ಕ್ವೆಟ್ಟಾದಲ್ಲಿ ಈ ವರ್ಷ ಉಗ್ರರ ದಾಳಿಯಲ್ಲಿ ಸತ್ತವರು 227 ಮಂದಿ
2006ರಲ್ಲಿ ಕಾಲೇಜಿನ ಮೇಲೆ ನಡೆದ ದಾಳಿಯಲ್ಲಿ ಭಯೋತ್ಪಾದನಾ ನಿಗ್ರಹ ದಳದ ಆರು ಪೊಲೀಸರು ಮೃತಪಟ್ಟಿದ್ದರು. ಐದು ಪ್ರಬಲ ಸ್ಫೋಟಗಳು ಸಂಭವಿಸಿದ್ದವು.
ಕ್ವೆಟ್ಟಾ, ಅಕ್ಟೋಬರ್ 25: ಕ್ವೆಟ್ಟಾದಲ್ಲಿ ಮತ್ತೊಮ್ಮೆ ದಾಳಿಯಾಗಿದೆ. 2016ರಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 227. ಈ ವರ್ಷದಲ್ಲೇ ಕನಿಷ್ಠ 36 ವಿವಿಧ ಕೃತ್ಯಗಳನ್ನು ಉಗ್ರರು ಮಾಡಿದ್ದಾರೆ. ಇವುಗಳಲ್ಲಿ 227 ಮಂದಿ ಪ್ರಾಣ ಕಳೆದುಕೊಂಡಿದ್ದು, 330ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸೋಮವಾರ ರಾತ್ರಿ ಪೊಲೀಸ್ ತರಬೇತಿ ಕಾಲೇಜಿನಲ್ಲಿ ನಡೆದ ಉಗ್ರರ ದಾಳಿಯಲ್ಲಿ 57 ಕೆಡೆಟ್ ಗಳು ಸಾವನ್ನಪ್ಪಿದ್ದಾರೆ. ಈ ಉಗ್ರರು ಆಫ್ಘನಿಸ್ತಾನದ ಉಗ್ರರೊಂದಿಗೆ ಸಂಪರ್ಕದಲ್ಲಿದ್ದರು. ಆದರೆ ಯಾವ ಸಂಘಟನೆ ಈ ಕೃತ್ಯ ಎಸಗಿದೆ ಎಂಬುದು ಸ್ಪಷ್ಟವಾಗಿದೆ 2006, 2008ರಲ್ಲೂ ಈ ತರಬೇತಿ ಕಾಲೇಜಿನ ಮೇಲೆ ದಾಳಿಯಾಗಿತ್ತು.[ಕ್ವೆಟ್ಟಾದಲ್ಲಿ ಭೀಕರ ಹತ್ಯಾಕಾಂಡ : 57 ಕೆಡೆಟ್ ಗಳ ಮಾರಣಹೋಮ]

2006: ಆಗ ಕಾಲೇಜಿನ ಮೇಲೆ ನಡೆದ ದಾಳಿಯಲ್ಲಿ ಭಯೋತ್ಪಾದನಾ ನಿಗ್ರಹ ದಳದ ಆರು ಪೊಲೀಸರು ಮೃತಪಟ್ಟಿದ್ದರು. ಐದು ಪ್ರಬಲ ಸ್ಫೋಟಗಳು ಸಂಭವಿಸಿದ್ದವು.
2008: ಉಗ್ರರು ರಾಕೆಟ್ ಹಾಗೂ ಗುಂಡುಗಳಿಂದ ದಾಳಿ ನಡೆಸಿದ್ದರು. ಅ ದಾಳಿಯಲ್ಲಿ ವ್ಯಕ್ತಿಯೊಬ್ಬನಿಗೆ ಗಾಯವಾಗಿತ್ತು. ಅದೇ ದಿನ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸ್ಫೋಟವಾಗಿತ್ತು.[ಪಾಕಿಸ್ತಾನದ ಕ್ವೆಟ್ಟಾದ ಆಸ್ಪತ್ರೆಯಲ್ಲಿ ಸ್ಫೋಟ, 93 ಸಾವು]
ಕಳೆದ ಆಗಸ್ಟ್ ನಲ್ಲಿ ಕ್ವೆಟ್ಟಾದ ಆಸ್ಪತ್ರೆ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ 73 ಮಂದಿ ಸಾವನ್ನಪ್ಪಿದರು. ವಕೀಲರು ತಮ್ಮ ಸಹವರ್ತಿಯೊಬ್ಬರ ಸಾವಿನ ಶೋಕಾಚರಣೆಯಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಘಟನೆ ಸಂಭವಿಸಿತ್ತು. ಆ ದಾಳಿಯ ಜವಾಬ್ದಾರಿಯನ್ನು ಐಎಸ್ ಗುಂಪು ಹಾಗೂ ಜಮಾತ್ ಉಲ್ ಅಹ್ರಾರ್ ಹೊತ್ತಿಕೊಂಡಿದ್ದವು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications