ಸ್ಯಾನ್ ಹೋಸೆಯಲ್ಲಿ ಮೊಬೈಲ್ ಆಡಳಿತದ ಕನಸು ಬಿಚ್ಚಿಟ್ಟ ಮೋದಿ
ಸ್ಯಾನ್ ಹೋಸೆ, ಸೆಪ್ಟೆಂಬರ್ 28 : ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸ್ಯಾನ್ ಹೋಸೆಯಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಮ್ಯಾಡಿಸನ್ ಸ್ಕ್ವೇರ್ನಲ್ಲಿ ನಡೆದ ಮಾದರಿಯಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. [ಚಿತ್ರಗಳು : ಮೋದಿ ಅಮೆರಿಕ ಭೇಟಿ]
ಸ್ಯಾನ್ ಹೋಸೆಯ ಎಸ್ಎಪಿ ಸೆಂಟರ್ನಲ್ಲಿ ಮೋದಿ ಭಾರತೀಯರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಸುಮಾರು 18 ಸಾವಿರಕ್ಕೂ ಅಧಿಕ ಭಾರತೀಯರು ಮೋದಿ ಭಾಷಣ ಕೇಳಲು ಆಗಮಿಸಿದ್ದಾರೆ. ಪ್ರಧಾನಿ ಮೋದಿ ವೇದಿಕೆಗೆ ಆಗಮಿಸಿದ್ದು, ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಿದೆ. [ಸಿಲಿಕಾನ್ ವ್ಯಾಲಿಯಲ್ಲಿ ಮೋದಿ ಹೇಳಿದ್ದೇನು?]

'ನಿಮ್ಮನ್ನು ನೋಡಿ ನನ್ನ ಉತ್ಸಾಹ ಮತ್ತಷ್ಟು ಹೆಚ್ಚಾಗುತ್ತಿದೆ. ಇಂದು ಭಾರತದಲ್ಲಿ ವೀರ ಸೇನಾನಿ ಭಗತ್ ಸಿಂಗ್ ಜನ್ಮ ದಿನ' ಎಂದು ಹೇಳಿ ಮೋದಿ ಮಾತು ಆರಂಭಿಸಿದರು. ಮೋದಿ ಭಾಷಣದ ಮುಖ್ಯಾಂಶಗಳು ಇಲ್ಲಿವೆ....
* 'ಇಲ್ಲಿನ ನಾಗರಿಕರಿಗೆ ಭಾರತೀಯರನ್ನು ಕಂಡರೆ ಗೌರವಿದೆ. ಆ ಗೌರವನ್ನು ನಾನು ನಮಿಸುತ್ತೇನೆ. ಭಾರತೀಯರು ಅಮೆರಿಕಕ್ಕೆ ಬಂದು ಸಾಧನೆ ಮಾಡುತ್ತಿದ್ದಾರೆ. ಪ್ರಪಂಚದಲ್ಲಿ ಭಾರತಕ್ಕೆ ವಿಶೇಷ ಸ್ಥಾನ ಸಿಕ್ಕಿದೆ. ನೀವು ಕಂಪ್ಯೂಟರ್ ಮೇಲೆ ಬೆರಳು ಆಡಿಸಿ ಜಗತ್ತನ್ನು ಬದಲಾವಣೆ ಮಾಡಿದ್ದೀರಿ' [ವಿಶ್ವಸಂಸ್ಥೆಯಲ್ಲಿ ಮೋದಿ ಮಾಡಿದ ಭಾಷಣದ 10 ಅತ್ಯುತ್ತಮ ಉಲ್ಲೇಖ]
* 'ಬೆರಳ ತುದಿಯಲ್ಲಿ ಹೊಸ ಆವಿಷ್ಕಾರ ನಡೆಯುತ್ತಿದೆ. ಆದ್ದರಿಂದ ಪ್ರಪಂಚದಲ್ಲಿ ಭಾರತ ಹೊಸ ಭಾಷ್ಯ ಬರೆಯುತ್ತಿದೆ. ಈಗ ಭಾರತದ ಶಕ್ತಿಯಯನ್ನು ಜಗತ್ತಿಗೆ ಪರಿಚಯಿಸುವ ಸಮಯ ಬಂದಿದೆ. ಭಾರತದಲ್ಲಿ ಬ್ರೇನ್ನ ಬೆಳೆ ಬೆಳೆಯುತ್ತಿದೆ'.
* 'ಬುದ್ಧಿವಂತಿಕೆಯೇ ಭಾರತೀಯರ ಬಂಡವಾಳ, ಇದು ತಂತ್ರಜ್ಞಾನ ಕ್ಷೇತ್ರದಲ್ಲಿ ಇಂದು ಸಾಬೀತಾಗಿದೆ. ಇಂದು ಜಗತ್ತಿನ ಯಾವ ಮೂಲೆಗೆ ಹೋದರೂ ಭಾರತೀಯರ ಮೇಲೆ ವಿಶ್ವಾಸವಿಡುತ್ತಾರೆ. ಇದಕ್ಕೆ ಕಾರಣ ಬುದ್ಧಿವಂತಿಕೆ'.
I have faith in the nation because India is youthful. 65% of our population is under the age of 35: PM @narendramodi
— PMO India (@PMOIndia) September 28, 2015 * '125 ಕೋಟಿ ಭಾರತೀಯರು ನನಗೆ ಒಂದು ಜವಾಬ್ದಾರಿ ನೀಡಿದರು. ದೇಶದ ಅಭಿವೃದ್ಧಿಗಾಗಿ ನಾನು ಪ್ರತಿಕ್ಷಣವೂ ಕೆಲಸ ಮಾಡುತ್ತೇನೆ. ನನ್ನ ಜೀವವಿರುವ ತನಕ ದೇಶಕ್ಕಾಗಿ ಕೆಲಸ ಮಾಡುತ್ತೇನೆ'
* 'ಹಿಂದೆ ಉಪನಿಷತ್ತಿನಿಂದ ಭಾರತವನ್ನು ಗುರುತಿಸಲಾಗುತ್ತಿತ್ತು. ಇಂದು ಉಪನಿಷತ್ತಿಗಿಂತ ಮೇಲೆ ಹೋಗಿ ಉಪಗ್ರಹಗಳ ಬಗ್ಗೆ ಚರ್ಚೆಯಾಗುತ್ತಿದೆ. ಮಂಗಳಯಾನ ಮೊದಲ ಪ್ರಯತ್ನದಲ್ಲೇ ಯಶಸ್ಸುಕಂಡಿದೆ'
Your fingers created magic on the keyboard and the computer and this gave India a new identity. Your skill & commitment is wonderful: PM
— PMO India (@PMOIndia) September 28, 2015 * 'ಭಾರತದ ಬಡತನದ ಬಗ್ಗೆ ನಮಗೆ ತಿಳಿದಿದೆ. ಯಾವಾಗ ಝಿರೋ ಬ್ಯಾಲೆನ್ಸ್ ಖಾತೆ ತೆರೆಯಲು ಅವಕಾಶ ಮಾಡಿಕೊಡಲಾಯಿತೋ ಎಲ್ಲರೂ ಬ್ಯಾಂಕ್ ಕಡೆ ಹೆಜ್ಜೆ ಹಾಕಿದರು. ಬಡವರಿಗಾಗಿ ಜನಧನ್ ಯೋಜನೆ ಜಾರಿಗೆ ತರಲಾಯಿತು.'
Terror and global warming are two pressing issues the world faces. We need to mitigate these two menaces: PM @narendramodi
— PMO India (@PMOIndia) September 28, 2015 * 'ಗ್ಯಾಸ್ ಸಬ್ಸಿಡಿಯನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾವಣೆ ಮಾಡಲಾಗುತ್ತಿದೆ. ಈ ಮೂಲಕ ನಡೆಯುತ್ತಿದ್ದ ಅವ್ಯವಹಾರವನ್ನು ನಿಲ್ಲಿಸಲಾಗಿದೆ. ಮೊಬೈಲ್ ಆಡಳಿತ ಮೇಲೆ ಭಾರತ ಹೆಚ್ಚಿನ ಗಮನ ಹರಿಸಿದೆ. ಇದರಿಂದ ಅಭಿವೃದ್ಧಿಯ ವೇಗ ಹೆಚ್ಚಳವಾಗುತ್ತದೆ'
Forgot to give the good news....a direct flight between Delhi and San Francisco three times a week: PM
— PMO India (@PMOIndia) September 28, 2015 * ಭಾರತದಿಂದ ಸ್ಯಾನ್ ಫ್ರಾನ್ಸಿಸ್ಕೊ ನಗರಕ್ಕೆ ಡಿಸೆಂಬರ್ 2ರಿಂದ ನೇರ ಮತ್ತು ನಿಲುಗಡೆ ರಹಿತ ವಿಮಾನ ಸೇವೆಯನ್ನು ಆರಂಭಿಸುವುದಾಗಿ ಮೋದಿ ತಮ್ಮ ಭಾಷಣದ ಕೊನೆಯಲ್ಲಿ ಘೋಷಣೆ ಮಾಡಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications