ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಕೈ ಹಿಡಿದು ಎಳೆದ ಯುವತಿ!
ವ್ಯಾಟಿಕನ್ ಸಿಟಿ, ಜನವರಿ 1: ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಕೈಯನ್ನು ಯುವತಿಯೊಬ್ಬಳು ಹಿಡಿದು ಎಳೆದಿರುವ ಘಟನೆ ವ್ಯಾಟಿಕನ್ ಸಿಟಿಯಲ್ಲಿ ನಡೆದಿದೆ.
ಹೊಸ ವರ್ಷವನ್ನು ಸ್ವಾಗತಿಸಲು ವ್ಯಾಟಿಕನ್ ಸಿಟಿಯ (ಇಟಲಿ) ಸೇಂಟ್ ಪೀಟರ್ ಸ್ಕ್ವೇರ್ ನಲ್ಲಿ ಭಾರೀ ಸಂಖ್ಯೆಯ ಜನ ಹಾಗೂ ಪೋಪ್ ಭಕ್ತರು ನೆರದಿದ್ದರು. ಈ ವೇಳೆ ಪೋಪ್ ಫ್ರಾನ್ಸಿಸ್ ಅವರು ನೆರದಿದ್ದ ಜನಸ್ತೋಮಕ್ಕೆ ಶುಭಾಶಯ ಕೋರುತ್ತಾ ಬರುತ್ತಿದ್ದರು. ಇದೇ ವೇಳೆ ಯುವತಿಯೊಬ್ಬಳು ಪೋಪ್ ಅವರ ಕೈ ಹಿಡಿದುಕೊಂಡು ಜೋರಾಗಿ ಎಳೆದಿದ್ದಾಳೆ. ಇದರಿಂದ ತೀವ್ರ ಕೋಪಗೊಂಡ ಪೋಪ್ ತಕ್ಷಣವೇ ಆ ಯುವತಿಯ ಕೈಗೆ ಹೊಡೆದು ತಮ್ಮ ಕೈ ಬಿಡಿಸಿಕೊಂಡರು. ಈ ದೃಶ್ಯ ಈಗ ವೈರಲ್ ಆಗಿದೆ.
ಯುವತಿ ಪೋಪ್ ಅವರ ಮೇಲೆ ಭಕ್ತಿಯಿಂದ ಈ ರೀತಿ ಮಾಡಿದ್ದಾಳೋ ಅಥವಾ ಇನ್ನಾವುದೋ ಉದ್ದೇಶದಿಂದ ಹಾಗೇ ಮಾಡಿದಳೋ ಮತ್ತು ಅವಳು ಯಾರು ಎಂಬುದು ಇನ್ನೂ ತಿಳಿದು ಬಂದಿಲ್ಲ. ಆದರೆ ಯುವತಿ ಕೈ ಹಿಡಿದು ಎಳೆದಾಗ ಪೋಪ್ ಗೆ ಕೈ ತುಂಬಾ ನೋವಾಗಿದ್ದರಿಂದ ಅವರು ಆ ರೀತಿ ಮಾಡಿದರು. ಅಷ್ಟೇ ಅಲ್ಲದೇ ಅದರಿಂದ ಪೋಪ್ ತೀವ್ರ ಮುಜುಗರಕ್ಕೆ ಒಳಗಾದರು ಎಂದು ಕೆಲ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಪೋಪ್ ಫ್ರಾನ್ಸಿಸ್ ಅವರು 266 ನೇ ಕ್ರಿಶ್ಚಿಯನ್ ಪ್ರಧಾನ ಧರ್ಮ ಗುರುವಾಗಿದ್ದಾರೆ. ಇವರು ಇಟಲಿಗೆ ಹೊಂದಿಕೊಂಡು ಇರುವ ವ್ಯಾಟಿಕನ್ ಸಿಟಿ ದೇಶದಲ್ಲಿ ನೆಲಸಿರುತ್ತಾರೆ. ಪೋಪ್ ಫ್ರಾನ್ಸಿಸ್ ಯುರೋಪೇತರ ದೇಶದಿಂದ ಬಂದ ಮೊದಲ ಪೋಪ್ ಆಗಿದ್ದಾರೆ. ವಿಡಿಯೋ ಲಿಂಕ್
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications