ಅಮೆರಿಕದ ಅಲಸ್ಕಾ ಕರಾವಳಿಯಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ: ಯಾವುದೇ ಕ್ಷಣದಲ್ಲಿ ಸುನಾಮಿ!
ಅಮೆರಿಕದಲ್ಲಿ ಮುಂಜಾನೆಯೇ ಭಾರೀ ದೊಡ್ಡ ಆಘಾತ ಎದುರಾಗಿದೆ. ಅಮೆರಿಕದ ಅಲಾಸ್ಕಾ ರಾಜ್ಯದ ಕರಾವಳಿ ಪ್ರದೇಶದಲ್ಲಿ ಬುಧವಾರ ಮುಂಜಾನೆ 7.3 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದ್ದು. ಸುನಾಮಿ ಆಗುವ ಸಾಧ್ಯತೆಯೂ ಇದೆ ಎಂದು ಅಮೆರಿಕದ (Geological Survey) ತಜ್ಞರು ಮುನ್ನೆಚ್ಚರಿಕೆ ನೀಡಿದ್ದಾರೆ. ಇದರಿಂದ ಈ ಭಾಗದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಅಮೆರಿಕದ ಅಲಾಸ್ಕಾ ರಾಜ್ಯದ ಕರಾವಳಿ ಭಾಗದಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪವು ಸ್ಥಳೀಯ ಸಮಯ 12:37ರ ಸುಮಾರಿಗೆ ಸಂಭವಿಸಿದ್ದು, ಇದರ ಕೇಂದ್ರಬಿಂದು ಸ್ಯಾಂಡ್ ಪಾಯಿಂಟ್ ದ್ವೀಪ ಪಟ್ಟಣದ ದಕ್ಷಿಣಕ್ಕೆ ಅಂದಾಜು 87 ಕಿಲೋಮೀಟರ್ ದೂರದಲ್ಲಿದೆ ಎಂದು ಹೇಳಲಾಗಿದೆ. ಭೂಕಂಪದ ನಂತರ ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪ ಪ್ರದೇಶಗಳಲ್ಲಿ ಯಾವುದೇ ಕ್ಷಣದಲ್ಲಾದರೂ ಸುನಾಮಿ ಎದುರಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ತೀವ್ರ ಭೂಕಂಪನದ ಬೆನ್ನಲ್ಲೇ ಸುನಾಮಿ ಸೇರಿದಂತೆ ಪ್ರಕೃತಿ ವಿಕೋಪ ಸಂಭವಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಅಲಾಸ್ಕಾದ ಪಾಮರ್ನಲ್ಲಿರುವ ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರ ಮುನ್ಸೂಚನೆ ನೀಡಿದೆ.

ಏಕಕಾಲಕ್ಕೆ ಎದುರಾಗುತ್ತಿರುವ ಈ ಸಂಕಷ್ಟಗಳಿಂದ ಅಲ್ಲಿನ ಜನ ಭಯಬೀತರಾಗಿದ್ದಾರೆ. ದಕ್ಷಿಣ ಅಲಾಸ್ಕಾ ಹಾಗೂ ಅಲಾಸ್ಕಾ ಪರ್ಯಾಯ ದ್ವೀಪ ಸೇರಿದಂತೆ ವಿವಿಧ ಪೆಸಿಫಿಕ್ ಕರಾವಳಿ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪ್ರಾರಂಭಿಕ ಮಾಹಿತಿಯ ಅನುಸಾರ ಇದೀಗ ಅಮೆರಿಕದ ಕೆಲವು ಕರಾವಳಿ ಪ್ರದೇಶಗಳಲ್ಲಿ ಮಾತ್ರ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಪರಿಸ್ಥಿತಿಯನ್ನು ನೋಡಿಕೊಂಡು ಅಮೆರಿಕದ ವಿವಿಧ ಭಾಗಗಳಲ್ಲಿ ಮುನ್ಸೂಚನೆ ನೀಡುವುದಾಗಿ ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಮೆರಿಕ ಈ ಹಿಂದೆಯು ಈ ರೀತಿಯ ಭೀಕರ ಭೂಕಂಪನ ಹಾಗೂ ಸುನಾಮಿಗಳನ್ನು ಎದುರಿಸಿದೆ. ಈ ಬಾರಿಯ ಭೂಕಂಪನವು ತೀವ್ರವಾಗಿದ್ದು ಯಾವುದೇ ಕ್ಷಣದಲ್ಲಾದರೂ ಸುಮಾಮಿ ಎದುರಾಗುವ ಆತಂಕ ಎದುರಾಗಿದೆ. ಅಲಾಸ್ಕಾ ಭೂಕಂಪನ ಬೆನ್ನಲ್ಲೇ ಈ ಭಾಗದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಈ ಪ್ರದೇಶದಲ್ಲಿ 1964ರಲ್ಲಿ 9.2 ತೀವ್ರತೆಯ ಭೂಕಂಪ ಸಂಭವಿಸಿತ್ತು.
ಇದು ಉತ್ತರ ಅಮೆರಿಕಾದಲ್ಲಿ ಇದುವರೆಗೆ ದಾಖಲಾದ ಅತ್ಯಂತ ಪ್ರಬಲ ಭೂಕಂಪವಾಗಿದೆ. ಈ ಭೂಕಂಪದಿಂದಾಗಿ ಆಂಕಾರೇಜ್ ನಗರದಲ್ಲಿ ಭಾರೀ ಅನಾಹುತ ಸಂಭವಿಸಿತ್ತು. ಅಲಾಸ್ಕಾ ಕೊಲ್ಲಿ, ಯುಎಸ್ ಪಶ್ಚಿಮ ಕರಾವಳಿ ಮತ್ತು ಹವಾಯಿ ಎನ್ನುವ ಪ್ರದೇಶದಲ್ಲಿ ತೀವ್ರ ಸುನಾಮಿ ಸಂಭವಿಸಿತ್ತು. ಭೂಕಂಪ ಮತ್ತು ಸುನಾಮಿಯಿಂದ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications