ಕೆರಿಬಿಯನ್ ನಾಡಿನಲ್ಲಿ ರಾಜಕೀಯ ಹೈಡ್ರಾಮಕ್ಕೆ ಕಾರಣವಾದ ಮೆಹುಲ್ ಚೋಕ್ಸಿ ಬಂಧನ
ನವದೆಹಲಿ, ಜೂನ್ 1: ಭಾರತದ ವಂಚಕ ಉದ್ಯಮಿ ಮೆಹುಲ್ ಚೋಕ್ಸಿ ಡೊಮೆನಿಕಾದಲ್ಲಿ ಬಂಧನಕ್ಕೆ ಒಳಗಾದ ನಂತರ ಕೆರಿಬಿಯನ್ ದ್ವೀಪದಲ್ಲಿ ರಾಜಕೀಯ ಹೈಡ್ರಾಮ ಆರಂಭವಾಗಿದೆ. ಮೆಹುಲ್ ಚೋಕ್ಸಿ ನಾಪತ್ತೆ ಪ್ರಕರಣದಲ್ಲಿ ಡೊಮಿನಿಕಾ ಹಾಗೂ ಆಂಟಿಗುವಾ ಮತ್ತು ಬಾರ್ಬುಡಾ ಸರ್ಕಾರ ಭಾಗಿಯಾಗಿದೆ ಎಂದು ಅಲ್ಲಿನ ವಿರೋಧ ಪಕ್ಷಗಳು ಆರೋಪವನ್ನು ಮಾಡುತ್ತಿದ್ದು ಸರ್ಕಾರವೇ ಉದ್ಯಮಿಯ ಅಪಹರಣವನ್ನು ನಡೆಸಿದೆ ಎಂದಿದೆ.
Recommended Video
ಡೊಮೆನಿಕಾದ ಪ್ರತಿಪಕ್ಷದ ನಾಯಕ ಲೆನಾಕ್ಸ್ ಲಿಂಟನ್ ಈ ವಿಚಾರವಾಗಿ ನೀಡಿರುವ ಹೇಳಿಕೆಯನ್ನು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ. "ಭಾರತ ಮೂಲದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಆಂಟಿಗುವಾದಲ್ಲಿ ಅಪಹರಿಸಿ ಆತನ ಮೇಲೆ ಹಲ್ಲೆಯನ್ನು ನಡೆಸಿ ಆತನ ಇಚ್ಚೆಗೆ ವಿರುದ್ಧವಾಗಿ ಡೊಮೆನಿಕಾಗೆ ಕರೆತರಲಾಯಿತು. ಇದು ಡೊಮೆನಿಕಾದ ಪ್ರಧಾನ ಮಂತ್ರಿ ರೂಸ್ವೆಲ್ಟ್ ಸ್ಕೆರಿಟ್ ಅವರ ಆಡಳಿತದ ಪರಿಣಾಮವಾಗಿದೆ. ಈ ಘಟನೆ ಸಂಘಟಿತ ಅಪರಾಧಗಳಲ್ಲಿ ರೂಸ್ವೆಲ್ಟ್ ಅವರ ಸೂಚನೆಯಂತೆ ಸರ್ಕಾರದ ವಿಭಾಗಗಳೇ ಭಾಗಿಯಾಗುತ್ತವೆ ಎಂಬುದನ್ನು ಬಹಿರಂಗಗೊಳಿಸುತ್ತದೆ" ಎಂದು ಲಿಂಟನ್ ಆರೋಪಿಸಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಭಾರತದ ಸರ್ಕಾರದ ಪಾತ್ರವೂ ಇದೆ ಎಂಬುದಾಗಿಯೂ ಲಿಂಟನ್ ಆರೋಪಿಸಿದ್ದಾರೆ. ಡೊಮೆನಿಕಾ, ಆಂಟಿಗುವಾ ಮತ್ತು ಭಾರತದ ಸ್ಪಷ್ಟ ಸಹಯೋಗದೊಂದಿಗೆ ಈ ಅಪಹರಣ ಮತ್ತು ಬಂಧನ ಪ್ರಹಸನ ನಡೆದಿದೆ. ಈ ವಿಚಾರ ಪೂರ್ವ ಕೆರಿಬಿಯನ್ ನಾಡಿನ ನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಆದರೆ ಈ ಆರೋಪವನ್ನು ಆಂಟಿಗುವಾ ಮತ್ತು ಬಾರ್ಬುಡಾ ಪ್ರಧಾನಿ ಗಾಸ್ಟನ್ ಬ್ರೌನ್ ತಳ್ಳಿ ಹಾಕಿದ್ದಾರೆ. ಈ ಅಪಹರಣದಲ್ಲಿ ಸರ್ಕಾರ ಯಾವುದೇ ರೀತಿಯಲ್ಲಿಯೂ ಭಾಗಿಯಾಗಿಲ್ಲ ಎಂದು ಅವರು ಹೇಳಿಕೆಯನ್ನು ನೀಡಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ನ ವಂಚನೆ ಪ್ರಕರಣದ ನಂತರ ತಲೆಮರೆಸಿಕೊಂಡಿದ್ದ ಮೆಹುಲ್ ಚೋಕ್ಸಿ 2018ರ ಜನವರಿಯ ನಂತರ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದರು. ಆದರೆ ಕಳೆದ ಮೇ 23ರ ಬಳಿಕ ನಾಪತ್ತೆಯಾಗಿದ್ದ ಚೋಕ್ಸಿ ಬಳಿಕ ಡೊಮೆನಿಕಾದಲ್ಲಿ ಬಂಧಿಸಲಾಗಿತ್ತು. ಆದರೆ ಈ ಸಂದರ್ಭದಲ್ಲಿ ಚೋಕ್ಸಿ ಮೇಲೆ ಕೈಯಲ್ಲಿ ಗಾಯದ ಕಲೆಗಳು ಇರುವ ಫೋಟೋಗಳು ವೈರಲ್ ಆಗಿತ್ತು. ಈಗ ಮೆಹುಲ್ ಚೋಕ್ಸಿಯನ್ನು ಅಪಹರಣ ಮಾಡಲಾಗಿತ್ತು ಎಂದು ಡೊಮೆನಿಕಾದ ವಿರೋಧ ಪಕ್ಷದ ಮುಖಂಡರು ಆರೋಪವನ್ನು ಮಾಡುತ್ತಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications