ದುಬೈನಲ್ಲಿ ವಿಶ್ವದ ಪ್ರಪ್ರಥಮ ಜಾಗತಿಕ 'ಕ್ಷಾತ್ರ ಸಂಗಮ - 2019'
ಮುಂಬಯಿ, ಡಿಸೆಂಬರ್ 04 : ಜಗತ್ತಿನ ಎಲ್ಲೆಡೆ ಪಸರಿಕೊಂಡು ಸೇವಾ ನಿರತ ರಾಮಕ್ಷತ್ರಿಯ ಸಮಾಜ ಬಾಂಧವರ ವಿಶ್ವ ಸಮ್ಮೇಳನ 'ಕ್ಷಾತ್ರ ಸಂಗಮ-2019' ಜಾಗತಿಕ ಸಮಾವೇಶವನ್ನು 2019ರ ಏಪ್ರಿಲ್ ಕೊನೆಯ ವಾರದಲ್ಲಿ ದುಬೈನಲ್ಲಿ ಆಯೋಜಿಸಲಾಗುತ್ತಿದೆ.
ಈ ಸಂಗತಿಯನ್ನು ವಿಶ್ವ ಕ್ಷಾತ್ರ ಸಂಗಮ - 2019 ದುಬೈ ಇದರ ಮುಖ್ಯ ಸಂಘಟಕ, ಹೆಸರಾಂತ ಸಾಮಾಜಿಕ ಕಾರ್ಯಕರ್ತ ಹಾಗೂ ಕರ್ನಾಟಕ ಎನ್ಆರ್ಐ ಫೋರಂ ಇದರ ಪ್ರಧಾನ ಕಾರ್ಯದರ್ಶಿ ಪ್ರಬಾಕರ್ ಅಂಬಲತರೆ ಮಂಗಳವಾರ ತಿಳಿಸಿದರು.
ರಾಮಕ್ಷತ್ರಿಯರ ಈ ಮಹಾಸಮ್ಮೇಳನಕ್ಕೆ ಭಾರತ ಸೇರಿದಂತೆ ಗಲ್ಫ್ ರಾಷ್ಟ್ರಗಳು, ವಿದೇಶಗಳಲ್ಲಿ ನೆಲೆಸಿ ವಿವಿಧ ಕ್ಷೇತ್ರಗಳಲ್ಲಿ ಮಿಂಚುತ್ತಿರುವ ಪ್ರತಿಭಾನ್ವಿತರು, ಸಾಧಕರು, ಗಣ್ಯರನೇಕರು ಪಾಲ್ಗೊಳ್ಳಲಿದ್ದಾರೆ.

ಸಮ್ಮೇಳನದಲ್ಲಿ ರಾಮಕ್ಷತ್ರಿಯರ ಪರಂಪರೆ, ಸಂಪ್ರದಾಯ, ಸಂಸ್ಕೃತಿ-ಸಂಸ್ಕಾರ, ಕಲೆಗಳ ಅನಾವರಣಗೊಳಿಸಲಾಗುತ್ತಿದೆ. ವಿವಿಧ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಪ್ರತಿಭಾನ್ವೇಷಣೆಗೆ ಸೂಕ್ತ ವೇದಿಕೆ ಒದಗಿಸಲಾಗುತ್ತಿದೆ. ಸಮಾಜದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುತ್ತಿದೆ.
ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತ ರಾಮಕ್ಷತ್ರಿಯ ಪ್ರತಿನಿಧಿಗಳಿಗೆ ವೀಸಾ, ಉಳಕೊಳ್ಳುವ ವ್ಯವಸ್ಥೆ ಜೊತೆಗೆ ಪ್ರವಾಸೋದ್ಯಮ ಪಯಣವಾಗಿಸಿ ದುಬೈ ಪ್ರವಾಸಕ್ಕೂ ಅವಕಾಶವಿದೆ. ಆಸಕ್ತ ರಾಮಕ್ಷತ್ರಿಯ ಬಂಧುಗಳು ತಮ್ಮ ಹೆಸರುಗಳನ್ನು ತತ್ಕ್ಷಣವೇ ನೋಂದಣಿಸಲು ಕೋರಲಾಗಿದೆ.
ವಿದೇಶದಲ್ಲಿ ಆಯೋಜಿಸುವ ಪ್ರಪ್ರಥಮ ವಿಶ್ವ ಕ್ಷಾತ್ರ ಸಂಗಮ ಇದಾಗಲಿದ್ದು, ಸಮ್ಮೇಳನದ ದಿನಾಂಕ ಹಾಗೂ ಹೆಚ್ಚಿನ ಮಾಹಿತಿಗಳ ವಿವರಗಳನ್ನು ಶೀಘ್ರವೇ ತಿಳಿಸಲಾಗುವುದು.
ದೇಶವಿದೇಶಗಳಲ್ಲಿ ವಿಶೇಷವಾಗಿ ಕರ್ನಾಟಕದಾದ್ಯಂತ ನೆಲೆಯೂರಿರುವ ರಾಮಕ್ಷತ್ರಿಯ ಬಾಂಧವರು, ರಾಮಕ್ಷತ್ರಿಯ ಸಮಾಜದ ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು, ಸದಸ್ಯರು ಸಕ್ರೀಯರಾಗಿ ಪಾಲ್ಗೊಳ್ಳುವಂತೆ ಹಾಗೂ ಸ್ವಜಾತಿ ಬಾಂಧವರು ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶಕ್ಕೆ ಸಂಪೂರ್ಣ ಬೆಂಬಲ ನೀಡಿ ಯಶಸ್ಸಿಗೆ ಸಹಕರಿಸುವಂತೆ ಸಂಘಟನಾ ಸಮಿತಿ ಮುಖ್ಯಸ್ಥರು ವಿನಂತಿಸಿದ್ದಾರೆ.
-
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ












Click it and Unblock the Notifications