ಅಲಸ್ಕಾ ಭೂಕಂಪನದಿಂದ ಎದುರಾದ ಸುನಾಮಿಯ ಭೀತಿ
ಅಲಸ್ಕಾ, ಜುಲೈ.23: ಕಳೆದ ಅಮೆರಿಕಾದ ಅಲಸ್ಕಾದ ದಕ್ಷಿಣ ಕರಾವಳಿಯ ಆಳದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಸುನಾಮಿ ಎದುರಾಗುವ ಆತಂಕ ಸೃಷ್ಟಿಯಾಗಿದೆ. ಕರಾವಳಿ ಪ್ರದೇಶದ ಹಲವು ಹಳ್ಳಿಗಳ ಜನರು ಸುನಾಮಿ ಭೀತಿಯಿಂದಾಗಿ ಎತ್ತರದ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.
ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 7.8ರಷ್ಟು ದಾಖಲಾಗಿದ್ದು, ಇದರಿಂದ ಸುನಾಮಿಯೂ ಸಂಭವಿಸುವ ಮುನ್ಸೂಚನೆ ಸಿಕ್ಕಿದೆ. ಕರಾವಳಿ ಭಾಗದಲ್ಲಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ. ಕೊಡಿಯಾಕ್ ನಿಂದ 300 ಕಿಲೋ ಮೀಟರ್ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ.
ಅಮೆರಿಕಾ ಭೂವಿಜ್ಞಾನ ಇಲಾಖೆ ಮಾಹಿತಿ ಪ್ರಕಾರ, ಸ್ಥಳೀಯ ಸಮಯ ಮಂಗಳವಾರ ರಾತ್ರಿ 10: 12 ಕ್ಕೆ ಭೂಕಂಪ ಸಂಭವಿಸಿತು. ಪೆರಿವಿಲ್ಲೆಯ ಸಣ್ಣ ಸಮುದಾಯದ ಆಗ್ನೇಯಕ್ಕೆ 105 ಕಿಲೋ ಮೀಟರ್ ದೂರ ಮತ್ತು 28 ಕಿಲೋ ಮೀಟರ್ ಆಳದಲ್ಲಿ ಕಂಪನವು ಕೇಂದ್ರೀಕೃತವಾಗಿತ್ತು.

ಅಲಾಸ್ಕಾ ಪೆನಿನ್ಸುಲಾದ ಹತ್ತಿರದ ಸಮುದಾಯಗಳು ಕಂಪನದ ಅನುಭವವಾಗಿಲ್ಲ. ಸಾಮಾನ್ಯವಾಗಿ ಭೂಕಂಪನದ ಪ್ರಮಾಣಕ್ಕೆ ಸಂಬಂಧಿಸಿದೆ ಎಂದು ಅಲಾಸ್ಕಾ ರಾಜ್ಯ ಭೂಕಂಪಶಾಸ್ತ್ರಜ್ಞ ಮೈಕೆಲ್ ವೆಸ್ಟ್ ಹೇಳಿದ್ದಾರೆ. ಪಶ್ಚಿಮ ಪ್ರದೇಶದ 160 ಕಿಲೋ ಮೀಟರ್ ದೂರದಲ್ಲಿರುವ ಸಣ್ಣ ಪುಟ್ಟ ಹಳ್ಳಿಗಳಲ್ಲಿ ಪ್ರಬಲ ಭೂಕಂಪನದವ ಅನುಭವವಾಗಿದ್ದು, 805 ಕಿಲೋ ಮೀಟರ್ ದೂರದ ಅಂಕೊರಜೆ ಪ್ರದೇಶದಲ್ಲಿಯೂ ಕಂಪಿಸಿರುವ ಬಗ್ಗೆ ವರದಿಯಾಗಿದೆ.
ಭೂಕಂಪನದ ನಂತರ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಯಾವುದೇ ರೀತಿ ಆಸ್ತಿ-ಪಾಸ್ತಿ ಮತ್ತು ಪ್ರಾಣ ಹಾನಿ ಬಗ್ಗೆ ವರದಿಯಾಗಿಲ್ಲ. ಹೋಮರ್ ಮತ್ತು ಕೊಡಿಯಾಕ್ ಪ್ರದೇಶದಲ್ಲಿ ಸುನಾಮಿಯ ಆತಂಕ ಎದುರಾಗಿದ್ದು, ಕರಾವಳಿ ಭಾಗದ ಜನರನ್ನು ಸ್ಥಳಾಂತರಿಸಲಾಗಿದೆ.
ಅಲಸ್ಕಾ, ಅಲೆಂಟೀನಾ ಪ್ರದೇಶಗಳಲ್ಲಿ ಸಾಕಷ್ಟು ಬಾರಿ ಭೂಕಂಪದಂತಾ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿರುತ್ತವೆ. ಕಳೆದ 1964ರಲ್ಲಿ ಸಂಭವಿಸಿದ ಭೂಕಂಪದಲ್ಲಿ ಸುಮಾರು 131 ಜನರು ಪ್ರಾಣ ಬಿಟ್ಟಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications