ಕೈಲಾಸ ಯಾತ್ರೆಯಲ್ಲಿ ಶಿವಭಕ್ತ ರಾಹುಲ್ ಗಾಂಧಿ: ವಿಡಿಯೋ, ಚಿತ್ರ
Recommended Video

ಕಠ್ಮಂಡು, ಸೆಪ್ಟೆಂಬರ್ 07: ಕೈಲಾಸ ಮಾನಸ ಸರೋವರ ಯಾತ್ರೆಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಚಿತ್ರಗಳು ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಆಗಸ್ಟ್ 31 ರಂದು ಕೈಲಾಸ ಮಾನಸ ಸರೋವರ ಯಾತ್ರೆ ಆರಂಭಿಸಿರುವ ರಾಹುಲ್ ಗಾಂಧಿ, ತಮ್ಮ ಯಾತ್ರೆಯ ಅನುಭವಗಳನ್ನು ದಿನೇ ದಿನೇ ಟ್ವಿಟ್ಟರ್ ಮೂಲಕ ಹಂಚಿಕೊಳ್ಳುತ್ತಿದ್ದಾರೆ.
ಏಪ್ರಿಲ್ 26 ರಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರಚಾರಕ್ಕೆಂದು ಹುಬ್ಬಳ್ಳಿಗೆ ಬಂದಿದ್ದ ರಾಹುಲ್ ಗಾಂಧಿ ಅವರ ವಿಮಾನ ಭಾರೀ ಅವಘಡದಿಂದ ಪಾರಾಗಿತ್ತು. ಅದಕ್ಕಾಗಿ ದೇವರ ಆಶೀರ್ವಾದ ಪಡೆಯಲು ರಾಹುಲ್ ಗಾಂಧಿ ಈ ಯಾತ್ರೆ ಕೈಗೊಂಡಿದ್ದಾರೆ.
| Array |
ರಾಹುಲ್ ಗಾಂಧಿ ವಿಡಿಯೋ
ಸಹ ಯಾತ್ರಿಗಳೊಂದಿಗೆ ರಾಹುಲ್ ಗಾಂಧಿ ಆತ್ಮೀಯವಾಗಿ ಹರಟುತ್ತಿರುವ ವಿಡಿಯೋವೊಂದು ಟ್ವಿಟ್ಟರ್ ನಲ್ಲಿ ವಿರಲ್ ಆಗಿದೆ. ಕೈಲಾಸ ಮಾನಸ ಯಾತ್ರೆಯ ಮೊದಲ ದಿನ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ ಅವರು ಕೈಲಾಸ ಪರ್ವತದೊಂದಿಗೆ 'ಅಸತೋ ಮಾ ಸದ್ಗಮಯ, ತಮಸೋ ಮಾ ಜ್ಯೋತಿರ್ಗಮಯಾ, ಮೃತ್ಯೋರ್ಮಾ ಅಮೃತಂಗಮಯಾ, ಓಂ ಶಾಂತಿಃ ಶಾಂತಿಃ ಶಾಂತಿಃ' ಎಂದು ಟ್ವೀಟ್ ಮಾಡಿದ್ದರು.
| Array |
ಸಹಯಾತ್ರಿಗಳೊಂದಿಗೆ ಫೋಟೋ
ಸಹ ಯಾತ್ರಿಗಳ ಮನವಿಯ ಮೇರೆಗೆ ಅವರೊಂದಿಗೆ ರಾಹುಲ್ ಗಾಂಧಿ ಅವರು ಫೋಟೋಕ್ಕೆ ಪೋಸು ನೀಡಿದರು. ನಿನ್ನೇ ತಾನೇ ಕೈಲಾಸ ಮಾನಸ ಸರೋವರದ ಚಿತ್ರವನ್ನು ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ಈ ದೈತ್ಯ ಪರ್ವತದ ನೆರಳಲ್ಲಿ ವಿದೇಯವಾಗಿ ನಡೆಯುವುದು ಮಹಾನ್ ಅನುಭವ ಎಂದಿದ್ದರು.
| Array |
ಶಿವನೇ ಬ್ರಹ್ಮಾಂಡ
ಕೈಲಾಸ ಪರ್ವತದ ವಿಡಿಯೋವೊಂದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಾಕಿರುವ ಶಿವಭಕ್ತ ರಾಹುಲ್ ಗಾಂಧಿ, 'ಶಿವನೇ ಬ್ರಹ್ಮಾಂಡ' ಎಂದು ಟ್ವೀಟ್ ಮಾಡಿದ್ದಾರೆ. ಈ ವರ್ಷದ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ದೇವಾಲಯಗಳಿಗೆ ಪದೇ ಪದೇ ಎಡತಾಕುತ್ತಿದ್ದ ರಾಹುಲ್ ಗಾಂಧಿ, ತಾವು ಶಿವಭಕ್ತ ಎಂದು ಹೇಳಿಕೊಂಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
| Array |
ರಾಹುಲ್ ಗಾಂಧಿ ಟ್ವೀಟ್
"ಒಬ್ಬ ಮನುಷ್ಯ ಕೈಲಾಸ ಪರ್ವತಕ್ಕೆ ಹೋಗಬೇಕೆಂದರೆ, ಕೈಲಾಸ ಪರ್ವತವೇ ಆತನನ್ನು ಕರೆಸಿಕೊಳ್ಳುತ್ತದೆ. ನನಗೂ ಇಂಥ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಮಾನಸಸರೋವರದ ನೀರು ಶುದ್ಧ, ಪವಿತ್ರ ಮತ್ತು ಶಾಂತ. ಅದು ಎಲ್ಲವನ್ನೂ ನೀಡುತ್ತದೆ, ಆದರೆ ಏನನ್ನೂ ಕಿತ್ತುಕೊಳ್ಳುವುದಿಲ್ಲ. ಅದನ್ನು ಯಾರು ಬೇಕಾದರೂ ಕುಡಿಯಬಹುದು. ಇಲ್ಲಿ ಯಾವುದೇ ದ್ವೇಷವಿಲ್ಲ. ಇದಕ್ಕೆಂದೇ ನಾವು ಭಾರತೀಯರು ನೀರನ್ನು ಪೂಜಿಸುತ್ತೇವೆ" ಎಂದು ಸಹ ಈ ಮೊದಲಲು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications