ಉಗ್ರರ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ರಷ್ಯಾ: ಭಯೋತ್ಪಾದಕರ ದಾಳಿಗೆ 60 ಜನರು ಬಲಿ
ಭಯೋತ್ಪಾದಕರ ಅಟ್ಟಹಾಸಕ್ಕೆ ಇಡೀ ರಷ್ಯಾ ರಾಷ್ಟ್ರವೇ ಬೆಚ್ಚಿಬಿದ್ದಿದ್ದು, ಸಂಗೀತ ಕಾರ್ಯಕ್ರಮದ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಸುಮಾರು 60 ಜನರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ಉಗ್ರರು ಶುಕ್ರವಾರ ಮಾಸ್ಕೋದಲ್ಲಿ ನಡೆಯುತ್ತಿದ್ದ ಅತಿ ದೊಡ್ಡ ಸಂಗೀತ ಕಛೇರಿಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದು, ಇಡೀ ಹಾಲ್ಗೆ ಬೆಂಕಿ ಹಚ್ಚಿದ್ದಾರೆ. ಈ ಉಗ್ರರ ದಾಳಿಯಲ್ಲಿ ದಾಳಿಯಲ್ಲಿ ಕನಿಷ್ಠ 60 ಜನ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮಾಸ್ಕೋದ ಪಶ್ಚಿಮ ಅಂಚಿನಲ್ಲಿರುವ, 6,200 ಜನರಿಗೆ ಅವಕಾಶ ಕಲ್ಪಿಸುವ ದೊಡ್ಡ ಸಂಗೀತ ಹಾಲ್ ಆದ ಕ್ರೋಕಸ್ ಸಿಟಿ ಹಾಲ್ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಹಾಲ್ಗೆ ನುಗ್ಗಿದ ನಾಲ್ವರು ಬಂದೂಕುದಾರಿಗಳು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಮನಸೋ ಇಚ್ಛೆ ಗುಂಡಿನ ಸುರಿಮಳೆಗೈದಿದ್ದಾರೆ. ನೋಡ ನೋಡ್ತಿದ್ದಂತೆ ಹಾಲ್ಗೆ ಬೆಂಕಿ ಇಟ್ಟು ಅಟ್ಟಹಾಸ ಮೆರೆದಿದ್ದಾರೆ.
ರಷ್ಯಾದ ರಾಕ್ ಬ್ಯಾಂಡ್ 'ಪಿಕ್ನಿಕ್' ಶೋಗಾಗಿ ಜನರು ಸೇರುತ್ತಿದ್ದಾಗ ಈ ಗುಂಡಿನ ದಾಳಿ ನಡೆದಿದೆ. ಕಾರ್ಯಕ್ರಮದಲ್ಲಿ ಮೊದಲು ಸ್ಫೋಟಕಗಳನ್ನು ಎಸೆದ ಉಗ್ರರು, ಜನ ಚೆಲ್ಲಾಪಿಲ್ಲಿಯಾಗಿ ಓಡುತ್ತಿದ್ದಂತೆ ಸಂಪೂರ್ಣ ಹಾಲ್ಗೆ ಬೆಂಕಿ ಹಚ್ಚಿದ್ದಾರೆ ಎಂದು ಕೆಲವು ರಷ್ಯಾದ ಮಾಧ್ಯಮಗಳ ವರದಿಗಳಲ್ಲಿ ತಿಳಿಸಲಾಗಿದೆ.

ಮಾಸ್ಕೋ ಮೇಯರ್ ಸೆರ್ಗೆಯ್ ಸೊಬಯಾನಿನ್ ಈ ಭೀಕರ ದಾಳಿಯನ್ನು ದೊಡ್ಡ ದುರಂತ ಎಂದಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ 50 ಆಂಬುಲೆನ್ಸ್ಗಳು ಕಾರ್ಯನಿರ್ವಹಿಸುತ್ತಿದ್ದು, ಐದು ಮಕ್ಕಳು ಸೇರಿದಂತೆ 115 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಭದ್ರತಾ ಪಡೆಗಳನ್ನು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಬೆಂಕಿ ನಂದಿಸಲು 320 ಅಗ್ನಿಶಾಮಕ ವಾಹನಗಳು, 3 ಹೆಲಿಕಾಫ್ಟರ್ಗಳನ್ನು ಬಳಸಿಕೊಳ್ಳಲಾಗಿದೆ. ಆದರೆ ಉಗ್ರರ ದಾಳಿಯಲ್ಲಿ ಕನ್ಸರ್ಟ್ ಹಾಲ್ನ ಮೇಲ್ಛಾವಣಿ ಸಂಪೂರ್ಣ ಬೆಂಕಿಹಾಹುತಿಯಾಗಿದೆ ಎಂದು ತಿಳಿದು ಬಂದಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications