ಪಾಕ್ ಮಾಜಿ ಕ್ರಿಕೆಟಿಗ ರಮೀಜ್ ರಾಜಾ ಸಿನಿಮಾಕ್ಕೆ ಸಂಜಯ್ ದತ್ ನಾಯಕ
ಸಸ್ಪೆನ್ಸ್ ಥ್ರಿಲ್ಲರ್ ಕತೆ ಇರುವ ತಮ್ಮ ಚಿತ್ರದ ಚಿತ್ರಕತೆಗೆ ಸಂಜಯ್ ದತ್ ಸೂಕ್ತ ಎಂದ ರಾಜಾ, ನಾಯಕಿಯ ಪಾತ್ರಕ್ಕೆ ಮಹೀರಾ ಖಾನ್ ಅಥವಾ ಕತ್ರಿನಾ ಕೈಫ್ ಆಯ್ಕೆಯಾಗುವ ಸಾಧ್ಯತೆ
ಕರಾಚಿ, ಫೆಬ್ರವರಿ 3: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ರಮೀಜ್ ರಾಜಾ ಅವರು ಶೀಘ್ರದಲ್ಲೇ ತಾವು ಹೊಸ ಸಿನಿಮಾದ ನಿರ್ಮಾಣಕ್ಕೆ ಕೈ ಹಾಕುತ್ತಿದ್ದು, ಆ ಸಿನಿಮಾದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಧಾನ ಭೂಮಿಕೆಯಲ್ಲಿರಲಿದ್ದಾರೆಂದು ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈಗಾಗಲೇ ಸಿನಿಮಾದ ಚಿತ್ರಕತೆ ಕೆಲಸ ಮುಗಿದಿದ್ದು, ಚಿತ್ರವು ಸಸ್ಪನ್ಸ್ ಥ್ರಿಲ್ಲರ್ ಕಥಾನಕದಿಂದ ಕೂಡಿರಲಿದೆ. ಸಾಕಷ್ಟು ಪರಾಮರ್ಶೆಗಳ ನಂತರ, ಸಂಜಯ್ ದತ್ ಅವರನ್ನು ಚಿತ್ರದ ನಾಯಕರನ್ನಾಗಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನು, ನಾಯಕಿಯ ಪಾತ್ರಕ್ಕೆ ಪಾಕಿಸ್ತಾನದವರೇ ಆದ ಮಹಿರಾ ಖಾನ್ ಹಾಗೂ ಬಾಲಿವುಡ್ ನ ಕತ್ರಿನಾ ಕೈಫ್ ರಲ್ಲಿ ಒಬ್ಬರು ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದ್ದಾರೆ.
ಏತನ್ಮಧ್ಯೆ, ಸಂಜಯ್ ದತ್ ಅವರ ಜೀವನಕಥೆಯಾಧಾರಿತ ಚಿತ್ರವೊಂದು ಬಾಲಿವುಡ್ ನಲ್ಲಿ ತಯಾರಾಗುತ್ತಿರುವುದ ಬಗ್ಗೆ ರಾಜಾ ಆಸಕ್ತಿ ತೋರಿದರು. ಚಿತ್ರದಲ್ಲಿ ಸಂಜಯ್ ದತ್ ಅವರ ಜೀವನದ ಕೆಲವಾರು ವಿವಾದಾತ್ಮಕ ಅಂಶಗಳುಳ್ಳ ಚಿತ್ರವೊಂದು ತಯಾರಾಗುತ್ತಿರುವುದು ಆಸಕ್ತಿ ಕೆರಳಿಸಿದೆ. ಚಿತ್ರದಲ್ಲಿ ಸಂಜಯ್ ದತ್ ಪಾತ್ರ ಮಾಡುತ್ತಿರುವ ರಣಬೀರ್ ಕಪೂರ್ ಅಭಿನಯದ ಬಗ್ಗೆಯೂ ಕುತೂಹಲ ಹೆಚ್ಚಿದೆ ಎಂದು ತಿಳಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications