ಅಧಿಕಾರ ಹಸ್ತಾಂತರಕ್ಕಾಗಿ ಪ್ರಧಾನಿ ಹುದ್ದೆ ತೊರೆದ ಪ್ರಚಂಡ!
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ತಮ್ಮ ಹುದ್ದೆಗೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಮಾವೋವಾದಿ ಬಂಡುಕೋರ ಮುಖ್ಯಸ್ಥ ಪ್ರಚಂಡ ಅವರು ಆಡಳಿತಾರೂಢ ಮಿತ್ರಪಕ್ಷ ನೇಪಾಳಿ ಕಾಂಗ್ರೆಸ್ಸಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ
ಕಠ್ಮಂಡು, ಮೇ 24: ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ತಮ್ಮ ಹುದ್ದೆಗೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಮಾವೋವಾದಿ ಬಂಡುಕೋರ ಮುಖ್ಯಸ್ಥ ಪ್ರಚಂಡ ಅವರು ಆಡಳಿತಾರೂಢ ಮಿತ್ರಪಕ್ಷ ನೇಪಾಳಿ ಕಾಂಗ್ರೆಸ್ ಜತೆ ಮಾಡಿಕೊಂಡ ಒಪ್ಪಂದದ ಅನ್ವಯ ಕಾಂಗ್ರೆಸ್ಸಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.
ಕಮ್ಯೂನಿಸ್ಟ್ ಪಾರ್ಟಿ ಆಫ್ ನೇಪಾಳ (ಸಿಪಿಎನ್) ಮುಖ್ಯಸ್ಥರಾಗಿದ್ದ ಪುಷ್ಪ ಕಮಲ್ ದಹಲ್ ಪ್ರಚಂಡ ಅವರು 2016ರ ಆಗಸ್ಟ್ 3ರಂದು ನೇಪಾಳಿ ಕಾಂಗ್ರೆಸ್ ಅಧ್ಯಕ್ಷ ಶೆರ್ ಬಹಾದುರ್ ದೇವುಬಾ ಅವರ ಜತೆ ಮೈತ್ರಿ ಸಾಧಿಸಿ ಅಧಿಕಾರ ಸ್ಥಾಪಿಸಿದ್ದರು.

ನೇಪಾಳದ 39ನೇ ಪ್ರಧಾನಿಯಾಗಿ ಆಯ್ಕೆಯಾಗಿದ್ದ 62 ವರ್ಷದ ಪ್ರಚಂಡ ಅವರು ಕಳೆದ 9 ತಿಂಗಳಿನಿಂದ ನೇಪಾಳದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. 2018ರ ಫೆಬ್ರುವರಿಯಲ್ಲಿ ನಡೆಯಲಿರುವ ಚುನಾವಣೆವರೆಗೂ ಅಧಿಕಾರ ಹಸ್ತಾಂತರಿಸುವ ಮೂಲಕ ಸರದಿಯಲ್ಲಿ ಆಡಳಿತ ಜಾರಿಯಲ್ಲಿದೆ.
ಸೇನಾಪಡೆಯ ಮುಖ್ಯಸ್ಥ ರುಕ್ಮಾಂಗದ ಕಟವಾಲ್ ಅವರ ಅಮಾನತು ಪ್ರಕರಣದ ಹಿನ್ನೆಲೆಯಲ್ಲಿ ನೇಪಾಳದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿನಿಂದ ನೇಪಾಳ ಪ್ರಧಾನಮಂತ್ರಿ ಪುಷ್ಪಕಮಲ್ ದಾಹಲ್ ಅಲಿಯಾಸ್ ಪ್ರಚಂಡ ಅವರು 2009ರಲ್ಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications