ಮನುಷ್ಯನಿಗೂ ಹರಡಿದ ಹಕ್ಕಿ ಜ್ವರ: ರಷ್ಯಾದಲ್ಲಿ ಮೊದಲ ಪ್ರಕರಣ
ಮಾಸ್ಕೋ,ಫೆಬ್ರವರಿ 21:ಸಾಮಾನ್ಯವಾಗಿ ಹೆಸರಿನಲ್ಲೇ ಇರುವಂತೆ ಹಕ್ಕಿ ಜ್ವರವೆಂದರೆ ಕೇವಲ ಪಕ್ಷಿಗಳಿಗೆ ಮಾತ್ರ ಬರುತ್ತಿದೆ ಎಂದುಕೊಂಡರೆ ಅದು ತಪ್ಪು, ಹಕ್ಕಿ ಜ್ವರ ಮನುಷ್ಯನಿಗೂ ಹರಡಿರುವ ಪ್ರಕರಣ ರಷ್ಯಾದಲ್ಲಿ ಬೆಳಕಿಗೆ ಬಂದಿದೆ.
H5N8 ಸೋಂಕು ಮನುಷ್ಯನಿಗೂ ಕೂಡ ಹರಡಿದೆ.ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.ದಕ್ಷಿಣ ರಷ್ಯಾದ ಕೋಳಿ ಸಾಕಣೆ ಕೇಂದ್ರದಲ್ಲಿ ಏಳು ಮಂದಿ ಕಾರ್ಮಿಕರಿಗೆ ಹಕ್ಕಿ ಜ್ವರ ಕಾಣಿಸಿಕೊಂಡಿದೆ.ಕಾರ್ಮಿಕರಿಗೆ ಯಾವುದೇ ಗಂಭೀರವಾದ ಆರೋಗ್ಯ ಸಮಸ್ಯೆಗಳು ಕಂಡುಬಂದಿರಲಿಲ್ಲ. ಏವಿಯನ್ ಫ್ಲೂ ಮನುಷ್ಯನಿಗೆ ಹರಡಿರುವುದು ಇದೇ ಮೊದಲ ಬಾರಿಗೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಏವಿಯನ್ ಇನ್ಫ್ಲುಯೆನ್ಜಾ ವೈರಸ್ಗಳಲ್ಲಿ ವಿಭಿನ್ನ ಉಪ ವಿಭಾಗಗಳಿವೆ. ಸಾಂಕ್ರಾಮಿಕ್ ತಳಿ H5N8 ಪಕ್ಷಿಗಳಿಗೆ ಮಾರಕವಾಗಿದ್ದರೂ, ಹಿಂದೆಂದೂ ಮನುಷ್ಯರಿಗೆ ಹರಡಿರುವ ಕುರಿತು ವರದಿಯಾಗಿರಲಿಲ್ಲ. ರಷ್ಯಾದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದ ಕಾರ್ಮಿಕರೆಲ್ಲರೂ ಲಕ್ಷಣ ರಹಿತರಾಗಿದ್ದರು.

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಸಾಮಾನ್ಯವಾಗಿ ಪ್ರಾಣಿಗಳು ಅಥವಾ ಕಲುಷಿತ ಪರಿಸರದೊಂದಿಗೆ ನೇರ ಸಂಪರ್ಕ ಹೊಂದಿದಾಗ ಸೋಂಕಿಗೆ ಒಳಗಾಗುತ್ತಾರೆ. ಮಾನವರಲ್ಲಿ ನಿರಂತರ ಹರಡುವಿಕೆ ಇರುವುದಿಲ್ಲ.
ಒಂದೊಮ್ಮೆ H5N1 ತಗುಲಿದಾಗ ಇದು ಗಂಭೀರ ಸ್ವರೂಪ ಪಡೆದುಕೊಂಡು ಶೇ.60ರಷ್ಟು ಮಂದಿ ಸಾಯುವ ಸಾಧ್ಯತೆ ಇರುತ್ತದೆ ಎಂದು ಹೇಳಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications