ನಾಯಕರು ಕೂಡಾ ಎದುರಿಸಬಹುದಾದ ಯಾವುದೇ ಸಮಸ್ಯೆಗೆ ಯಾವಾಗಲೂ ಪರಿಹಾರವನ್ನು ಕಂಡುಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು ಈ ವೇಳೆಯೇ "ಆದರೆ ಬೇರೆ ಯಾವುದೇ ಪ್ರಾದೇಶಿಕ ಶಕ್ತಿಗಳು ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡದಿರುವುದು ಬಹಳ ಮುಖ್ಯ" ಎಂದು ಕೂಡಾ ಹೇಳಿದ್ದಾರೆ.

2020 ರ ಮೇ 5 ರಂದು ಪೂರ್ವ ಲಡಾಖ್ನಲ್ಲಿ ಚೀನಾ ಮತ್ತು ಭಾರತದ ನಡುವೆ ಮಿಲಿಟರಿ ಸಂಘರ್ಷ ಸ್ಫೋಟಗೊಂಡಿದ್ದು ಒಂದು ವರ್ಷಕ್ಕೂ ಹೆಚ್ಚು ಕಾಲವಾಗಿದೆ. 45 ವರ್ಷಗಳಲ್ಲಿ ಮೊದಲ ಬಾರಿಗೆ ಎರಡೂ ಕಡೆಗಳಲ್ಲಿ ಸಾವುನೋವುಗಳು ಸಂಭವಿಸಿವೆ. ಬಳಿಕ ಹಲವಾರು ಬಾರಿ ಉಭಯ ರಾಷ್ಟ್ರದ ನಾಯಕರು ಮಾತುಕತೆ ನಡೆಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications