ಅಲಸ್ಕಾ ಭೂಕಂಪನದಿಂದ ಎದುರಾದ ಸುನಾಮಿಯ ಭೀತಿ
ಅಲಸ್ಕಾ, ಜುಲೈ.23: ಕಳೆದ ಅಮೆರಿಕಾದ ಅಲಸ್ಕಾದ ದಕ್ಷಿಣ ಕರಾವಳಿಯ ಆಳದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಸುನಾಮಿ ಎದುರಾಗುವ ಆತಂಕ ಸೃಷ್ಟಿಯಾಗಿದೆ. ಕರಾವಳಿ ಪ್ರದೇಶದ ಹಲವು ಹಳ್ಳಿಗಳ ಜನರು ಸುನಾಮಿ ಭೀತಿಯಿಂದಾಗಿ ಎತ್ತರದ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.
ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 7.8ರಷ್ಟು ದಾಖಲಾಗಿದ್ದು, ಇದರಿಂದ ಸುನಾಮಿಯೂ ಸಂಭವಿಸುವ ಮುನ್ಸೂಚನೆ ಸಿಕ್ಕಿದೆ. ಕರಾವಳಿ ಭಾಗದಲ್ಲಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ. ಕೊಡಿಯಾಕ್ ನಿಂದ 300 ಕಿಲೋ ಮೀಟರ್ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ.
ಅಮೆರಿಕಾ ಭೂವಿಜ್ಞಾನ ಇಲಾಖೆ ಮಾಹಿತಿ ಪ್ರಕಾರ, ಸ್ಥಳೀಯ ಸಮಯ ಮಂಗಳವಾರ ರಾತ್ರಿ 10: 12 ಕ್ಕೆ ಭೂಕಂಪ ಸಂಭವಿಸಿತು. ಪೆರಿವಿಲ್ಲೆಯ ಸಣ್ಣ ಸಮುದಾಯದ ಆಗ್ನೇಯಕ್ಕೆ 105 ಕಿಲೋ ಮೀಟರ್ ದೂರ ಮತ್ತು 28 ಕಿಲೋ ಮೀಟರ್ ಆಳದಲ್ಲಿ ಕಂಪನವು ಕೇಂದ್ರೀಕೃತವಾಗಿತ್ತು.

ಅಲಾಸ್ಕಾ ಪೆನಿನ್ಸುಲಾದ ಹತ್ತಿರದ ಸಮುದಾಯಗಳು ಕಂಪನದ ಅನುಭವವಾಗಿಲ್ಲ. ಸಾಮಾನ್ಯವಾಗಿ ಭೂಕಂಪನದ ಪ್ರಮಾಣಕ್ಕೆ ಸಂಬಂಧಿಸಿದೆ ಎಂದು ಅಲಾಸ್ಕಾ ರಾಜ್ಯ ಭೂಕಂಪಶಾಸ್ತ್ರಜ್ಞ ಮೈಕೆಲ್ ವೆಸ್ಟ್ ಹೇಳಿದ್ದಾರೆ. ಪಶ್ಚಿಮ ಪ್ರದೇಶದ 160 ಕಿಲೋ ಮೀಟರ್ ದೂರದಲ್ಲಿರುವ ಸಣ್ಣ ಪುಟ್ಟ ಹಳ್ಳಿಗಳಲ್ಲಿ ಪ್ರಬಲ ಭೂಕಂಪನದವ ಅನುಭವವಾಗಿದ್ದು, 805 ಕಿಲೋ ಮೀಟರ್ ದೂರದ ಅಂಕೊರಜೆ ಪ್ರದೇಶದಲ್ಲಿಯೂ ಕಂಪಿಸಿರುವ ಬಗ್ಗೆ ವರದಿಯಾಗಿದೆ.
ಭೂಕಂಪನದ ನಂತರ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಯಾವುದೇ ರೀತಿ ಆಸ್ತಿ-ಪಾಸ್ತಿ ಮತ್ತು ಪ್ರಾಣ ಹಾನಿ ಬಗ್ಗೆ ವರದಿಯಾಗಿಲ್ಲ. ಹೋಮರ್ ಮತ್ತು ಕೊಡಿಯಾಕ್ ಪ್ರದೇಶದಲ್ಲಿ ಸುನಾಮಿಯ ಆತಂಕ ಎದುರಾಗಿದ್ದು, ಕರಾವಳಿ ಭಾಗದ ಜನರನ್ನು ಸ್ಥಳಾಂತರಿಸಲಾಗಿದೆ.
ಅಲಸ್ಕಾ, ಅಲೆಂಟೀನಾ ಪ್ರದೇಶಗಳಲ್ಲಿ ಸಾಕಷ್ಟು ಬಾರಿ ಭೂಕಂಪದಂತಾ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿರುತ್ತವೆ. ಕಳೆದ 1964ರಲ್ಲಿ ಸಂಭವಿಸಿದ ಭೂಕಂಪದಲ್ಲಿ ಸುಮಾರು 131 ಜನರು ಪ್ರಾಣ ಬಿಟ್ಟಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿತ್ತು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications