ರವಿಶಂಕರ್ ಗುರೂಜಿಗೆ ಅಂತಾರಾಷ್ಟ್ರೀಯ ನಾಯಕತ್ವ ಪ್ರಶಸ್ತಿ
ಲಾಸ್ ಏಂಜಿಲಿಸ್, ಏಪ್ರಿಲ್ 18 : ಪ್ರತಿಷ್ಠಿತ ಸೈಮನ್ ವೀಸೆನ್ತಾಲ್ ಕೇಂದ್ರದ 'ಅಂತಾರಾಷ್ಟ್ರೀಯ ನಾಯಕತ್ವ' ಪ್ರಶಸ್ತಿಯನ್ನು ಆರ್ಟ್ ಆಫ್ ಲಿವಿಂಗ್ ನ ಗುರುದೇವ್ ಶ್ರೀ ಶ್ರೀ ರವಿಶಂಕರರಿಗೆ ಲಾಸ್ ಏಂಜಿಲಿಸ್ನ ಮ್ಯೂಸಿಯಂ ಆಫ್ ಟಾಲರೆನ್ಸ್ನಲ್ಲಿ ನೀಡಲಾಯಿತು.
ಈ ಕೇಂದ್ರದ ಪ್ರಶಸ್ತಿಯನ್ನು ಹಿಂದೆ ಕೆನಡಾದ ಮಾಜಿ ಪ್ರಧಾನಿ ಸ್ಟೀಫೆನ್ ಹಾರ್ಪರ್ ಮತ್ತು ಟಾಮ್ ಕ್ರೂಸ್ ರವರಿಗೂ ನೀಡಲಾಗಿದೆ. ಮಾನವ ಘನತೆ, ಅಂತರ್ ಧಾರ್ಮಿಕ ಸಂಬಂಧಗಳು ಮತ್ತು ಜನರ ನಡುವಿನ ಸಹನೆಯನ್ನು ಹೆಚ್ಚಿಸಲು ಗುರುದೇವರು ಶ್ರಮಿಸಿದ ಕಾರಣದಿಂದಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಹ್ಯೂಮನ್ ರೈಟ್ಸ್ ಆರ್ಗನೈಸೇಷನ್ನ ಅಸೊಸಿಯೇಟ್ ಡೀನ್ ಆದ ಅಬ್ರಹಾಂ ಕೂಪರ್ರವರು, "ಶ್ರೀ ಶ್ರೀ ರವಿಶಂಕರರು ಕೇವಲ ಸ್ನೇಹಿತರಲ್ಲದೆ, ಭಯೋತ್ಪಾದನೆಯನ್ನು ಹತ್ತಿಕ್ಕುವಲ್ಲಿ ಮತ್ತು ಸಹನೆಯನ್ನು ಹರಡುವಲ್ಲಿ ನಮ್ಮ ಸಹಭಾಗಿಯಾಗಿದ್ದಾರೆ" ಎಂದು ಗುರುದೇವರಿಗೆ ಪ್ರಶಸ್ತಿಯನ್ನು ನೀಡಿ ಪ್ರಶಂಸೆಯ ಮಾತುಗಳನ್ನಾಡಿದರು.

ಈ ಸಮಾರಂಭದಲ್ಲಿ ಅನೇಕ ಸರ್ಕಾರಿ ಅಧಿಕಾರಿಗಳು, ಸಂಸದರು, ನಗರಪೌರರು, ಕ್ಯಾಲಿಫೋರ್ನಿಯಾದ 28 ನಗರಗಳ ಕೌನ್ಸಿಲ್ ಸದಸ್ಯರು, ಜಪಾನ್, ಸ್ವೀಡನ್, ಮ್ಯಾನ್ಮಾರ್, ಬ್ರೆಜಿಲ್, ಮೆಕ್ಸಿಕೊ, ಜರ್ಮನಿ, ನೆದರ್ಲ್ಯಾಂಡ್, ಸ್ವಿಟ್ಜರ್ಲೆಂಡ್, ಅಜರ್ಬೈಜಾನ್, ಇಟಲಿ, ಜೆಕ್ ರಿಪಬ್ಲಿಕ್ ಮತ್ತು ತುರ್ಕಿಯ ರಾಯಭಾರಿಗಳು ಉಪಸ್ಥಿತರಿದ್ದರು.

ಕ್ಯಾಲಿಫೋರ್ನಿಯಾದ ರಾಜ್ಯ ಅಸೆಂಬ್ಲಿಯ ಸ್ಪೀಕರರು ಗುರುದೇವಲರಿಗೆ ಸನ್ಮಾನ ಔತಣಕೂಟವನ್ನು ಏರ್ಪಡಿಸಿದ್ದರು ಮತ್ತು ಆರ್ಟ್ ಆಫ್ ಲಿವಿಂಗ್ ಕ್ಯಾಲಿಫೋರ್ನಿಯಾದಲ್ಲಿ ಮಾಡಿದ ಕೆಲಸಗಳಿಗಾಗಿ ಸಂಸತ್ತಿನ ಶ್ಲಾಘನಾ ಪತ್ರವನ್ನು ನೀಡಿದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications