ಸಲಿಂಗ ಸಂಬಂಧಕ್ಕೆ ಬೆಂಬಲ ನೀಡಿದ ಪೋಪ್ ಫ್ರಾನ್ಸಿಸ್
ವ್ಯಾಟಿಕನ್ ಸಿಟಿ, ಅಕ್ಟೋಬರ್ 22: ಸಲಿಂಗ ಸಂಬಂಧಗಳಿಗೆ ವಿವಿಧ ಧರ್ಮಗಳಲ್ಲಿ ಧರ್ಮಗುರುಗಳು ಸೇರಿದಂತೆ ಅನೇಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.
ಕ್ಯಾಥೋಲಿಕ್ ಚರ್ಚ್ ಮುಖ್ಯಸ್ಥ ಸ್ಥಾನಕ್ಕೆ ಬಂದ ಸಂದರ್ಭದಿಂದಲೂ ಸಲಿಂಗ ಸಂಬಂಧದ ಬಗ್ಗೆ ಮೃದು ಧೋರಣೆ ಪ್ರದರ್ಶಿಸುತ್ತಿರುವ ಪೋಪ್ ಫ್ರಾನ್ಸಿಸ್, ಬುಧವಾರ ಪ್ರಸಾರವಾದ ಹೊಸ ಸಾಕ್ಷ್ಯಚಿತ್ರವೊಂದರಲ್ಲಿ ಸಲಿಂಗ ಸಂಬಂಧಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಎಲ್ಜಿಬಿಟಿ ಸಮುದಾಯದ ಜನರು ಒಂದು ಕುಟುಂಬದಂತೆ ಇರಲು ಅವಕಾಶ ನೀಡುವಂತಹ ಸಾಮಾನ್ಯ ನಾಗರಿಕ ಒಕ್ಕೂಟ ಕಾನೂನನ್ನು ಜಾರಿಗೆ ತರುವಂತೆಯೂ ಅವರು ಆಗ್ರಹಿಸಿದ್ದಾರೆ. 'ಸಲಿಂಗ ಸಂಬಂಧಕ್ಕೆ ಒಳಗಾಗುವವರು ದೇವರ ಮಕ್ಕಳು. ಅವರಿಗೂ ತಮ್ಮದೇ ಕುಟುಂಬ ಹೊಂದುವ ಹಕ್ಕು ಇರುತ್ತದೆ' ಎಂದು ಪೋಪ್ ಫ್ರಾನ್ಸಿಸ್ ಅವರ ಹೇಳಿಕೆಯನ್ನು ಒಳಗೊಂಡಿರುವ 'ಫ್ರಾನ್ಸೆಸ್ಕೋ' ಸಾಕ್ಷ್ಯಚಿತ್ರವು ರೋಮ್ ಫಿಲಂ ಫೆಸ್ಟಿವಲ್ನಲ್ಲಿ ಪ್ರದರ್ಶನಗೊಂಡಿದೆ.

'ಸಲಿಂಗ ಸಂಬಂಧ ಇದೆ ಎಂಬ ಕಾರಣಕ್ಕೆ ಯಾರನ್ನೂ ಹೊರ ಹಾಕುವಂತಿಲ್ಲ ಮತ್ತು ಅದರಿಂದ ಆಕ್ರೋಶಗೊಳ್ಳುವಂತದ್ದೇನೂ ಇಲ್ಲ. ಅವರಿಗೆ ಕಾನೂನಾತ್ಮಕ ರಕ್ಷಣೆ ನೀಡುವ ಸಲುವಾಗಿ ಸಮಗ್ರವಾಗಿ ಅನ್ವಯವಾಗುವ ನಾಗರಿಕ ಕಾನೂನನ್ನು ನಾವು ತಯಾರಿಸಬೇಕಿದೆ. ನಾನು ಅದಕ್ಕೆ ಅನುಮೋದನೆ ನೀಡುತ್ತೇನೆ' ಎಂದು ಪೋಪ್ ಹೇಳಿದ್ದಾರೆ.
ಸಲಿಂಗ ಸಂಬಂಧಗಳ ಪರ ಪೋಪ್ ಒಲವು ವ್ಯಕ್ತಪಡಿಸಿದ್ದರೂ ಅವರು ಸಲಿಂಗ ವಿವಾಹಕ್ಕೆ ಹಿಂದಿನಿಂದಲೂ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದಾರೆ. ವಿವಿಧ ದೇಶಗಳಲ್ಲಿ ಕ್ಯಾಥಲಿಕ್ ಚರ್ಚ್ಗಳು ಸಲಿಂಗ ಸಂಬಂಧಕ್ಕೆ ಕುರಿತಾದ ಕಾನೂನುಗಳಿಗೆ ಆಕ್ಷೇಪ ವ್ಯಕ್ತಪಡಿಸುತ್ತಿವೆ. ಈಗ ಪೋಪ್ ಹೇಳಿಕೆ ಎಲ್ಜಿಬಿಟಿ ಸಮುದಾಯಕ್ಕೆ ಬೆಂಬಲ ಸಿಕ್ಕಂತಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications