Narendra Modi: ಜೆಡಿ ವ್ಯಾನ್ಸ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಪ್ಯಾರಿಸ್ನಲ್ಲಿ ನಡೆದ ಎಐ ಆಕ್ಷನ್ ಶೃಂಗಸಭೆಯಲ್ಲಿ ಭಾಗವಹಿಸಿದ್ದ ವಿಶ್ವ ನಾಯಕರಿಗೆ ಏರ್ಪಡಿಸಿದ್ದ ಭೋಜನಕೂಟದಲ್ಲಿ ಭಾಗವಹಸಿಇದ್ದರು. ಈ ಸಂದರ್ಭದಲ್ಲಿ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರನ್ನು ಭೇಟಿ ಮಾಡಿದ್ದಾರೆ. ಮೋದಿ ಯುಎಸ್ಗೆ ಭೇಟಿ ನೀಡುವ ಮೊದಲು ಟ್ರಂಪ್ ಸರ್ಕಾರದ ಸದಸ್ಯರೊಬ್ಬರ ಜೊತೆ ಇದು ಮೊದಲನೇ ಭೇಟಿಯಾಗಿದೆ.
ಫ್ರಾನ್ಸ್ ಅಧ್ಯಕ್ಷ ಎಮನ್ಯಾನುಯೆಲ್ ಮ್ಯಾಕ್ರನ್ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹಂಚಿಕೊಂಡಿದ್ದು, ಸೋಮವಾರ ರಾತ್ರಿ ಎಲಿಸೀ ಅರಮನೆಯಲ್ಲಿ ನರೇಂದ್ರ ಮೋದಿ ಅವರು ವ್ಯಾನ್ಸ್ ಅವರ ಜೊತೆ ಹಸ್ತಲಾಘವ ಮಾಡುತ್ತಿರುವುದನ್ನು ನೋಡಬಹುದು. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಅಭಿನಂದನೆಗಳು, ಇದು ಅದ್ಭುತ ಗೆಲುವು ಎಂದು ನರೇಂದ್ರ ಮೋದಿ ಹೇಳಿದ್ದು ಇದಕ್ಕೆ ಪ್ರತಿಕ್ರಿಯೆ ನೀಡಿದ ವ್ಯಾನ್ಸ್ ತುಂಬಾ ಧನ್ಯವಾದಗಳು, ನಿಮ್ಮನ್ನು ನೋಡಲು ತುಂಬಾ ಖುಷಿಯಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಮೋದಿ ವಾದಕ್ಕೆ ವ್ಯಾನ್ಸ್ ಒಪ್ಪಿಗೆ
ಎಐ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡುವಾಗ, ಎಐನಂತಹ ತಂತ್ರಜ್ಞಾನಗಳು ಮನುಷ್ಯರನ್ನು ಬದಲಾಯಿಸಲು ಸಾಧ್ಯವಿಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ವಾದವನ್ನು ವ್ಯಾನ್ಸ್ ಒಪ್ಪಿಕೊಂಡಿದ್ದಾರೆ. ಎಐನಿಂದ ಎಲ್ಲರೂ ಕೆಲಸ ಕಳೆದುಕೊಳ್ಳುತ್ತಾರೆ ಎನ್ನುವ ವಾದವನ್ನು ನಿರಾಕರಿಸಿದ ಮೋದಿ, ತಂತ್ರಜ್ಞಾನದಿಂದ ಕೆಲಸ ಹೋಗುವುದಿಲ್ಲ ಎಂದು ಇತಿಹಾಸ ಹೇಳಿದೆ ಎಂದರು.
ಕೆಲಸದ ಸ್ವರೂಪಗಳು ಬದಲಾವಣೆಯಾಗಲಿದ್ದೆ, ಹೊಸ ರೀತಿಯ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಎಐ ಆಧರಿತ ಭವಿಷ್ಯಕ್ಕಾಗಿ ನಾವು ನಮ್ಮ ಜನರ ಮತ್ತು ಮರು-ಕೌಶಲ್ಯದಲ್ಲಿ ಹೂಡಿಕೆ ಮಾಡಬೇಕು ಎಂದು ನರೇಂದ್ರ ಮೋದಿ ಹೇಳಿದರು.
ನರೇಂದ್ರ ಮೋದಿ ಬಳಿಕ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ವ್ಯಾನ್ಸ್, ಎಐ ಜನರ ಕೆಲಸವನ್ನು ಸುಲಭವಾಗಿಸುತ್ತದೆ. ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಶ್ಲಾಘಿಸುತ್ತೇನೆ ಎಂದರು.
ಎಐ ತಂತ್ರಜ್ಞಾನದಿಂದ ಮನುಷ್ಯರ ಕೆಲಸ ಬದಲಾಗುವುದಿಲ್ಲ, ಅದು ಎಂದಿಗೂ ಮನುಷ್ಯರ ಕೆಲಸವನ್ನು ಕಿತ್ತುಕೊಳ್ಳಲು ಆಗಲ್ಲ. ಎಐ ನಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ, ಹೆಚ್ಚು ಸಮೃದ್ಧವಾಗಿಸುತ್ತದೆ ಎಂದು ನಾವು ನಂಬುತ್ತೇವೆ ಎಂದು ಹೇಳಿದರು.
ಮಂಗಳವಾರ ನರೇಂದ್ರ ಮೋದಿ ಮತ್ತು ಮ್ಯಾಕ್ರನ್ ಸಹ-ಅಧ್ಯಕ್ಷತೆಯಲ್ಲಿ ನಡೆದ ಎಐ ಆಕ್ಷನ್ ಶೃಂಗಸಭೆಯಲ್ಲಿ ಭಾಗವಹಿಸಿದ ವಿಶ್ವ ನಾಯಕರಲ್ಲಿ ಚೀನಾದ ಉಪಾಧ್ಯಕ್ಷ ಜಾಂಗ್ ಗುವೊಕಿಂಗ್, ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಕೂಡ ಸೇರಿದ್ದಾರೆ.
-
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications