ಕ್ವೆಟ್ಟಾದಲ್ಲಿ ಈ ವರ್ಷ ಉಗ್ರರ ದಾಳಿಯಲ್ಲಿ ಸತ್ತವರು 227 ಮಂದಿ
2006ರಲ್ಲಿ ಕಾಲೇಜಿನ ಮೇಲೆ ನಡೆದ ದಾಳಿಯಲ್ಲಿ ಭಯೋತ್ಪಾದನಾ ನಿಗ್ರಹ ದಳದ ಆರು ಪೊಲೀಸರು ಮೃತಪಟ್ಟಿದ್ದರು. ಐದು ಪ್ರಬಲ ಸ್ಫೋಟಗಳು ಸಂಭವಿಸಿದ್ದವು.
ಕ್ವೆಟ್ಟಾ, ಅಕ್ಟೋಬರ್ 25: ಕ್ವೆಟ್ಟಾದಲ್ಲಿ ಮತ್ತೊಮ್ಮೆ ದಾಳಿಯಾಗಿದೆ. 2016ರಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 227. ಈ ವರ್ಷದಲ್ಲೇ ಕನಿಷ್ಠ 36 ವಿವಿಧ ಕೃತ್ಯಗಳನ್ನು ಉಗ್ರರು ಮಾಡಿದ್ದಾರೆ. ಇವುಗಳಲ್ಲಿ 227 ಮಂದಿ ಪ್ರಾಣ ಕಳೆದುಕೊಂಡಿದ್ದು, 330ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸೋಮವಾರ ರಾತ್ರಿ ಪೊಲೀಸ್ ತರಬೇತಿ ಕಾಲೇಜಿನಲ್ಲಿ ನಡೆದ ಉಗ್ರರ ದಾಳಿಯಲ್ಲಿ 57 ಕೆಡೆಟ್ ಗಳು ಸಾವನ್ನಪ್ಪಿದ್ದಾರೆ. ಈ ಉಗ್ರರು ಆಫ್ಘನಿಸ್ತಾನದ ಉಗ್ರರೊಂದಿಗೆ ಸಂಪರ್ಕದಲ್ಲಿದ್ದರು. ಆದರೆ ಯಾವ ಸಂಘಟನೆ ಈ ಕೃತ್ಯ ಎಸಗಿದೆ ಎಂಬುದು ಸ್ಪಷ್ಟವಾಗಿದೆ 2006, 2008ರಲ್ಲೂ ಈ ತರಬೇತಿ ಕಾಲೇಜಿನ ಮೇಲೆ ದಾಳಿಯಾಗಿತ್ತು.[ಕ್ವೆಟ್ಟಾದಲ್ಲಿ ಭೀಕರ ಹತ್ಯಾಕಾಂಡ : 57 ಕೆಡೆಟ್ ಗಳ ಮಾರಣಹೋಮ]

2006: ಆಗ ಕಾಲೇಜಿನ ಮೇಲೆ ನಡೆದ ದಾಳಿಯಲ್ಲಿ ಭಯೋತ್ಪಾದನಾ ನಿಗ್ರಹ ದಳದ ಆರು ಪೊಲೀಸರು ಮೃತಪಟ್ಟಿದ್ದರು. ಐದು ಪ್ರಬಲ ಸ್ಫೋಟಗಳು ಸಂಭವಿಸಿದ್ದವು.
2008: ಉಗ್ರರು ರಾಕೆಟ್ ಹಾಗೂ ಗುಂಡುಗಳಿಂದ ದಾಳಿ ನಡೆಸಿದ್ದರು. ಅ ದಾಳಿಯಲ್ಲಿ ವ್ಯಕ್ತಿಯೊಬ್ಬನಿಗೆ ಗಾಯವಾಗಿತ್ತು. ಅದೇ ದಿನ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸ್ಫೋಟವಾಗಿತ್ತು.[ಪಾಕಿಸ್ತಾನದ ಕ್ವೆಟ್ಟಾದ ಆಸ್ಪತ್ರೆಯಲ್ಲಿ ಸ್ಫೋಟ, 93 ಸಾವು]
ಕಳೆದ ಆಗಸ್ಟ್ ನಲ್ಲಿ ಕ್ವೆಟ್ಟಾದ ಆಸ್ಪತ್ರೆ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ 73 ಮಂದಿ ಸಾವನ್ನಪ್ಪಿದರು. ವಕೀಲರು ತಮ್ಮ ಸಹವರ್ತಿಯೊಬ್ಬರ ಸಾವಿನ ಶೋಕಾಚರಣೆಯಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಘಟನೆ ಸಂಭವಿಸಿತ್ತು. ಆ ದಾಳಿಯ ಜವಾಬ್ದಾರಿಯನ್ನು ಐಎಸ್ ಗುಂಪು ಹಾಗೂ ಜಮಾತ್ ಉಲ್ ಅಹ್ರಾರ್ ಹೊತ್ತಿಕೊಂಡಿದ್ದವು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications