ರಷ್ಯಾ ಉದ್ದೇಶಿತ ಗುರಿಯನ್ನು ಸಾಧಿಸಿಯೇ ತೀರುತ್ತದೆ: ಪುಟಿನ್
ಮಾಸ್ಕೋ, ಮಾರ್ಚ್ 3: ರಷ್ಯಾವು ಉಕ್ರೇನ್ ಅಲ್ಲಿ ಅಂದುಕೊಂಡಿರುವ ಉದ್ದೇಶಿತ ಗುರಿಯನ್ನು ಸಾಧಿಸಿಯೇ ತೋರುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಉಕ್ರೇನ್ನಲ್ಲಿ ಉಂಟಾಗಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಪುಟಿನ್ ಜೊತೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಮಾತನಾಡಿದ್ದಾರೆ. ಇದಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಮ್ಯಾಕ್ರನ್, ಉಕ್ರೇನ್ ದೇಶವನ್ನು ಸಂಪೂರ್ಣವಾಗಿ ವಶಕ್ಕೆ ಪಡೆದುಕೊಳ್ಳುವ ಉದ್ದೇಶ ಪುಟಿನ್ ಹೊಂದಿದ್ದಾರೆ. ಈ ನಿರ್ಧಾರದಿಂದ ಬರುವ ದಿನಗಳು ಉಕ್ರೇನ್ಗೆ ಕೆಟ್ಟದಾಗಿರಲಿವೆ ಎಂದರು.
ಯುದ್ಧ ಶುರುವಾಗಿ ಎಂಟು ದಿನ ಕಳೆಯುತ್ತಾ ಬಂದಿದ್ದು, ಈ ವೇಳೆ ಮಾತನಾಡಿರುವ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್, ಉಕ್ರೇನ್ನಲ್ಲಿ ರಷ್ಯಾ ತನ್ನ ಗುರಿ ಸಾಧಿಸಲಿದೆ ಎಂದಿದ್ದಾರೆ. ಫ್ರೆಂಚ್ ನಾಯಕ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗಿನ ಮಾತುಕತೆ ವೇಳೆ ಮಾತನಾಡಿರುವ ಪುಟಿನ್, ಉಕ್ರೇನ್ನಲ್ಲಿ ನಾವು ಅಂದುಕೊಂಡಿರುವುದನ್ನು ಸಾಧಿಸಲಿದ್ದೇವೆ ಎಂದಿದ್ದಾರೆ.

ರಷ್ಯಾ ಮತ್ತು ಉಕ್ರೇನ್ ನಡುವೆ ಬೆಲಾರಸ್- ಪೋಲೆಂಡ್ ಗಡಿಯಲ್ಲಿ ಎರಡನೇ ಸುತ್ತಿನ ಶಾಂತಿ ಮಾತುಕತೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ರಷ್ಯಾ ವಿದೇಶಾಂಗ ಸಚಿವರು, ಸದ್ಯದ ಪರಿಸ್ಥಿತಿ ಕೊನೆಗೊಂಡು ಉಕ್ರೇನ್ನಲ್ಲಿ ಶಾಂತಿಯುತ ಜೀವನ ನಡೆಸಲು ಅಲ್ಲಿನ ಜನರು ಅನುವು ಮಾಡಿಕೊಡುತ್ತಾರೆಂಬ ವಿಶ್ವಾಸವಿದೆ ಎಂದಿದ್ದಾರೆ.
ಉಕ್ರೇನ್ ಮೇಲಿನ ರಷ್ಯಾ ಮಿಲಿಟರಿ ದಾಳಿ ಮುಂದುವರೆದಿರುವಂತೆಯೇ ಇತ್ತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸರ್ಕಾರಕ್ಕೆ ಮತ್ತೊಂದು ಜಾಗತಿಕ ಮುಖಭಂಗವಾಗಿದ್ದು, ಫಾರ್ಮುಲಾ ಒನ್ ಟೂರ್ನಿ ಆಯೋಜನೆ ಒಪ್ಪಂದ ರದ್ದಾಗಿದೆ.
ಹೌದು.. ಉಕ್ರೇನ್ನ ಮೇಲೆ ರಷ್ಯಾ ಆಕ್ರಮಣಕ್ಕೆ ಜಾಗತಿಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಫಾರ್ಮುಲಾ ಒನ್ ರಷ್ಯಾ ಗ್ರ್ಯಾಂಡ್ ಪ್ರಿಕ್ಸ್ನೊಂದಿಗಿನ ತನ್ನ ಒಪ್ಪಂದವನ್ನು ರದ್ದು ಮಾಡಿದೆ. ಅಂತೆಯೇ ಭವಿಷ್ಯದಲ್ಲಿ ರಷ್ಯಾದಲ್ಲಿ ಎಫ್1 ರೇಸ್ ಗಳ ಆಯೋಜನೆ ಇರುವುದಿಲ್ಲ ಎಂದು ಗುರುವಾರ ಫಾರ್ಮುಲಾ ಒನ್ ಪದಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇದೇ ಸೆಪ್ಟೆಂಬರ್ 25ರಿಂದ ರಷ್ಯನ್ ಗ್ರಾಂಡ್ ಪ್ರಿಕ್ಸ್ ಸ್ಪರ್ಧೆ ನಡೆಯಬೇಕಿತ್ತು. ಆದರೆ ಉಕ್ರೇನ್ ಮೇಲೆ ರಷ್ಯಾ ದಾಳಿ ಹಿನ್ನಲೆಯಲ್ಲಿ ಕಳೆದೆರಡು ವಾರಗಳಿಂದ ನಡೆದ ಸತತ ಸಭೆಗಳ ಬಳಿಕ ಫಾರ್ಮುಲಾ ಒನ್ ಟೂರ್ನಿ ಆಯೋಜನೆ ರದ್ದು ಮಾಡಿತ್ತು. ಅಲ್ಲದೆ ರಷ್ಯಾದಲ್ಲಿನ ಭವಿಷ್ಯದ ಟೂರ್ನಿಗಳ ಮೇಲೂ ಕೆಂಗಣ್ಣು ಬೀರಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಎಫ್1 2025 ರವರೆಗೆ ರಷ್ಯಾದಲ್ಲಿ ಫಾರ್ಮುಲಾ ಒನ್ ಟೂರ್ನಿ ಆಯೋಜನೆ ಮಾಡದಂತೆ ಎಲ್ಲ ಸರಣಿಗಳನ್ನೂ ರದ್ದು ಮಾಡಿದೆ.
ಇತ್ತೀಚೆಗಷ್ಟೇ ನಾಲ್ಕು ಬಾರಿ F1 ಚಾಂಪಿಯನ್ ಸೆಬಾಸ್ಟಿಯನ್ ವೆಟ್ಟೆಲ್ ಸೇರಿದಂತೆ ಹಲವು ಸ್ಟಾರ್ ಎಫ್ 1 ರೇಸರ್ ಗಳು ರಷ್ಯಾ ಟೂರ್ನಿಯಿಂದ ಹಿಂದಕ್ಕೆ ಸರಿದಿದ್ದರು. ಅಲ್ಲದೆ ಭವಿಷ್ಯದಲ್ಲಿ ರಷ್ಯಾಗೆ ತಾವು ಟೂರ್ನಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications