ಯುಎಸ್ನಲ್ಲಿ ಭಾರತೀಯ ವಿದ್ಯಾರ್ಥಿ ಮನೀಶ್ ಛೇಡಾ ಹತ್ಯೆ
ನ್ಯೂಯಾರ್ಕ್, ಅಕ್ಟೋಬರ್ 06: ಅಮೆರಿಕದ ಇಂಡಿಯಾನಾ ಸ್ಟೇಟ್ಸ್ ವಿದ್ಯಾರ್ಥಿ ನಿಲಯದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಹತ್ಯೆ ನಡೆದಿದೆ. ಇದರ ಬೆನ್ನಲ್ಲೇ ಕೊರಿಯಾ ಮೂಲದ ಆತನ ರೂಮ್ಮೇಟ್ನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪರ್ಡ್ಯೂ ವಿಶ್ವವಿದ್ಯಾಲಯದಲ್ಲಿ ಡೇಟಾ ಸೈನ್ಸ್ ಓದುತ್ತಿದ್ದ 20ರ ಹರೆಯದ ವರುಣ್ ಮನೀಶ್ ಛೇಡಾ, ಕ್ಯಾಂಪಸ್ನ ಪಶ್ಚಿಮ ಅಂಚಿನಲ್ಲಿರುವ ಮೆಕ್ಕಚಿಯಾನ್ ಹಾಲ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಕೊರಿಯಾದ ಜೂನಿಯರ್ ಸೈಬರ್ ಸೆಕ್ಯುರಿಟಿ ಮೇಜರ್ ಮತ್ತು ಅಂತಾರಾಷ್ಟ್ರೀಯ ವಿದ್ಯಾರ್ಥಿಯಾಗಿರುವ ರೂಮ್ಮೇಟ್ ಆಗಿರುವ 22 ವರ್ಷದ ಜಿಮ್ಮಿ ಶಾ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಏಕೆಂದರೆ ಇದೇ ವಿದ್ಯಾರ್ಥಿಯು 911 ಕರೆ ಮಾಡಿ ವರುಣ್ ಮನೀಶ್ ಛೇಡಾ ಸಾವಿನ ಬಗ್ಗೆ ಮಾಹಿತಿ ನೀಡಿದ್ದರು. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಪ್ರಾಥಮಿಕ ತನಿಖೆಗಾಗಿ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ.

ಮೃತದೇಹದಲ್ಲಿ ಗಾಯದ ಗುರುತು ಪತ್ತೆ:
ಇಂಡಿಯಾನಾ ಸ್ಟೇಟ್ಸ್ ವಿದ್ಯಾರ್ಥಿ ನಿಲಯದಲ್ಲಿ ಮೃತಪಟ್ಟಿರುವ ವರುಣ್ ಮನೀಶ್ ಛೇಡಾ ಮರಣೋತ್ತರ ಪರೀಕ್ಷೆಯಲ್ಲಿ ಚೂಪಾದ ಮತ್ತು ಬಲವಾದ ಆಯುಧಗಳಿಂದ ಗಾಯ ಆಗಿರುವ ಗುರುತುಗಳು ಪತ್ತೆಯಾಗಿವೆ. ಪರ್ಡ್ಯೂ ವಿಶ್ವವಿದ್ಯಾಲಯದ ಪೊಲೀಸ್ ಮುಖ್ಯಸ್ಥ ಲೆಸ್ಲಿ ವೈಟೆ ಪ್ರಕಾರ, ಈ ಹತ್ಯೆಯು "ಪ್ರಚೋದಿತವಲ್ಲದ" ಮತ್ತು "ಪ್ರಜ್ಞಾಶೂನ್ಯ" ಎಂದು ನಂಬುತ್ತಾರೆ ಎಂದು ಹೇಳಿದರು. ಮಂಗಳವಾರ ರಾತ್ರಿ ಆನ್ಲೈನ್ನಲ್ಲಿ ಗೇಮ್ ಆಡುತ್ತಿದ್ದ ಛೇಡಾ ದಿಢೀರನೇ ಕಿರುಚುವುದನ್ನು ಸ್ನೇಹಿತನು ಕೇಳಿಸಿಕೊಂಡಿದ್ದಾರೆ.
ವಿಶ್ವವಿದ್ಯಾನಿಲಯದ ಅಧ್ಯಕ್ಷ ಮಿಚ್ ಡೇನಿಯಲ್ಸ್, ಛೇಡಾ ಸಾವು "ನಮ್ಮ ಕ್ಯಾಂಪಸ್ನಲ್ಲಿ ನಡೆದ ದುರ್ಘಟನೆಯು ನಮ್ಮ ಮನಸ್ಸು ಎಂದಿಗೂ ಊಹಿಸಲಾಗದಷ್ಟು ಕಠೋರವಾಗಿದೆ ಎಂದು ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications