ಸಿಂಗಪುರದಲ್ಲಿ ನರೇಂದ್ರ ಮೋದಿ ಭಾಷಣದ ಜಾದೂ
ಸಿಂಗಪುರ, ನವೆಂಬರ್, 24: ನರೇಂದ್ರ ಮೋದಿ ಸಿಂಗಪುರದಲ್ಲೂ ತಮ್ಮ ಜಾದೂ ತೋರಿಸಿದ್ದಾರೆ. ಮಂಗಳವಾರ ಸಂಜೆ ಭಾರತೀಯ ಮೂಲದ ಸಿಂಗಪುರ ನಿವಾಸಿಗಳನ್ನು ಉದ್ದೇಶಿಸಿ ಮಾಡಿದ ಸುದೀರ್ಘ ಭಾಷಣದಲ್ಲಿ ಹೂಡಿಕೆ, ಮೇಕ್ ಇನ್ ಇಂಡಿಯಾ, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ಸೇರಿದಂತೆ ನೂರಾರು ವಿಚಾರಗಳನ್ನು ಮುಂದಿಟ್ಟರು.
ಸಿಂಗಪುರದ ಪ್ರಧಾನಿ ಲೀ ಸೀನ್ ಲೂಂಗ್ ಅವರನ್ನು ಭೇಟಿ ಮಾಡಿ10 ಪ್ರಮುಖ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಸಹ ಮಾಡಿದ್ದಾರೆ. ಭಾರತ ಮತ್ತು ಸಿಂಗಪುರದ ನಡುವೆ ಪ್ರಮುಖವಾಗಿ ರಕ್ಷಣಾ ಕ್ಷೇತ್ರ, ಸೈಬರ್ ಭದ್ರತೆ, ನೌಕಾಯಾನ, ನಾಗರಿಕ ವಿಮಾನಯಾನ ಸೇರಿದಂತೆ ಹಲವು ಪ್ರಮುಖ ಒಪ್ಪಂದಗಳಿಗೆ ಉಭಯ ದೇಶದ ನಾಯಕರು ಸಹಿ ಮಾಡಿದ್ದಾರೆ.[ನಗರ ಸ್ವಚ್ಛವಾಗಿಡಿ.. ಇಲ್ಲದಿದ್ದರೆ ಇವನಿಗಾದಂತೆ ಆದೀತು!]

ನರೇಂದ್ರ ಮೋದಿ ಸಿಂಗಪುರ ಭಾಷಣದ ಹೈಲೈಟ್ಸ್
* ಉತ್ತಮ ಆಡಳಿತದಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಸಿಂಗಪುರ ಹೂಡಿಕೆಗೆ ಅತ್ಯುತ್ತಮ ದೇಶವಾಗಿದೆ. ನೀವೂ ನಮ್ಮಲ್ಲಿಗೆ (ಭಾರತಕ್ಕೆ) ಬನ್ನಿ ಬಂಡವಾಳ ಹೂಡಿ.
* ಭಾರತ ಶಕ್ತಿಶಾಲಿ ರಾಷ್ಟ್ರ, ಉತ್ತಮ ಗುಣಮಟ್ಟದ ಮಾನವ ಸಂಪನ್ಮೂಲ ಹೊಂದಿದೆ. ಆದರೆ ಸಿಂಗಪುರದಿಂದ ಕಲಿಯುವುದು ಬಹಳಷ್ಟಿದೆ.
* ಗಾಂಧೀಜಿ ಸ್ವಾತಂತ್ರ್ಯ ಬೇಕೋ ಸ್ವಚ್ಛತೆಯೋ ಎಂದು ಕೇಳಿದ್ದರೆ ಸ್ವಚ್ಛತೆ ಎಂದಿದ್ದರು, ಅದರಂತೆ ನಾವೆಲ್ಲ ನಡೆದುಕೊಳ್ಳಬೇಕಾಗಿದೆ.
* ಪ್ರಪಂಚವನ್ನು ನಾವು ಬೇರೆಯ ಕಣ್ಣಿನಿಂದ ನೋಡಬೇಕಾಗಿದೆ. [ಮೋದಿ ಆರಂಭಿಸಿದ ಚಿನ್ನ ಠೇವಣಿ ಯೋಜನೆ ಟುಸ್!]
* ನಾವೆಲ್ಲರೂ ಪ್ರಪಂಚದ ಒಂದು ಭಾಗ, ಅದರ ಬದಲಾವಣೆಯೊಂದಿಗೆ ಹೊಂದಿಕೊಂಡು ಹೋಗಬೇಕು. 2020 ರವೇಳೆಗೆ ಇಡೀ ಭಾರತದಲ್ಲಿ 24 ಗಂಟೆ ವಿದ್ಯುತ್ ಇರಲಿದೆ.
* ಪರಿಸರದಲ್ಲಿ ದೇವರನ್ನು ಕಂಡು ದೇಶ ನಮ್ಮದು.ಭಯೋತ್ಪಾದನೆ ಮೆಟ್ಟಿ ನಿಲ್ಲಲು ಎಲ್ಲರೂ ಒಂದಾಗಬೇಕಿರುವುದು ಇಂದಿನ ಅಗತ್ಯ.
* ದೇಶದ ಅಭಿವೃದ್ಧಿಯೊಂದೇ ನನ್ನ ಗುರಿ. ಅದಕ್ಕಾಗಿಯೇ ಎಲ್ಲ ಬಗೆಯ ಹೊಸ ಚಿಂತನೆಗಳನ್ನು ಮಾಡಬೇಕು, ಅಳವಡಿಸಿಕೊಳ್ಳಬೇಕು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications