ಮೆಟ್ರೋ ನಿಲ್ದಾಣದಲ್ಲಿ ವೇಗವಾಗಿ ಚಲಿಸಿದ ಎಸ್ಕಲೇಟರ್: 20 ಮಂದಿಗೆ ಗಾಯ
ರೋಮ್ (ಇಟಲಿ), ಅಕ್ಟೋಬರ್ 24: ರೋಮ್ನ ಮೆಟ್ರೋ ನಿಲ್ದಾಣವೊಂದರಲ್ಲಿ ಎಸ್ಕಲೇಟರ್ನಲ್ಲಿ ತಾಂತ್ರಿಕ ದೋಷ ಸಂಭವಿಸಿ ಉಂಟಾದ ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಷ್ಯಾದ ಫುಟ್ಬಾಲ್ ಅಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದ ಎಸ್ಕಲೇಟರ್, ಇದ್ದಕ್ಕಿದ್ದಂತೆ ವೇಗವಾಗಿ ಚಲಿಸಲು ಆರಂಭಿಸಿತು. ಇದರಿಂದ ಗಾಬರಿಗೊಂಡ ಜನರು ನಿಯಂತ್ರಣ ತಪ್ಪಿ ಉರುಳಿದರು. ಕೆಲವರು ಒಬ್ಬರ ಮೇಲೊಬ್ಬರು ಬಿದ್ದರು. ಕಿರುಚಾಟ ತಳ್ಳಾಟದ ನಡುವೆ ಒಬ್ಬರ ಕಾಲಿಗೆ ತೀವ್ರ ಪೆಟ್ಟಾಗಿದೆ.
ಈ ಘಟನೆಯು ವಿಡಿಯೋದಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಮದ್ಯಪಾನ ಮಾಡಿದಂತೆ ಕಾಣಿಸುತ್ತಿದ್ದ ಫುಟ್ಬಾಲ್ ಅಭಿಮಾನಿಗಳು ಎಸ್ಕಲೇಟರ್ ಮೇಲೆ ಕುಣಿಯುತ್ತಾ ಹಾರುತ್ತಿದ್ದರು. ಕೆಲಹೊತ್ತಿನಲ್ಲಿಯೇ ಎಸ್ಕಲೇಟರ್ ಕುಸಿಯಿತು. ಆದರೆ, ತಾವು ಆ ರೀತಿ ಮಾಡಿರಲಿಲ್ಲ ಎಂದು ಗಾಯಾಳುಗಳು ಹೇಳಿದ್ದಾರೆ.
ಇಟಲಿಯ ರೋಮಾ ಮತ್ತು ರಷ್ಯಾದ ಸಿಎಸ್ಕೆಎ ಮಾಸ್ಕೋ ಕ್ಲಬ್ ತಂಡಗಳ ನಡುವೆ ಚಾಂಪಿಯನ್ಸ್ ಲೀಗ್ ಆರಂಭವಾಗುವ ಒಂದು ಗಂಟೆ ಮುಂಚೆಯಷ್ಟೇ ಈ ಘಟನೆ ನಡೆದಿದೆ. ಸ್ಟೇಡಿಯಂಗೆ ಸಂಪರ್ಕ ಕಲ್ಪಿಸುವ ಮಾರ್ಗದ ಮೆಟ್ರೋವನ್ನು ಏರಲು ಈ ಅಭಿಮಾನಿಗಳ ತಂಡ ಹೊರಟಿತ್ತು.
Breaking: #Escalator in #Rome #malfunctions causing several #injuries We hope everyone is ok!!! #retweet pic.twitter.com/kfVmVkgH0P
— Paulie G (@PaulieGMMA) 23 October 2018
ರಷ್ಯಾದ ಸುಮಾರು 1,500 ಬೆಂಬಲಿಗರು ಪಂದ್ಯವನ್ನು ವೀಕ್ಷಿಸಲು ಬರುತ್ತಿದ್ದು, ಅದರಲ್ಲಿ ಅನೇಕ ಪುಂಡರೂ ಇದ್ದಾರೆ ಎಂಬ ಕಾರಣಕ್ಕೆ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.
ರಷ್ಯಾದ ಒಬ್ಬ ಬೆಂಬಲಿಗನನ್ನು ವಿಮಾನ ನಿಲ್ದಾಣದಲ್ಲಿಯೇ ತಡೆಯಲಾಗಿತ್ತು. ಆದರೆ, ಈ ಭದ್ರತಾ ಕಾರ್ಯಗಳು ಹೊಡೆದಾಟವನ್ನು ತಡೆಯುವಲ್ಲಿ ವಿಫಲವಾಗಿವೆ ಎಂದು ಇಟಲಿಯ ಮಾಧ್ಯಮಗಳು ವರದಿ ಮಾಡಿವೆ. ಪಂದ್ಯದ ವೇಳೆ ಅಭಿಮಾನಿಗಳ ನಡುವೆ ನಡೆದ ಕಾದಾಟದಲ್ಲಿ ರಷ್ಯಾದ ಅಭಿಮಾನಿಯೊಬ್ಬನಿಗೆ ಚಾಕು ಇರಿಯಲಾಗಿದೆ. ಇನ್ನಿಬ್ಬರಿಗೆ ಕೂಡ ಹೊಡೆತಗಳು ಬಿದ್ದಿವೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications