Ukraine & Russia: ಉಕ್ರೇನ್ ವಿರುದ್ಧ ವಿಜಯ ಘೋಷಣೆ ಮೊಳಗಿಸಲು ರಷ್ಯಾ ಸಜ್ಜು?
ಜಗತ್ತಿನ ಘೋರ ಯುದ್ಧವೊಂದು ಇನ್ನೇನು ನಿಂತು ಹೋಗುವ ಹಂತ ಪ್ರವೇಶ ಮಾಡುತ್ತಾ ಇದೆ... ರಷ್ಯಾ & ಉಕ್ರೇನ್ ಯುದ್ಧ ಒಂದು ಹಂತಕ್ಕೆ ಬಂದು ನಿಂತಿದ್ದು, ಈ ಯುದ್ಧ ನಿಲ್ಲಿಸಲು ನಡೆದ ಪ್ರಯತ್ನಗಳು ಕೊನೆಗೂ ಫಲ ನೀಡಿದಂತೆ ಕಾಣುತ್ತಿದೆ. ಒಂದು ಕಡೆ ಅಮೆರಿಕ ಅಧ್ಯಕ್ಷ ಟ್ರಂಪ್ & ಇನ್ನೊಂದು ಕಡೆ ಜಗತ್ತಿನ ಬಲಿಷ್ಠ ದೇಶಗಳು ಒಗ್ಗೂಡಿ ಈ ಯುದ್ಧಕ್ಕೆ ಬ್ರೇಕ್ ಹಾಕಲು ಸಾಕಷ್ಟು ಪ್ರಯತ್ನ ಮಾಡಿದ್ದವು.
ಯುದ್ಧ ನಿಲ್ಲಿಸಲು ಎಲ್ಲಾ ರೀತಿ ಒತ್ತಡ ತಂತ್ರಗಳನ್ನೂ ಅನುಸರಿಸಲಾಗಿತ್ತು. ಹೀಗಿದ್ದರೂ ರಷ್ಯಾ & ಉಕ್ರೇನ್ ಯುದ್ಧ ಇನ್ನೇನು ಕೆಲವೇ ದಿನಗಳಲ್ಲಿ 4 ವರ್ಷ ಮುಗಿಸಿ 5ನೇ ವರ್ಷಕ್ಕೆ ಎಂಟ್ರಿ ಕೊಡುವ ಆತಂಕ ಆವರಿಸಿತ್ತು. ಆದರೆ ಇಂತಹ ಸಮಯದಲ್ಲೇ ಖುಷಿ ಸುದ್ದಿಯೊಂದು ಹೊರಬೀಳುತ್ತಿದ್ದು, ಈ ಸುದ್ದಿ ಉಕ್ರೇನ್ ಪಾಲಿಗೆ ಬಿಸಿ ತುಪ್ಪವಾಗಿದ್ದರೆ, ಅದೇ ಸಮಯದಲ್ಲಿ ರಷ್ಯಾ ಪಾಲಿಗೆ ಸಿಹಿಸುದ್ದಿ ಆಗಿದೆ!

ಯುದ್ಧ ನಿಲ್ಲಿಸಲು ಉಕ್ರೇನ್ ಒಪ್ಪಿಗೆ?
ಉಕ್ರೇನ್ ಎಂಬ ದೇಶಕ್ಕೆ ತಾನು ರಷ್ಯಾ ವಿರುದ್ಧ ಗೆಲ್ಲುವುದಿಲ್ಲ ಅನ್ನೋದು ಗೊತ್ತಿದ್ದರೂ ಎಲ್ಲಾ ರೀತಿಯ ಅಸ್ತ್ರಗಳನ್ನು ಬಳಸಿ ಹೋರಾಡುವ ಚಪಲ. ಅದರಲ್ಲೂ ರಷ್ಯಾ ಜೊತೆಗೆ ಸಂಧಾನವನ್ನ ಮಾಡಿಕೊಂಡು ಶಾಂತಿ ಸ್ಥಾಪನೆ ಮಾಡಿ ಎಂಬ ಬೇಡಿಕೆಗೂ ಉಕ್ರೇನ್ ಹಿಂದೆ & ಮುಂದೆ ಚಿಂತಿಸಿ ಸಮಯ ವ್ಯರ್ಥ ಮಾಡುತ್ತಾ ಬಂದಿದೆ. ಇಷ್ಟೆಲ್ಲದರ ನಡುವೆ ಖುದ್ದು ಅಮೆರಿಕ ಅಧ್ಯಕ್ಷ ಟ್ರಂಪ್ ಕೊನೆಯ ಎಚ್ಚರಿಕೆ ನೀಡಿ, 28 ಅಂಶಗಳ ಕದನ ವಿರಾಮ ಘೋಷಣೆ ಒಪ್ಪಂದಕ್ಕೆ ಸಹಿ ಹಾಕಬೇಕು ಎಂದು ಉಕ್ರೇನ್ಗೆ ಆಜ್ಞೆ ಮಾಡಿದ್ದರು. ಈ ಆಜ್ಞೆಯ ನಂತರ ಇದೀಗ ಉಕ್ರೇನ್ ದಾರಿಗೆ ಬಂದ ರೀತಿ ಕಾಣುತ್ತಿದೆ. ಮತ್ತೊಂದು ಕಡೆ ರಷ್ಯಾ ಕೂಡ ವಿಜಯ ಘೋಷಣೆ ಮೊಳಗಿಸಲು ಸಜ್ಜಾಯ್ತಾ?
ರಷ್ಯಾಗೆ ಸಂಭ್ರಮವೋ ಸಂಭ್ರಮ...
ಅಮೆರಿಕ ಒತ್ತಡ ಹೇರುತ್ತಿರುವ ಸಮಯದಲ್ಲಿ ಉಕ್ರೇನ್ ಚಿಂತನೆ ನಡೆಸುತ್ತಿದ್ದು, ಯುದ್ಧ ನಿಲ್ಲಿಸಿ ಸೈಲೆಂಟ್ ಆಗಬೇಕಾ? ಅಥವಾ ರಷ್ಯಾ ವಿರುದ್ಧ ಇನ್ನೂ ಹೋರಾಡಬೇಕಾ ಎಂಬ ಗೊಂದಲದಲ್ಲಿ ಈಗಲೂ ಒದ್ದಾಡುತ್ತಿದೆ ಉಕ್ರೇನ್. ಆದರೆ ಈಗಿರುವ ಪರಿಸ್ಥಿತಿಯಲ್ಲಿ ಉಕ್ರೇನ್ ಕೂಡ ಕದನ ವಿರಾಮ ಘೋಷಣೆಗೆ ಒಪ್ಪಿಗೆ ಸೂಚಿಸುವುದು ಬಹುತೇಕ ಖಚಿತವಾಗಿದೆ. ಹೀಗಿದ್ದಾಗ ಈ ಗೆಲುವು ರಷ್ಯಾಗೆ ಸಂಭ್ರಮವೋ ಸಂಭ್ರಮ ತಂದಿದೆ. ಏಕೆಂದರೆ ಈಗಾಗಲೇ ರಷ್ಯಾ ಸೇನೆ ಉಕ್ರೇನ್ ದೇಶದ ಭಾಗಶಃ ಭೂಮಿಯನ್ನು ವಶಕ್ಕೆ ಪಡೆದಿದೆ!
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications