ಕುಲಭೂಷಣ್ ಬೆಂಬಲಕ್ಕೆ ನಿಂತ ಬಿಲಾವಲ್ ಭುಟ್ಟೋ
ಕುಲಭೂಷಣ್ ಅವರ ಪ್ರಕರಣವೇನು, ಅವರನ್ನೇಕೆ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ ಎಂಬುದರ ಸ್ಪಷ್ಟವಾದ ದಾಖಲೆಗಳ ಮೂಲಕ ಸಾಬೀತುಪಡಿಸದ ಷರೀಫ್ ಸರ್ಕಾರ: ಬಿಲಾವಲ್ ಕಿಡಿ
ಕರಾಚಿ, ಏಪ್ರಿಲ್ 11: ಭಾರತದ ಗೂಢಾಚಾರಿಯೆಂದು ಹೇಳಲಾದ, ಸದ್ಯಕ್ಕೆ ಪಾಕಿಸ್ತಾನದ ಸೆರೆಯಲ್ಲಿರುವ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಸರ್ಕಾರ ಗಲ್ಲು ಶಿಕ್ಷೆ ನೀಡಿರುವುದನ್ನು ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ (ಪಿಪಿಪಿ) ಅಧ್ಯಕ್ಷ ಹಾಗೂ ಆ ದೇಶದ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಅವರ ಪುತ್ರ ಬಿಲಾವಲ್ ಭುಟ್ಟೋ ಟೀಕಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕುಲಭೂಷಣ್ ಅವರು ಗೂಢಚಾರಿಯಾಗಿದ್ದರೋ ಇಲ್ಲವೋ ಎಂಬುದು ಇನ್ನೂ ಸಾಬೀತಾಗಿಲ್ಲ. ಅವರ ಪಾತ್ರವೇನು ಎಂಬುದೇ ಒಂದು ವಿವಾದವಾಗಿದೆ. ಹಾಗಿರುವಾಗ, ಪಾಕಿಸ್ತಾನ ಸರ್ಕಾರ ಅವರಿಗೆ ಹೇಗೆ ಗಲ್ಲು ಶಿಕ್ಷೆ ವಿಧಿಸಲು ಸಾಧ್ಯ'' ಎಂದು ಪ್ರಶ್ನಿಸಿದರು.[ಜಾಧವ್ ಗೆ ಮರಣದಂಡನೆಯಾದರೆ ಪರಿಣಾಮ ನೆಟ್ಟಗಿರಲ್ಲ: ಪಾಕ್ ಗೆ ಸುಷ್ಮಾ ವಾರ್ನಿಂಗ್]

ಇದೇ ವೇಳೆ, ನವಾಜ್ ಷರೀಫ್ ಸರ್ಕಾರದ ವಿರುದ್ದ ಕಿಡಿ ಕಾರಿದ ಅವರು, ''ಕುಲಭೂಷಣ್ ಅವರ ಪ್ರಕರಣವೇನು, ಅವರನ್ನೇಕೆ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ ಎಂಬುದರ ಸ್ಪಷ್ಟವಾದ ದಾಖಲೆಗಳನ್ನು ನೀಡಿ, ಆರೋಪವನ್ನು ವಿಶ್ವದ ಮುಂದೆ ಸಾಬೀತುಪಡಿಸುವಲ್ಲಿ ಷರೀಫ್ ಸರ್ಕಾರ ವಿಫಲವಾಗಿದೆ ಎಂದರು.
ಅಲ್ಲದೆ, ಭಾರತದಲ್ಲೇನಾದರೂ ಪಾಕಿಸ್ತಾನದ ಬೇಹುಗಾರ ಸಿಕ್ಕಿಬಿದ್ದಿದ್ದರೆ, ಅದು ಮೊದಲು ತನ್ನ ಆರೋಪವನ್ನು ಸಾಬೀತುಪಡಿಸುತ್ತಿತ್ತು'' ಎಂದು ಹೇಳಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications