ಇಸ್ತಾನ್ಬುಲ್ನಲ್ಲಿ ಸ್ಫೋಟ; ಉಗ್ರರ ದಾಳಿ ಶಂಕೆ
ಇಸ್ತಾನ್ಬುಲ್, ನ.13: ಇಸ್ತಾನ್ಬುಲ್ ಕೇಂದ್ರ ಭಾಗದಲ್ಲಿರುವ ತಕ್ಸಿಮ್ ಜಿಲ್ಲೆಯಲ್ಲಿ ಇಂದು ಭಾರಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದರೆ, ಹಲವರಿಗೆ ಗಾಯಗಳಾಗಿವೆ. ಘಟನೆಯ ಹೊಣೆಯನ್ನು ಯಾವ ಉಗ್ರ ಸಂಘಟನೆಗಳು ಇಲ್ಲಿ ತನಕ ಹೊತ್ತುಕೊಂಡಿಲ್ಲ, ಆದರೆ, ಈ ವಿಧ್ವಂಸಕ ಕೃತ್ಯದ ಹಿಂದೆ ಉಗ್ರರ ಕೈವಾಡ ಇರುವ ಬಗ್ಗೆ ಅಧ್ಯಕ್ಷ ಎರ್ಡೋಗಾನ್ ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಫೋಟ ಬಗ್ಗೆ ಭಾರತೀಯ ರಾಯಭಾರ ಕಚೇರಿ ಕಳವಳ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಸಂದೇಶ ತಿಳಿಸಿದೆ.
"ಇಸ್ತಾನ್ಬುಲ್ನಲ್ಲಿ ಇಂದು ಸಂಭವಿಸಿದ ಸ್ಫೋಟದಲ್ಲಿ ಮೃತರಾದವರ ಬಗ್ಗೆ ಭಾರತವು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ದುಃಖದಲ್ಲಿರುವವರ ಬಗ್ಗೆ ಸಹಾನುಭೂತಿ ಇದೆ, ಟರ್ಕಿ ಸರ್ಕಾರದ ನಮ್ಮ ಸಹಕಾರ ಸದಾ ಇರಲಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ" ಎಂದು MEA ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.
ಇಸ್ತಾನ್ಬುಲ್ನ ಮಧ್ಯಭಾಗದಲ್ಲಿರುವ ಪ್ರಮುಖ ಜನನಿಬಿಡ ಪ್ರದೇಶದಲ್ಲಿ ಭಾನುವಾರ ಸ್ಫೋಟವಾಗಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ, ಜನರು ದಿಕ್ಕಾಪಾಲಾಗಿ ಓಡುತ್ತಿದ್ದಾರೆ ಎಂದು ಮೊದಲ ವರದಿಗಳು ಬಂದಿವೆ.
ಘಟನಾ ಸ್ಥಳಕ್ಕೆ ತಕ್ಷಣವೇ ಆಂಬ್ಯುಲೆನ್ಸ್ಗಳು ಧಾವಿಸಿದ್ದರಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲು ಸಾಧ್ಯವಾಯಿತು. ನಂತರ ಇಸ್ತಿಕ್ಲಾಲ್ ಅವೆನ್ಯೂವನ್ನು ಪೊಲೀಸರು ಸಂಪೂರ್ಣ ಬಂದ್ ಮಾಡಿದರು. TRT ಮತ್ತು ಇತರ ಮಾಧ್ಯಮ ತಾಣಗಳ ಪ್ರಕಾರ, ನಗರದ ಬೆಯೊಗ್ಲು ಪ್ರದೇಶ ಪ್ರಮುಖ ಶಾಪಿಂಗ್ ತಾಣವಾಗಿದ್ದು, ಸ್ಥಳೀಯ ಜನರು ಮತ್ತು ಪ್ರವಾಸಿಗರೊಂದಿಗೆ ಕಿಕ್ಕಿರಿದಿರುತ್ತದೆ.

ಇಸ್ತಾಂಬುಲ್ ಗವರ್ನರ್ ಅಲಿ ಯೆರ್ಲಿಕಾಯಾ ನೀಡಿರುವ ಅಧಿಕೃತ ಹೇಳಿಕೆ ಪ್ರಕಾರ,ಇಸ್ತಿಕ್ಲಾಲ್ ಬೀದಿಯಲ್ಲಿ 16:20 ಕ್ಕೆ.(ಸ್ಥಳೀಯ ಕಾಲಮಾನ ಪ್ರಕಾರ) ಮೊದಲಿಗೆ ಭಾರಿ ಸ್ಫೋಟ ಕೇಳಿ ಬಂದಿದೆ. ಬೆಯೊಗ್ಲು ಜಿಲ್ಲೆಯ ತಕ್ಸಿಮ್ ಇಸ್ತಿಕ್ಲಾಲ್ ಬೀದಿಯಲ್ಲಿ ನಡೆದ ಘಟನೆ ತಕ್ಷಣವೇ ಪೊಲೀಸರು, ಆರೋಗ್ಯ ಸಿಬ್ಬಂದಿ, ಅಗ್ನಿಶಾಮಕ ದಳ, ಎಎಫ್ಎಡಿ ತಂಡಗಳು ಸ್ಪಂದಿಸಿವೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ, ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 6 ಎಂದು ತಿಳಿಸಿದ್ದಾರೆ.
❗Blast hits central #Istanbul, local media report. pic.twitter.com/s95VcL1BRr
— NonMua (@NonMyaan) November 13, 2022
ಘಟನೆ ಬಳಿಕ ಅನೇಕರು ಸಾಮಾಜಿಕ ಜಾಲ ತಾಣಗಳಲ್ಲಿ ವಿಡಿಯೋ, ಫೋಟೋ ಹಂಚಿಕೊಂಡಿದ್ದಾರೆ. ಆದರೆ, ಇಲ್ಲಿ ತನಕ ಘಟನೆಗೆ ಏನು ಕಾರಣ, ಈ ಸ್ಫೋಟದ ಹಿಂದೆ ಯಾವುದಾದರೂ ಉಗ್ರ ಸಂಘಟನೆಯ ಕೈವಾಡ ಇದೆಯೇ? ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ.
2015 ಹಾಗೂ 2017ರಲ್ಲಿ ಇಸ್ಲಾಮಿಕ್ ಸ್ಟೇಟ್ ಗುಂಪು ಹಾಗೂ ಕುರ್ದೀಶ್ ಬಂಡಾಯಕೋರರ ಗುಂಪಿನಿಂದ ಟರ್ಕಿ ಮೇಲೆ ಸತತ ಬಾಂಬ್ ದಾಳಿ ನಡೆದಿತ್ತು. 2022ರ ನ.13ರ ಸ್ಫೋಟ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆ ಅನಾಡೋಲು ವರದಿ ಮಾಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications