ಲಂಡನ್ನಲ್ಲಿ ಬಸವೇಶ್ವರ ಪ್ರತಿಮೆ ಲೋಕಾರ್ಪಣೆ
ಲಂಡನ್, ನವೆಂಬರ್ 14 : ಸಮಾಜ ಸುಧಾರಕ ಜಗಜ್ಯೋತಿ ಬಸವೇಶ್ವರ ಪುತ್ಥಳಿಯಲ್ಲಿ ಲಂಡನ್ನ ಲ್ಯಾಂಬೆತ್ ನಗರದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. 'ಅನುಭವ ಮಂಟಪದ ಕಲ್ಪನೆ ನೀಡಿದ್ದ ಬಸವಣ್ಣ ಅವರು ಮಹಾನ್ ಮಾನವತಾವಾದಿ' ಎಂದು ಮೋದಿ ಬಣ್ಣಿಸಿದರು.
ಶನಿವಾರ ಲಂಡನ್ ಕಾಲಮಾನ ಬೆಳಗ್ಗೆ 9.45ಕ್ಕೆ ನಡೆದ ಸಮಾರಂಭದಲ್ಲಿ ಲ್ಯಾಂಬೆತ್ ನಗರದ ಥೇಮ್ಸ್ ನದಿಯ ದಂಡೆಯ ಆಲ್ಬರ್ಟ್ ಎಂಬಾಕ್ ಮೆಂಟ್ ಎಂಬ ಪ್ರದೇಶದಲ್ಲಿ ನರೇಂದ್ರ ಮೋದಿ ಬಸವೇಶ್ವರ ಪ್ರತಿಮೆ ಲೋಕಾರ್ಪಣೆಗೊಳಿಸಿದರು. [ಬಸವಣ್ಣ ಪ್ರತಿಮೆ ಅನಾವರಣ ಆಹ್ವಾನ ಸ್ವೀಕರಿಸಿದ ಮೋದಿ]

ಸುಮಾರು 2 ಅಡಿ ಎತ್ತರದ ಬಸವಣ್ಣ ಪ್ರತಿಮೆಯನ್ನು ಹಡಗಿನ ಮೂಲಕ ಲಂಡನ್ಗೆ ರವಾನಿಸಲಾಗಿತ್ತು. 2012ರ ಜುಲೈ ತಿಂಗಳಲ್ಲಿ ಪ್ರತಿಮೆ ಸ್ಥಾಪನೆಗೆ ಅನುಮತಿ ಸಿಕ್ಕಿತ್ತು. 2013ರ ಫೆಬ್ರುವರಿಯಲ್ಲಿ ತುಮಕೂರು ಸಿದ್ದಗಂಗಾ ಶ್ರೀಗಳು ಸಾಂಕೇತಿಕವಾಗಿ ಶಿಲಾನ್ಯಾಸ ನೆರವೇರಿಸಿದ್ದರು. [ಚಿತ್ರಗಳು : ಲಂಡನ್ ನಲ್ಲಿ ನರೇಂದ್ರ ಮೋದಿ]
ಕಲಬುರಗಿ ಮೂಲದ ಕನ್ನಡಿಗ, ಲಂಡನ್ನ ಲ್ಯಾಂಬೆತ್ ನಗರದ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಅವರ ಪರಿಶ್ರಮದಿಂದ ಥೇಮ್ಸ್ ನದಿ ದಂಡೆಯ ಪ್ರದೇಶದಲ್ಲಿ ಬಸವೇಶ್ವರರ ಪ್ರತಿಮೆಯನ್ನು ನಿರ್ಮಿಸಲಾಗಿತ್ತು. ಅದನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ.
What a great day to the Nation when Prime Minister Sh. @narendramodi unveiled the statue of #Basaveshwara in London pic.twitter.com/g2VIPAQb2g
— BJP Karnataka (@bjpkarnataka) November 14, 2015 ನನ್ನ ಜೀವನದ ಅಪೂರ್ವ ಕ್ಷಣ : ಪ್ರತಿಮೆ ಲೋಕಾರ್ಪಣೆ ಮಾಡಿದ ಬಳಿ ಮಾತನಾಡಿದ ಮೋದಿ 'ಇದು ನನ್ನ ಜೀವನದ ಅಪೂರ್ವ ಕ್ಷಣವಾಗಿದೆ. ಬಸವಣ್ಣ ಪ್ರತಿಮೆ ಅನಾವರಣ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ. ಜಾತಿ ಅಸಮಾನತೆ ಹೋಗಲಾಡಿಸುವಲ್ಲಿ ಬಸವಣ್ಣನವರ ಪಾತ್ರ ಮಹತ್ತರವಾದದ್ದು. ಅನುಭವ ಮಂಟಪದ ಕಲ್ಪನೆ ನೀಡಿದ್ದ ಬಸವಣ್ಣ ಮಹಾನ್ ಮಾನವತಾವಾದಿ ಎಂದು ಬಣ್ಣಿಸಿದರು.
-
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Gold Price: ಸತತ 2ನೇ ದಿನವು ಬಂಗಾರದ ಬೆಲೆ ಭಾರೀ ಏರಿಕೆ, ದಾಖಲೆ ಬರೆದ ಬೆಳ್ಳಿ -
Gold Price Update: ಆಭರಣಪ್ರಿಯರೇ ಗಮನಿಸಿ, ಅಕ್ಷಯ ತೃತೀಯ ಮುನ್ನವೇ ಗಗನಕ್ಕೇರಿದ ಚಿನ್ನದ ದರ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications