ಶ್ರೀಲಂಕಾಗೆ ರಾನಿಲ್ ವಿಕ್ರಮಸಿಂಘೆ ನೂತನ ಅಧ್ಯಕ್ಷ
ಕೊಲಂಬೋ,ಜುಲೈ.20: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ನಡೆಯುತ್ತಿರುವ ಆರ್ಥಿಕ, ರಾಜಕೀಯ ಕ್ಷೋಭೆಯ ನಡುವೆ ಬುಧವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಗೆಲುವು ಸಾಧಿಸಿದ್ದಾರೆ.
ಶ್ರೀಲಂಕಾ ಸಂಸತ್ತಿನಲ್ಲಿ ಮತದಾನದ ನಂತರ ರಾನಿಲ್ ವಿಕ್ರಮಸಿಂಘೆ ಅವರು ಹೊಸ ಅಧ್ಯಕ್ಷರಾಗಿ ಆಯ್ಕೆಯಾದರು. ಅವರು 134 ಮತಗಳನ್ನು ಪಡೆದರು. ಎಸ್ಎಲ್ಪಿಪಿ ಸಂಸದ ಡಳಸ್ ಅಳಗಪೆರುಮ 82 ಮತಗಳನ್ನು ಪಡೆದರೆ, ನ್ಯಾಷನಲ್ ಪೀಪಲ್ಸ್ ಪವರ್ (ಎನ್ಪಿಪಿ) ನಾಯಕ ಅನುರ ಕುಮಾರ ಡಿಸ್ಸನಾಯಕೆ ಕೇವಲ ಮೂರು ಮತಗಳನ್ನು ಪಡೆದರು. ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾರೇ ಗೆಲುವು ಸಾಧಿಸಿದರೂ ಭಾರತದ ಸಹಾಯ ಮುಂದುವರಿಯಲಿ ಎಂದು ಸಜಿತ್ ಪ್ರೇಮದಾಸ ಇದೇ ವೇಳೆ ಮನವಿ ಮಾಡಿದ್ದರು.
ಆರು ಬಾರಿ ದ್ವೀಪ ರಾಷ್ಟ್ರ ಶ್ರೀಲಂಕಾದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ವಿಕ್ರಮಸಿಂಘೆ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಅಗ್ರಗಣ್ಯರಾಗಿದ್ದರು. ಅವರನ್ನು ಸದನದ ಸದಸ್ಯರು ರಹಸ್ಯ ಮತದಾನದ ಮೂಲಕ ಮತ ಚಲಾಯಿಸಿ ಆಯ್ಕೆ ಮಾಡಿದರು. ಭಾರಿ ಆರ್ಥಿಕ ಹಿಂಜರಿತದಿಂದ ಉದ್ರೇಕಗೊಂಡ ಪ್ರತಿಭಟನಾಕಾರರು ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ಅರಮನೆಗೆ ನುಗ್ಗಿ ದಾಂಧಲೆ ನಡೆಸಿದ ನಂತರ ಅವರು ವಿದೇಶಕ್ಕೆ ಪಲಾಯನ ಮಾಡಿದರು. ಬಳಿಕ ವಿಕ್ರಮಸಿಂಘೆ ಅವರನ್ನು ಶ್ರೀಲಂಕಾದ ಹಾಂಗಾಮಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು.

ಡಳಸ್ ಅಳಗಪೆರುಮಗೆ ಬೆಂಬಲ
ಈ ಹಿಂದೆ ವಿಕ್ರಮಸಿಂಘೆ ಅವರನ್ನು ಕಣದಲ್ಲಿರುವ ಉನ್ನತ ಅಭ್ಯರ್ಥಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿತ್ತು. ಆದಾಗ್ಯೂ, ಶ್ರೀಲಂಕಾದ ಪ್ರಮುಖ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಮಂಗಳವಾರ ಅಧ್ಯಕ್ಷೀಯ ಸ್ಪರ್ಧೆಯಿಂದ ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡ ನಂತರ ಉನ್ನತ ಹುದ್ದೆಗೆ ಪ್ರತಿಸ್ಪರ್ಧಿ ಅಭ್ಯರ್ಥಿ ಡಳಸ್ ಅಳಗಪೆರುಮ ಅವರನ್ನು ಬೆಂಬಲಿಸುವುದಾಗಿ ಹೇಳಿದ ನಂತರ ಆಟವೇ ಬದಲಾಯಿತು.

ಜನರ ಒಳಿತಿಗಾಗಿ ಉಮೇದುವಾರಿಕೆ ಹಿಂತೆಗೆತ: ಪ್ರೇಮದಾಸ
ಬಳಿಕ ಅಧ್ಯಕ್ಷೀಯ ಚುನಾವಣೆಗೆ ಕಣದಲ್ಲಿರುವ ಶ್ರೀಲಂಕಾ ಪೊದುಜನ ಪೆರಮುನಾ (ಎಸ್ಎಲ್ಪಿಪಿ) ಪಕ್ಷದ ಸಂಸದ ಅಳಗಪೆರುಮ ಅವರನ್ನು ಸಮಗಿ ಜನ ಬಲವೇಗಯ ಮತ್ತು ಅದರ ಮೈತ್ರಿ ಪಕ್ಷದ ಪಾಲುದಾರರು ಬೆಂಬಲಿಸುತ್ತಾರೆ. ನಾನು ಪ್ರೀತಿಸುವ ನನ್ನ ದೇಶ ಮತ್ತು ನಾನು ಪ್ರೀತಿಸುವ ಜನರ ಒಳಿತಿಗಾಗಿ ನಾನು ಈ ಮೂಲಕ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುತ್ತಿದ್ದೇನೆ. ಸಾಮಗಿ ಜನ ಬಲವೇಗ ಮತ್ತು ನಮ್ಮ ಮೈತ್ರಿ ಮತ್ತು ನಮ್ಮ ವಿರೋಧ ಪಕ್ಷದ ಪಾಲುದಾರರು ಡಳಸ್ ಅಳಗಪೆರುಮ ಅವರನ್ನು ಗೆಲ್ಲಿಸಲು ಶ್ರಮಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಟ್ವಿಟರ್ನಲ್ಲಿ ತಿಳಿಸಿದರು.

ಕರೆನ್ಸಿಯ ಶೇಕಡಾ 80ರಷ್ಟು ಕುಸಿತ
ಇದಕ್ಕೂ ಮೊದಲು ಡಳಸ್ ಅಳಗಪೆರುಮ ಅವರು ತಮ್ಮ ಪ್ರಧಾನಿ ಅಭ್ಯರ್ಥಿ ಸಜಿತ್ ಪ್ರೇಮದಾಸ ಅವರೊಂದಿಗೆ ಅಧ್ಯಕ್ಷೀಯ ಚುನಾವಣೆ ಪ್ರಚಾರಕ್ಕಾಗಿ ತಮಿಳು ಸಂಸದರನ್ನು ಪ್ರತಿಸ್ಪರ್ಧಿ ಅಭ್ಯರ್ಥಿ ಡಳಸ್ಗೆ ಮತ ಹಾಕುವಂತೆ ಮನವೊಲಿಸಿದರು. ಉತ್ಪಾದನೆಗೆ ಮೂಲ ಒಳಹರಿವಿನ ಅಲಭ್ಯತೆ, ಮಾರ್ಚ್ 2022ರಿಂದ ಶ್ರೀಲಂಕಾ ಕರೆನ್ಸಿಯ ಶೇಕಡಾ 80ರಷ್ಟು ಕುಸಿತ, ವಿದೇಶಿ ಮೀಸಲು ಕೊರತೆ ಮತ್ತು ಅದರ ಅಂತಾರಾಷ್ಟ್ರೀಯ ಸಾಲದ ಬಾಧ್ಯತೆಗಳನ್ನು ಪೂರೈಸುವಲ್ಲಿ ದೇಶದ ವಿಫಲತೆಯಿಂದಾಗಿ ಶ್ರೀಲಂಕಾದ ಆರ್ಥಿಕತೆಯು ಭಾರೀ ಹಿನ್ನಡೆಗೆ ಸಿಲಿಕಿತು.

ಪ್ರಯಾಣಕ್ಕಾಗಿ ಬೈಸಿಕಲ್ಗಳಿಗೆ ಮೊರೆ
ಇಂಧನ ಕೊರತೆಯ ಪ್ರತಿದಿನ ನೂರಾರು ಶ್ರೀಲಂಕಾದ ಪ್ರಜೆಗಳು ಸಾಲದ ಸುಳಿಯಲ್ಲಿ ಸಿಲುಕಿರುವ ದೇಶದಾದ್ಯಂತ ಪೆಟ್ರೋಲ್ ಪಂಪ್ಗಳಲ್ಲಿ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದರು. ಹೆಚ್ಚಿನ ಸಂಖ್ಯೆಯ ಜನರು ತಮ್ಮ ದೈನಂದಿನ ಪ್ರಯಾಣಕ್ಕಾಗಿ ಬೈಸಿಕಲ್ಗಳಿಗೆ ಮೊರೆ ಹೋಗಿ ತಮ್ಮ ಕಾರುಗಳು ಮತ್ತು ಮೋಟಾರ್ಸೈಕಲ್ಗಳನ್ನು ತ್ಯಜಿಸಿದರು. ಶ್ರೀಲಂಕಾದ ಇತಿಹಾಸದಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟು ಇಂಧನದಂತಹ ಅಗತ್ಯ ವಸ್ತುಗಳ ತೀವ್ರ ಕೊರತೆಯನ್ನು ಹುಟ್ಟುಹಾಕಿತ್ತು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications