ನಸೀಬು ಖೋತಾ ಹೈಟಿ ಜನರ ಪಾಲಿಗೆ ಇದೆಲ್ಲಿಯ ಚಂಡಮಾರುತ?
ಹೈಟಿ, ಅಕ್ಟೋಬರ್ 7: ಹರಿಕೇನ್ ಚಂಡ ಮಾರುತದಿಂದ ಸಾವಿನ ಸಂಖ್ಯೆಯಲ್ಲಿ ಇಷ್ಟೊಂದು ಏರಿಕೆ ಆಗುತ್ತಿರುವುದು ಇತರ ರೀತಿಯಲ್ಲೂ ಪರಿಣಾಮ ಬೀರುತ್ತದೆ. ಹೈಟಿ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಹಲವು ದಶಕಗಳಿಂದ ಇಲ್ಲಿ ಮೂಲಸೌಕರ್ಯ ಕೊರತೆ ಎದುರಾಗಿದೆ. 2010ರಲ್ಲಿ ಭೂಕಂಪವಾಗುವ ಮುಂಚೆಯೂ ಇತರ ಅನಾಹುತಗಳು ಸಂಭವಿಸಿ, ಪರಿಸ್ಥಿತಿಯನ್ನು ಮತ್ತೂ ಕ್ಲಿಷ್ಟಕರ ಮಾಡಿದವು.
ಎಲ್ಲವೂ ಸರಿಯಾಗಿದೆ ಎನ್ನುವಾಗಲೂ ಇಲ್ಲಿನ ಯಾವುದೇ ಸಮುದಾಯ ವ್ಯವಸ್ಥೆಗಳ ಮೇಲೆ ನಂಬಿಕೆ ಇಡುವಂತಿರಲಿಲ್ಲ. ಈ ಎಲ್ಲ ಸವಾಲುಗಳು ಮತ್ತು ಇತರ ಕೆಲವು ಕಾರಣಗಳಿಗಾಗಿ ಸರಕಾರಕ್ಕೆ ಚಂಡಮಾರುತದಿಂದ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಹಲವರ ಪ್ರಕಾರ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಲಿದೆ. ಮುಖ್ಯವಾಗಿ ಸರಕಾರ ಅದ್ಯಾವ ಪ್ರಮಾಣದಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಬಹುದೋ ಸಿದ್ಧತೆ ಮಾಡಿಕೊಳ್ಳಬಹುದೋ ಅದನ್ನು ಮಾಡುತ್ತಿದೆ.[ಹರಿಕೇನ್ ಚಂಡಮಾರುತ ಹೊಡೆತಕ್ಕೆ ಹೈಟಿ ದೇಶದಲ್ಲಿ 280 ಸಾವು]

ಸ್ಥಳಾಂತರ ಮಾಡುವುದಕ್ಕೆ ಅಧಿಕಾರಿಗಳು ಸೂಚಿಸಿದಾಗ ಹಲವು ಜನರು ನಂಬಲಿಲ್ಲ. ಆ ಕಾರಣಕ್ಕೆ ಸಾವಿನ ಪ್ರಮಾಣ ಹೆಚ್ಚಾಗಿದೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಅವರಿಗೆ ಈ ಸಾವಿನ ಸಂಕೆ ಯಾವುದೇ ಆಶ್ಚರ್ಯ ತಂದಿಲ್ಲ. ನಾವಿನ್ನೂ ಅವಶೇಷಗಳಡಿ ಜನರನ್ನು ಹುಡುಕಬೇಕಿದೆ. ಇದು ತುಂಬ ದುಃಖಕರ ವಿಷಯ. ಆದರೆ ಬೇರೆ ದಾರಿಯಿಲ್ಲ ಎಂದು ಅವರು ಹೇಳಿದ್ದಾರೆ.
ಹೈಟಿಯಲ್ಲಿ ವಿಶ್ವಸಂಸ್ಥೆಯ ಎಂಜೋ ಡಿ ಟರಂಟೋ ಪ್ರಕಾರ, ಇದು ಪರಿಸರ, ಕೃಷಿ ಹಾಗೂ ಜಲ ವ್ಯವಸ್ಥೆ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಶಾಲೆ, ಆಸ್ಪತ್ರೆ, ಪೊಲೀಸ್ ಠಾಣೆಗಳು ಎಲ್ಲವೂ ಚಂಡಮಾರುತದ ಹೊಡೆತದಲ್ಲಿ ಸಿಲುಕಿ ಜಖಂ ಅಗಿವೆ. ಒಂದು ಕೋಟಿ ಹತ್ತು ಲಕ್ಷ ಜನಸಂಖ್ಯೆಯ ಈ ದೇಶದಲ್ಲಿ ಈಗಾಗಲೇ ತಡವಾಗಿರುವ ರಾಷ್ಟ್ರಾಧ್ಯಕ್ಷರ ಆಯ್ಕೆ ಚುನಾವಣೆಯನ್ನು ಭಾನುವಾರ ನಿಗದಿ ಮಾಡಲಾಗಿತ್ತು. ಆದರೆ ಅದೀಗ ಮುಂದೂಡುವಂತಾಗಿದೆ.[ಹರಿಕೇನ್ ಮಾಥ್ಯೂ ಚಂಡಮಾರುತ: 20 ಲಕ್ಷ ಮಂದಿ ಸ್ಥಳಾಂತರ!]
2010ರ ಭೂಕಂಪದ ನಂತರ ಪರಿಹರಿಸಲಾಗದ ಹಲವು ಸಮಸ್ಯೆಗಳಿದ್ದವು. ಅಂತರರಾಷ್ಟ್ರೀಯ ಮಟ್ಟದ ಗುಂಪುಗಳೇ ಇಲ್ಲಿ ಸರಕಾರದಂತೆ ಕಾರ್ಯ ನಿರ್ವಹಿಸುತ್ತಿದ್ದವು. ಈ ಬಾರಿ ಸರಕಾರವೇ ಮುಂದಾಳತ್ವ ವಹಿಸುವುದಾಗಿ ತಿಳಿಸಿದೆ. ದಾನಿಗಳು ನೀಡುವ ನೀರು, ಆಹಾರ ಹಾಗೂ ಹಣದ ನೆರವನ್ನು ಜನರಿಗೆ ತಲುಪಿಸುವ ಜವಬ್ದಾರಿ ತೆಗೆದುಕೊಳ್ಳುವುದಾಗಿ ಹೇಳುತ್ತಿದ್ದರೂ ಅದರಲ್ಲೂ ಕೆಲ ಮಿತಿಗಳು, ಸಮಸ್ಯೆಗಳು ಇವೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications