ಬಹ್ರೇನ್ ನಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ರಾಹುಲ್ ಗಾಂಧಿ ಭಾಷಣ
ಮನಾಮ (ಬಹ್ರೇನ್), ಜನವರಿ 8: ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಬಹ್ರೇನ್ ಪ್ರವಾಸದಲ್ಲಿದ್ದಾರೆ. ಅವರಿಂದು ಬಹ್ರೇನ್ ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾದ ನಂತರ ಕೈಗೊಳ್ಳುತ್ತಿರುವ ಮೊದಲ ವಿದೇಶಿ ಪ್ರವಾಸ ಇದಾಗಿದೆ. ಅವರು ತಮ್ಮ ಚೊಚ್ಚಲ ವಿದೇಶಿ ಪ್ರವಾಸವನ್ನು ಕೊಲ್ಲಿ ರಾಷ್ಟ್ರ ಬಹ್ರೇನ್ ನಿಂದ ಆರಂಭಿಸಿದ್ದಾರೆ.
ಇದಕ್ಕೂ ಮೊದಲು ನಿನ್ನೆ ರಾತ್ರಿ ಬಹ್ರೇನ್ ತಲುಪಿದ ರಾಹುಲ್ ಗಾಂಧಿಯವರಿಗೆ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಕೋರಲಾಯಿತು.

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕರಾದ ಶಶಿ ತರೂರ್, ಮಿಲಿಂದ ದೇವೋರಾ, ಮಧುಗೌಡ್ ಭಕ್ಷಿ ಮತ್ತು ಉದ್ಯಮಿ ಸ್ಯಾಮ್ ಪಿತ್ರೋಡಾ ರಾಹುಲ್ ಗಾಂಧಿಯವರಿಗೆ ಆದರದ ಸ್ವಾಗತ ಕೋರಿದರು.ಪ್ರವಾಸದ ವೇಳೆ ರಾಹುಲ್ ಗಾಂಧಿ ಬಹ್ರೇನ್ ರಾಜ ಸಲ್ಮಾನ್ ಬಿನ್ ಹಮಾಸ್ ಅಲ್ ಖಲೀಫಾರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
Euphoric reception for Congress President Rahul Gandhi on his arrival at Kingdom of Bahrain. This is CP’s first foreign visit after his takeover. pic.twitter.com/zsGOaXnwCv
— Congress (@INCIndia) January 7, 2018
ಜತೆಗೆ ಇಂದು 'ದಿ ಗಲ್ಫ್ ಹೊಟೇಲ್'ನಲ್ಲಿ ರಾತ್ರಿ 8.30 ನಿಮಿಷಕ್ಕೆ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೊದಲ ವಿದೇಶಿ ಭೇಟಿಯಾಗಿರುವುದರಿಂದ ರಾಹುಲ್ ಭಾಷಣವನ್ನು ಕುತೂಹಲದ ಕಣ್ಣುಗಳು ಎದುರು ನೋಡುತ್ತಿವೆ.
Congress President Rahul Gandhi to address PIOs in Bahrain. Catch him live on his Facebook page: https://t.co/PZOFYtxBJo#RahulGandhiInBahrain pic.twitter.com/H9gRBljM4K
— Congress (@INCIndia) January 8, 2018
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications