Narendra Modi: ಕೆಲವೇ ಕ್ಷಣಗಳಲ್ಲಿ ಉಕ್ರೇನ್ ತಲುಪಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ!
ಭಾರತದ ಇತಿಹಾಸದಲ್ಲಿ ಇಂದು ಹೊಸ ಘಟನೆ ಸಂಭವಿಸಲಿದೆ, ರಷ್ಯಾ & ಉಕ್ರೇನ್ ಯುದ್ಧ ಭೀಕರವಾದ ಸಮಯದಲ್ಲೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಕ್ರೇನ್ ನೆಲಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈ ಮೂಲಕ ಭಾರತದ ಪ್ರಧಾನಿ ಒಬ್ಬರು ಉಕ್ರೇನ್ ಸ್ವತಂತ್ರ ದೇಶವಾದ ನಂತರ ಮೊಟ್ಟ ಮೊದಲಿಗೆ ಭೇಟಿ ನೀಡುತ್ತಿದ್ದಾರೆ. ಇದರ ಜೊತೆಗೆ ರಷ್ಯಾ ಮತ್ತು ಉಕ್ರೇನ್ ಯುದ್ಧಕ್ಕೆ ಒಂದು ಅಂತ್ಯ ಹಾಡುವ ಪ್ರಯತ್ನ ಕೂಡ ಇಲ್ಲಿಂದಲೇ ಶುರುವಾಗಲಿದೆ.
ಹೌದು, ಪ್ರಧಾನಿ ಮೋದಿ ಅವರು ಇದೀಗ ತಮ್ಮ ಅತ್ಯಂತ ಮಹತ್ವದ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಅದರಲ್ಲೂ ಭಯದ ಕೂಪಕ್ಕೆ ತಳ್ಳಿರುವ ರಷ್ಯಾ & ಉಕ್ರೇನ್ ಯುದ್ಧಕ್ಕೆ ಒಂದು ತಡೆ ಹಾಕಲು ಭಾರತದ ಪ್ರಧಾನಿಯೇ ಖುದ್ದಾಗಿ ಎಂಟ್ರಿ ಕೊಡುತ್ತಿದ್ದಾರೆ. ಈ ಮೂಲಕವಾಗಿ, ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿ ಮತ್ತೊಮ್ಮೆ ಗೊತ್ತಾಗಲಿದೆ. ಕೆಲವು ದಿನಗಳ ಹಿಂದಷ್ಟೇ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಭೆಯನ್ನ ನಡೆಸಿದ್ದರು, ಅಲ್ಲದೆ ಇದು ಯುದ್ಧ ಮಾಡುವ ಕಾಲಘಟ್ಟವಲ್ಲ ಎಂಬುದನ್ನು ಕೂಡ ಅವರು ಒತ್ತಿ ಹೇಳಿದ್ದರು. ಇದೀಗ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆಗೆ ಚರ್ಚೆ ಮಾಡಲಿದ್ದಾರೆ ಪಿಎಂ ಮೋದಿ.

3ನೇ ಮಹಾಯುದ್ಧ ನಿಲ್ಲಿಸಬೇಕಿದೆ!
ಅಂದಹಾಗೆ, ರಷ್ಯಾ & ಉಕ್ರೇನ್ ಯುದ್ಧಕ್ಕೆ ಆದಷ್ಟು ಬೇಗ ಒಂದು ತಡೆ ಹಾಕಬೇಕಿದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಬೇಕಿದೆ. ಇಲ್ಲವಾದರೆ ಈ ಇಬ್ಬರ ನಡುವೆ ನಡೆಯುತ್ತಿರುವ ಯುದ್ಧವೇ 3ನೇ ಮಹಾಯುದ್ಧಕ್ಕೆ ದಾರಿ ಮಾಡಿಕೊಡುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ. ಇಂತಹ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಈಗಾಗಲೇ ಉಕ್ರೇನ್ ಕಡೆಗೆ ಪ್ರಯಾಣ ಆರಂಭ ಮಾಡಿರುವ ಪಿಎಂ ಮೋದಿ, ಇನ್ನೇನು ಕೆಲವೇ ಗಂಟೆಗಳಲ್ಲಿ ಉಕ್ರೇನ್ ಅಧ್ಯಕ್ಷರ ಜೊತೆಯಲ್ಲಿ ಮಾತುಕತೆಯ ಆರಂಭಿಸಲಿದ್ದಾರೆ. ಪೋಲೆಂಡ್ ಮೂಲಕ ರೈಲು ಮಾರ್ಗವಾಗಿ ಪ್ರಧಾನಿ ಮೋದಿ ಅವರು ಈಗ ಉಕ್ರೇನ್ಗೆ ಪ್ರಯಾಣ ಶುರು ಮಾಡಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಚಾರ ಮಾಡಲಿರುವ ರೈಲು ಮಾರ್ಗದಲ್ಲಿ ಅತಿಹೆಚ್ಚು ಭದ್ರತೆ ಒದಗಿಸಲಾಗಿದೆ.
'ಟ್ರೇನ್ ಪೋರ್ಸ್ ಒನ್' ರೈಲು!
ಅಷ್ಟಕ್ಕೂ ಇದೀಗ ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧವು ಘೋರವಾಗಿದೆ. ಅದರಲ್ಲೂ ಈ ಯುದ್ಧದಲ್ಲಿ ವೈಮಾನಿಕ ದಾಳಿ ಹೆಚ್ಚಾಗಿದ್ದು, ಪ್ರಧಾನಿ ಮೋದಿ ಅವರನ್ನು ಉಕ್ರೇನ್ ನೆಲಕ್ಕೆ ತೆರಳುವಂತೆ ವ್ಯವಸ್ಥೆ ಮಾಡಲು ರೈಲು ಮಾರ್ಗದ ವ್ಯವಸ್ಥೆ ಮಾಡಲಾಗಿದೆ. 'ಟ್ರೇನ್ ಪೋರ್ಸ್ ಒನ್' ಹೆಸರಿನ ವಿಶೇಷ ರೈಲಿನಲ್ಲಿ ಪ್ರಧಾನಿ 20 ಗಂಟೆಗಳ ಕಾಲ ಪ್ರಯಾಣಿಸಲಿದ್ದಾರೆ. ಒಂದ್ಕಡೆ ಉಕ್ರೇನ್ ರಾಜಧಾನಿಗೆ ತೆರಳಲು ಮೋದಿ ಅವರಿಗೆ 10 ಗಂಟೆ ಕಾಲಾವಕಾಶ ಬೇಕಿದೆ. ಚರ್ಚೆ ನಂತರ ಮತ್ತೆ ಪೋಲೆಂಡ್ ವಾಪಸ್ ಬರಲು ಪ್ರಧಾನಿ ಮೋದಿ ಅವರು ಸಜ್ಜಾಗಲಿದ್ದು ಆಗ ಕೂಡ 10 ಗಂಟೆಗಳ ಕಾಲ ಮತ್ತೆ ರೈಲು ಪ್ರಯಾಣ ಮಾಡಲಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications