ಪ್ರಧಾನಿ ಮೋದಿಯನ್ನು ಸ್ವಾಗತಿಸಲಿರುವ ಬ್ರೂನಿ ಸುಲ್ತಾನ: 7000 ಕಾರುಗಳು, ಚಿನ್ನದ ಅರಮನೆ ಒಡೆಯನ ಆಸ್ತಿ ಎಷ್ಟು?
ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದು, ಇಂದು ಬ್ರೂನಿಗೆ ತೆರಳಲಿದ್ದಾರೆ. ಆಗ್ನೇಯ ಏಷ್ಯಾದ ದೇಶವೊಂದಕ್ಕೆ ಭೇಟಿ ನೀಡುತ್ತಿರುವ ಭಾರತದ ಮೊಲದ ಪ್ರಧಾನ ಮಂತ್ರಿ ಎನ್ನುವ ಹೆಗ್ಗಳಿಕೆ ನರೇಂದ್ರ ಮೋದಿಯವರದ್ದಾಗಿದೆ. ಇದು ಎರಡು ದಿನಗಳ ಭೇಟಿಯಾಗಿದ್ದು, ಭಾರತ- ಬ್ರೂನಿ ನಡುವೆ ಬಾಂಧವ್ಯ ಬಲಪಡಿಸುವ ಗುರಿಯನ್ನು ಹೊಂದಲಾಗಿದೆ. ಪ್ರಧಾನಿ ಮೋದಿಯನ್ನು ಬ್ರೂನಿಯ ಸುಲ್ತಾನ ಸ್ವಾಗತಿಸಲು ಸಜ್ಜಾಗಿದ್ದಾರೆ.
ಬ್ರಿಟನ್ ರಾಣಿ ಎಲಿಜಬೆತ್ II ಬಳಿಕ ವಿಶ್ವದ ಎರಡನೇ ಅತಿ ಧೀರ್ಘಾವಧಿಯವರೆಗೆ ಬ್ರೂನಿ ದೇಶದ ದೊರೆಯಾಗಿರುವ ಸುಲ್ತಾನ್ ಹಸನಲ್ ಬೊಲ್ಕಿಯಾ, ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಹಿನಲ್ಲೆಯಲ್ಲಿ ಮೋದಿ ಪ್ರವಾಸ ಕೈಗೊಂಡಿದ್ದಾರೆ.

ಬ್ರೂನಿ ದೊರೆಯ ಐಷಾರಾಮಿ ಜೀವನ
ಬ್ರೂನಿ ದೊರೆ ಹಸನಲ್ ಬೊಲ್ಕಿಯಾ ತಮ್ಮ ಐಷಾರಾಮಿ ಜೀವನದ ಮೂಲಕ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ತಮ್ಮ ಶ್ರೀಮಂತಿಕೆ ಅತಿರಂಜಿತ ಜೀವನ ಶೈಲಿಗೆ ಹೆಸರಾಗಿದ್ದಾರೆ. ಹಸನಲ್ ಬಳಿ ಇರುವ ಕಾರುಗಳ ಒಟ್ಟಾರೆ ಮೌಲವ್ಯವೇ $5 ಬಿಲಿಯನ್ ಎಂದು ಅಂದಾಜಿಸಲಾಗಿದೆ. ವಿಶ್ವದಲ್ಲೇ ಅತಿ ಹೆಚ್ಚು ಖಾಸಗಿ ಕಾರುಗಳನ್ನು ಹೊಂದಿರುವ ವ್ಯಕ್ತಿ ಹಸನಲ್ ಬೊಲ್ಕಿಯಾ.
ಹಸನಲ್ ಬೊಲ್ಕಿಯಾ ನಿವ್ವಳ ಮೌಲ್ಯ $30 ಬಿಲಿಯನ್ ಎಂದು ಅಂದಾಜಿಸಲಾಗಿದೆ. ತೈಲ ಮತ್ತು ಅನಿಲ ನಿಕ್ಷೇಪಗಳು ಅವರ ಪ್ರಮುಖ ಆದಾಯದ ಮೂಲಗಳಾಗಿವೆ. ಬ್ರೂನಿ ದೊರೆ ಬಳಿ 7000 ಐಷಾರಾಮಿ ಕಾರುಗಳಿವೆ, ಇದರಲ್ಲಿ 600 ರೋಲ್ಸ್ ರಾಯ್ಸ್ ಕಾರುಗಳಿದ್ದು, ಅತಿ ಹೆಚ್ಚು ರೋಲ್ಸ್ ರಾಯ್ಸ್ ಕಾರು ಹೊಂದಿರುವ ಗಿನ್ನೆಸ್ ದಾಖಲೆ ಕೂಡ ಅವರ ಹೆಸರಿನಲ್ಲಿದೆ.
ವರದಿಗಳ ಪ್ರಕಾರ, ಅವರ ಬಳಿ ಸುಮಾರು 450 ಫೆರಾರಿ ಕಾರುಗಳಲ್ಲಿ 380 ಬೆಂಟ್ಲೆ ಕಾರುಗಳಿವೆ. ಕಾರ್ಬಜ್ ಮತ್ತು ದಿ ಸೌತ್ ಚೈನಾ ಮಾರ್ನಿಂಗ್ ಪೋಸ್ಟ್ ಸೇರಿದಂತೆ ಆಟೋಮೋಟಿವ್ ಮೂಲಗಳ ಪ್ರಕಾರ ಅವರು ಪೋರ್ಷೆ, ಲಂಬೋರ್ಘಿನಿಸ್, ಮೇಬ್ಯಾಕ್ಸ್, ಜಾಗ್ವಾರ್, ಬಿಎಂಡಬ್ಲ್ಯುಗಳು ಮತ್ತು ಮೆಕ್ಲಾರೆನ್ ನಂತಹ ಐಷಾರಾಮಿ ಕಾರುಗಳನ್ನು ಕೂಡ ಹೊಂದಿದ್ದಾರೆ.
-
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ












Click it and Unblock the Notifications