ಹಲೋ ಮಿಸ್ಟರ್ ಮೋದಿ: ಅಮೆರಿಕದಲ್ಲಿ ಭಾಷಣದ ವೇಳೆ ಐಫೋನ್ ಕಿವಿಗಿಟ್ಟುಕೊಂಡ ರಾಹುಲ್ ಗಾಂಧಿ- ಕಾರಣವೇನು ಗೊತ್ತೇ?
ಕ್ಯಾಲಿಫೋರ್ನಿಯಾ ( ಅಮೆರಿಕ ) ಜೂನ್ 01: ಅಮೆರಿಕದಲ್ಲಿ ಕೃತಕ ಬುದ್ಧಿಮತ್ತೆ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಗುರುವಾರ ಕ್ಯಾಲಿಫೋರ್ನಿಯಾದಲ್ಲಿ ನಡೆದ ಭಾಷಣದ ವೇಲೆ ತಮ್ಮ ಐಫೋನ್ ಅನ್ನು ಟ್ಯಾಪ್ ಮಾಡಲಾಗುತ್ತಿದೆ ಎಂದು ಹೊಸ ಆರೋಪ ಮಾಡಿದ್ದಾರೆ. ಆರೋಪಿಸಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಕೇಂದ್ರ ಸರ್ಕಾರವು ತನ್ನ ವೈಯುಕ್ತಿಕ ಜೀವನದಲ್ಲಿ ಮಧ್ಯಪ್ರವೇಶಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ರಾಹುಲ್ ಗಾಂಧಿಯವರು ನೀಡಿದ್ದ ಹೇಳಿಕೆಗಳು ಭಾರತದಲ್ಲಿ ಭಾರೀ ಸದ್ದು ಮಾಡಿವೆ. ಅದರ ಬೆನ್ನಲ್ಲೇ ರಾಹುಲ್ ಗಾಂಧಿ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. 'ನಿಮ್ಮ ಫೋನ್ ಟ್ಯಾಪ್ ಮಾಡಲು ದೇಶದ ಸರ್ಕಾರವೊಂದು ಆಸಕ್ತಿ ಹೊಂದಿದ್ದರೆ, ಅದು ದುರಂತ. ಅದು ಹೋರಾಡಲು ಯೋಗ್ಯವಾದ ನಿಜ ಯುದ್ಧವಲ್ಲ' ಎಂದು ಹೇಳಿದ್ದಾರೆ.
ಪೆಗಾಸಸ್ ಸ್ಪೈವೇರ್ ಮತ್ತು ಅಂತಹುದೇ ಹ್ಯಾಕಿಂಗ್ ತಂತ್ರಜ್ಞಾನಗಳ ಸಮಸ್ಯೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್, 'ಒಂದು ಹಂತದಲ್ಲಿ ನನ್ನ ಫೋನ್ ಟ್ಯಾಪ್ ಆಗಿದೆ ಎಂಬುದು ನನಗೆ ತಿಳಿದಿತ್ತು' ಎಂದು ಹೇಳಿಕೆ ನೀಡಿದ್ದಾರೆ.

ಇದೇ ವೇಳೆ ತಮ್ಮ ಐಫೋನ್ ಅನ್ನು ಹೊರತೆಗೆದು 'ಹಲೋ ಮಿಸ್ಟರ್ ಮೋದಿ' ಎಂದು ತಮಾಷೆಯಾಗಿ ನುಡಿದಿದ್ದಾರೆ.
'ನನ್ನ ಐಫೋನ್ ಅನ್ನು ಟ್ಯಾಪ್ ಮಾಡಲಾಗುತ್ತಿದೆ ಎಂದು ನಾನು ಭಾವಿಸುತ್ತೇನೆ. ರಾಷ್ಟ್ರವಾಗಿ ಮತ್ತು ವ್ಯಕ್ತಿಯಾಗಿ ಡೇಟಾ ಮಾಹಿತಿಯ ಗೌಪ್ಯತೆಗೆ ಸಂಬಂಧಿಸಿದಂತೆ ನೀವು ನಿಯಮಗಳನ್ನು ಹೊಂದುವ ಅಗತ್ಯವಿದೆ. ಸರ್ಕಾರವು ನಿಮ್ಮ ಫೋನ್ ಅನ್ನು ಟ್ಯಾಪ್ ಮಾಡಲು ನಿರ್ಧರಿಸಿದರೆ, ಯಾರೂ ಅದನ್ನು ತಡೆಯಲು ಸಾಧ್ಯವಿಲ್ಲ' ಅವರು ಹೇಳಿದ್ದಾರೆ.

ಪ್ಲಗ್ ಮತ್ತು ಪ್ಲೇ ಸಭಾಂಗಣದಲ್ಲಿ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರೊಂದಿಗೆ ಸಿಲಿಕಾನ್ ವ್ಯಾಲಿ ಮೂಲದ ಸ್ಟಾರ್ಟಪ್ ಉದ್ಯಮಿಗಳೊಂದಿಗೆ ಸಂವಾದಾತ್ಮಕ ಅಧಿವೇಶನದಲ್ಲಿ ಭಾಗವಹಿಸಿದ್ದರು.
ಭಾರತದಲ್ಲಿ ತಾಂತ್ರಿಕ ಪ್ರಗತಿ ಮತ್ತು ದೂರದ ಹಳ್ಳಿಗಳಲ್ಲಿ ವಾಸಿಸುವ ನಾಗರಿಕರ ಮೇಲೆ ಅದರ ಪ್ರಭಾವದ ಕುರಿತು ಮಾತನಾಡಿದ ರಾಹುಲ್ ಗಾಂಧಿ, ಟೆಕ್ ಕಂಪನಿಗಳು ಭಾರತದಲ್ಲಿ ತಂತ್ರಜ್ಞಾನವನ್ನು ಹರಡಲು ಬಯಸಿದರೆ, ಅದರ ಶಕ್ತಿಯು ತುಲನಾತ್ಮಕವಾಗಿ ವಿಕೇಂದ್ರೀಕೃತ ವ್ಯವಸ್ಥೆಯನ್ನು ಹೊಂದಿರಬೇಕು ಎಂದು ತಿಳಿಸಿದ್ದಾರೆ.
ಅಮೆರಿಕದ ಸಾಂತಾ ಕ್ಲಾರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಬ್ರಹ್ಮಾಂಡ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಮೋದಿ ದೇವರಿಗೇ ಪಾಠ ಮಾಡಲು ಆರಂಭಿಸುತ್ತಾರೆ. ಆಗ ದೇವರು ಗೊಂದಲಕ್ಕೊಳಗಾಗುತ್ತಾನೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಟೀಕೆಗಳಿಗೆ ಪ್ರತೀಕಾರವಾಗಿ ಬಿಜೆಪಿ ಅವರನ್ನು 'ನಕಲಿ ಗಾಂಧಿ' ಎಂದು ಟೀಕಿಸಿದೆ. ವಿದೇಶಿ ನೆಲದಲ್ಲಿ ದೇಶವನ್ನು ಅವಮಾನಿಸಲು ಮತ್ತು ಭಾರತ ವಿರೋಧಿ ಪ್ರಚಾರಕ್ಕಾಗಿ ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತದೆ ಎಂದು ಬಿಜೆಪಿ ಹೇಳಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications