ಇಂಡೋನೇಷ್ಯಾದಲ್ಲಿ ಭಾರಿ ಪ್ರವಾಹ: 66 ಮಂದಿ ಸಾವು
ಜಕಾರ್ತಾ, ಜನವರಿ 6: ಇಂಡೋನೇಷ್ಯಾದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಪರಿಸ್ಥಿತಿಯಿಂದ ಜನರ ಪರದಾಟ ಮುಂದುವರಿದಿದ್ದು, ಮಳೆ ಮತ್ತು ನೆರೆಯ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 66ಕ್ಕೆ ಏರಿದೆ. ಇನ್ನೂ ಇಬ್ಬರು ಕಣ್ಮರೆಯಾಗಿದ್ದಾರೆ.
ಇತ್ತೀಚಿನ ಕೆಲವು ವರ್ಷಗಳಲ್ಲಿಯೇ ಇದು ಅತ್ಯಂತ ಭಯಾನಕ ಮಳೆಗಾಲ ಎಂಬುದಾಗಿ ಇಂಡೋನೇಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ.
ಹೊಸ ವರ್ಷದ ಹಿಂದಿನ ದಿನದಿಂದಲೂ ರಾಜಧಾನಿ ಜಕಾರ್ತಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಪ್ರವಾಹ ಪರಿಸ್ಥಿತಿ ತೀವ್ರವಾಗಿದ್ದು, ಸಾವಿರಾರು ಮಂದಿ ತಮ್ಮ ಮನೆ ತೊರೆದು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಹೊಂದುವಂತೆ ಮಾಡಿದೆ. ಶುಕ್ರವಾರ 1,73,000ಕ್ಕೂ ಅಧಿಕ ಮಂದಿ ನಿವಾಸಿಗಳು ಬೇರೆ ಸ್ಥಳಗಳಲ್ಲಿ ಆಶ್ರಯ ಕೋರಿದ್ದಾರೆ.

ಮಳೆ ಇನ್ನಷ್ಟು ಜೋರಾಗುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲಿದೆ. ಈಗಾಗಲೇ ಭಾರಿ ಪ್ರವಾಹ ಜಕಾರ್ತಾ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನುಗ್ಗಿರುವುದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬರುವ ದಿನಗಳಲ್ಲಿ ಗುಡುಗು ಸಹಿತ ಮಳೆ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೀರಿನಿಂದಾಗಿ ಆರೋಗ್ಯದ ಸಮಸ್ಯೆಗಳು ಉಂಟಾಗುವ ಅಪಾಯವಿರುವುದರಿಂದ ಅಧಿಕಾರಿಗಳು ಮತ್ತು ರೆಡ್ ಕ್ರಾಸ್, ರಾಜಧಾನಿಯ ಎಲ್ಲೆಡೆ ಸೋಂಕು ನಿವಾರಕ ಔಷಧಗಳನ್ನು ಸಂಪಡಿಸುತ್ತಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications