ಅಮೆರಿಕಾದಲ್ಲಿ ರಾಹುಲ್ ಗಾಂಧಿಯನ್ನು ತರಾಟೆ ತೆಗೆದುಕೊಂಡ ಖಲಿಸ್ತಾನಿ ಬೆಂಬಲಿಗರು
ವಾಷಿಂಗ್ಟನ್, ಜೂನ್. 01: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಘೋಷಣೆಗಳನ್ನು ಕೂಗಿದ ಖಾಲಿಸ್ತಾನಿ ಬೆಂಬಲಿಗರ ಗುಂಪೊಂದು ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಇದರ ಜೊತೆಗೆ ಅವರ ಭಾಷಣಕ್ಕೆ ಕೆಲ ಕಾಲ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ.
ಮಂಗಳವಾರ ಸಾಂತಾ ಕ್ಲಾರಾದಲ್ಲಿ ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಯುಎಸ್ಎ ಆಯೋಜಿಸಿದ್ದ 'ಮೊಹಬ್ಬತ್ ಕಿ ದುಕಾನ್' ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಿದ್ದಾಗ, 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಸಭಿಕರಿಂದ ಕೆಲವರು ರಾಹುಲ್ ಗಾಂಧಿ ಮತ್ತು ಗಾಂಧಿ ಕುಟುಂಬದ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು.

ಈ ಘೋಷಣೆಗಳಿಂದ ಉದ್ವಿಗ್ನಗೊಳ್ಳದ ರಾಹುಲ್ ಗಾಂಧಿಯವರು ಘೋಷಣೆಗಳಿಗೆ ಪ್ರತಿಕ್ರಿಯೆಯಾಗಿ ಮುಗುಳ್ನಕ್ಕು ಹೇಳಿದರು: "ಸ್ವಾಗತ, ಸ್ವಾಗತ ನಫ್ರತ್ ಕೆ ಬಜಾರ್ ಮೇ ಮೊಹಬ್ಬತ್ ಕಿ ದುಕನ್" (ಸ್ವಾಗತ, ಸ್ವಾಗತ...ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ) ಎಂದು ಹೇಳಿದ್ದಾರೆ. ಬಳಿಕ 52 ವರ್ಷದ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಬೆಂಬಲಿಗರೊಂದಿಗೆ, ಸಭಿಕರೊಂದಿಗೆ ಸೇರಿಕೊಂಡು 'ಭಾರತ್ ಜೋಡೋ' ಘೋಷಣೆಗಳನ್ನು ಕೂಗಿದ್ದಾರೆ.
"ನಮ್ಮಲ್ಲಿ, ಕಾಂಗ್ರೆಸ್ ಪಕ್ಷದ ಬಗ್ಗೆ ಕುತೂಹಲಕಾರಿ ಸಂಗತಿಯೆಂದರೆ, ನಮಗೆ ಎಲ್ಲರ ಬಗ್ಗೆ ಪ್ರೀತಿ ಇದೆ, ಯಾರಾದರೂ ಬಂದು ಏನಾದರೂ ಹೇಳಲು ಬಯಸಿದರೆ, ಅವರು ಏನು ಹೇಳುತ್ತಿದ್ದಾರೆ ಎಂಬುದನ್ನು ಲೆಕ್ಕಿಸದೆ ನಾವು ಅವರ ಮಾತನ್ನು ಕೇಳಲು ಸಂತೋಷಪಡುತ್ತೇವೆ. ನಾವು ಕೋಪಗೊಳ್ಳುವುದಿಲ್ಲ, ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸುವುದಿಲ್ಲ. ನಾವು ಅದನ್ನು ಕೇಳುತ್ತೇವೆ. ವಾಸ್ತವವಾಗಿ, ನಾವು ಅವರೊಂದಿಗೆ ಪ್ರೀತಿಯಿಂದ ವರ್ತಿಸುತ್ತೇವೆ, ಅವರನ್ನು ಪ್ರೀತಿಸುತ್ತೇವೆ. ಏಕೆಂದರೆ ಅದು ನಮ್ಮ ಸ್ವಭಾವ" ಎಂದು ತಿರುಗೇಟು ನೀಡಿದ್ದಾರೆ.

ಘಟನೆಯ ಕ್ಲಿಪ್ ಅನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡ ಬಿಜೆಪಿ ನಾಯಕ ಅಮಿತ್ ಮಾಳವಿಯಾ, " ರಾಹುಲ್ ಗಾಂಧಿ ಅವರು 1984 ರ ಸಿಖ್ ಹತ್ಯಾಕಾಂಡಕ್ಕೆ ಅಮೆರಿಕದಲ್ಲಿ ಪ್ರತಿಕ್ರಿಯೆ... ಐಸಿ ನಫ್ರತ್ ಕಿ ಆಗ್ ಲಗಾಯಿ ಥಿ, ಜೋ ಅಬ್ ತಕ್ ನಹೀ ಬುಜಿ ( ನೀವು ಹೊತ್ತಿಸಿದ ದ್ವೇಷದ ಬೆಂಕಿ ಇನ್ನೂ ಉರಿಯುತ್ತಿದೆ)" ಎಂದು ಹೇಳಿದ್ದಾರೆ.
Rahul Gandhi heckled for the 1984 Sikh genocide (unleashed by the Congress), in America…
— Amit Malviya (@amitmalviya) May 31, 2023
ऐसी नफ़रत की आग लगायी थी, जो अब तक नहीं बुझी। pic.twitter.com/ind5ZcIym8
ಅಮಿತ್ ಮಾಳವಿಯಾ ಅವರ ಟೀಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇಟ್ ಅವರು ರಾಹುಲ್ ಗಾಂಧಿಯನ್ನು ವಿರೋಧಿಸಲು ಖಲಿಸ್ತಾನ್ ಪರ ಅಂಶಗಳನ್ನು ಏಕೆ ಬೆಂಬಲಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications