ಜಿಂಬಾಬ್ವೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುಗಾಬೆ
ಹರಾರೆ, ನವೆಂಬರ್ 21: 'ಜಿಂಬಾಬ್ವೆ ಆಫ್ರಿಕನ್ ನ್ಯಾಷನಲ್ ಯೂನಿಯನ್-ಪೆಟ್ರಿಯಾಟಿಕ್ ಫ್ರಂಟ್' ಮುಖ್ಯಸ್ಥ ಸ್ಥಾನದಿಂದ ಪದಚ್ಯುತಗೊಂಡಿದ್ದ ರಾಬರ್ಟ್ ಮುಗಾಬೆ ಕೊನೆಗೂ ಒತ್ತಡಕ್ಕೆ ಮಣಿದಿದ್ದಾರೆ. 37 ವರ್ಷಗಳ ಆಡಳಿತದ ನಂತರ ಕೊನೆಗೂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜಿಂಬಾಬ್ವೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಿದೆ.
ಕೆಲವು ದಿನಗಳ ಹಿಂದೆ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ದೇಶದ ಆಡಳಿತ ಚುಕ್ಕಾಣಿಯನ್ನು ಸೇನೆ ತನ್ನ ಹಿಡಿತಕ್ಕೆ ತೆಗೆದುಕೊಂಡಿತ್ತು. ಅಧ್ಯಕ್ಷರನ್ನು ಅದು ಗೃಹ ಬಂಧನಕ್ಕೆ ತಳ್ಳಿತ್ತು.
ಗೃಹ ಬಂಧನದಿಂದ ಹೊರ ಬಂದು ಮಾತನಾಡಿದ್ದ 93 ವರ್ಷ ವಯಸ್ಸಿನ ಮುಗಾಬೆ ಅವರು ದೇಶ ಮತ್ತು ಸಹಜ ಸ್ಥತಿಗೆ ಬರಬೇಕಾಗಿದೆ ಎಂದಷ್ಟೇ ಹೇಳಿ ರಾಜೀನಾಮೆ ನೀಡಲು ನಿರಾಕರಿಸಿದ್ದರು. ಆದರೆ, ಈಗ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದಾರೆ.

ಬ್ರಿಟನ್ನಿಂದ 1980ರಲ್ಲಿ ಜಿಂಬಾಬ್ವೆ ಸ್ವಾತಂತ್ರ್ಯ ಪಡೆದುಕೊಂಡಿತ್ತು. ಅದಾದ ನಂತರ ಈ ದೇಶವನ್ನು ಆಳುತ್ತಾ ಬಂದ ಏಕಮೇವ ನಾಯಕ ಅಂದರೆ ಅದು ರಾಬರ್ಟ್ ಮುಗಾಬೆ. ಸೇನಾ ಕ್ರಾಂತಿಗೂ ಮುನ್ನ 37 ವರ್ಷಗಳ ಸುದೀರ್ಘ ಅವಧಿಗೆ ಅಧ್ಯಕ್ಷರಾಗಿದ್ದರು.
ಮುಗಾಬೆ ಅವಧಿಯಲ್ಲಿ ಆಡಳಿತ ಹದಗೆಟ್ಟಿತ್ತು. ದೇಶದಲ್ಲಿ ಸಾಮೂಹಿಕ ವಲಸೆ, ಅಕ್ರಮ ಮತದಾನ, ಹಳ್ಳ ಹಿಡಿದ ಆರ್ಥಿಕತೆಗಳು ಪ್ರಮುಖ ಸಮಸ್ಯೆಗಳಾಗಿ ಗುರುತಿಸಿಕೊಂಡಿದ್ದವು.
ಇತ್ತೀಚೆಗೆ ಮುಗಾಬೆ ಅವರ ಆರೋಗ್ಯ ಹದಗೆಟ್ಟಿತ್ತು. ಈ ಹಿನ್ನಲೆಯಲ್ಲಿ ತಮ್ಮ ಪತ್ನಿ 52 ವರ್ಷದ ಗ್ರೇಸ್ ಮುಗಾಬೆ ಅವರನ್ನು ಮುಂದಿನ ಅಧ್ಯಕ್ಷರನ್ನಾಗಿಸಲು ಪ್ರಯತ್ನ ನಡೆಸಿದ್ದರು. ಇದು ಸೇನೆಯ ಹಿರಿಯ ಅಧಿಕಾರಿಗಳಿಗೆ ಇಷ್ಟವಿರಲಿಲ್ಲ. ಹೀಗಾಗಿ, ಕ್ಷಿಪ್ತ ಕ್ರಾಂತಿ ನಡೆಸಿದ ಸೇನೆ, ಮುಗಾಬೆ ಅವರನ್ನು ಗೃಹಬಂಧನದಲ್ಲಿರಿಸಿ, ಆಡಳಿತ ಯಂತ್ರವನ್ನು ಕೈಗೆ ತೆಗೆದುಕೊಂಡಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications