Ukraine War: ಉಕ್ರೇನ್ ವಿರುದ್ಧ ರಷ್ಯಾ ಡೆಡ್ಲಿ ಡ್ರೋನ್ ಅಟ್ಯಾಕ್, ನಿಲ್ಲುತ್ತಿಲ್ಲ ಸಾವು & ನೋವು...
ರಷ್ಯಾ & ಉಕ್ರೇನ್ ನಡುವೆ ಯುದ್ಧದ ಬೆಂಕಿ ಆರುತ್ತಿಲ್ಲ, ಬದಲಾಗಿ ಇನ್ನಷ್ಟು ಜಾಗಕ್ಕೆ ಹಬ್ಬುತ್ತಾ ಭಯ ಸೃಷ್ಟಿ ಮಾಡಿದೆ. ರಷ್ಯಾ & ಉಕ್ರೇನ್ ಯುದ್ಧಕ್ಕೆ ಇನ್ನೇನು 4 ತಿಂಗಳಲ್ಲಿ 4 ವರ್ಷ ತುಂಬಿ ಹೋಗಲಿದೆ. ಹೀಗಿದ್ದರೂ ಯುದ್ಧ ನಿಲ್ಲದೆ ಅವರ ಮೇಲೆ ಇವರು, ಇವರ ಮೇಲೆ ಅವರು ದಾಳಿ ಮಾಡುತ್ತಾ ಇದ್ದಾರೆ. ಮತ್ತೊಂದು ಕಡೆ ದಿಢೀರ್ ರಷ್ಯಾ ನಡೆಸಿರುವ ಡ್ರೋನ್ ದಾಳಿಯಲ್ಲಿ ಜನ ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ. ಸಾಮಾನ್ಯ ಜನರೇ ದಾಳಿಯಲ್ಲಿ ಬಲಿ ಆಗುತ್ತಿರುವ & ಈ ರೀತಿಯಾಗಿ ಪದೇ ಪದೇ ಎರಡೂ ಕಡೆಯಿಂದ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಯುತ್ತಾ ಇರುವುದು ಚಿಂತೆ ಹೆಚ್ಚಿಸಿದೆ.
ರಷ್ಯಾ ಮಿಲಿಟರಿ ಪೂರ್ವ ಉಕ್ರೇನ್ ನಗರ ಕ್ರಾಮಾಟೋರ್ಸ್ಕ್ ಮೇಲೆ ಡೆಡ್ಲಿ ಡ್ರೋನ್ ದಾಳಿ ನಡೆಸಿ ನಾಗರಿಕನ ಹತ್ಯೆಗೆ ಕಾರಣವಾಗಿದೆ ಎಂದು ಉಕ್ರೇನ್ ಆರೋಪ ಮಾಡಿದೆ. ಈ ಘಟನೆ ನಂತರ ಅತ್ತ ಉಕ್ರೇನ್ ಕೂಡ ಮರುದಾಳಿಗೆ ಸಿದ್ಧವಾಗುತ್ತಿದೆ. ಹಾಗೇ ಈ ಘಟನೆಯಲ್ಲಿ ಖಾರ್ಕಿವ್ ಪ್ರದೇಶದಲ್ಲಿ ಮೂವರು ಗಾಯಗೊಂಡಿರುವ ಆರೋಪ ಕೂಡ ಕೇಳಿಬಂದಿದೆ. ಇದು ಪಾಶ್ಚಿಮಾತ್ಯ ದೇಶಗಳಿಗೆ, ಅದರಲ್ಲೂ ಅಮೆರಿಕಗೆ ಮತ್ತೊಂದು ಅಸ್ತ್ರ ಕೊಟ್ಟಂತೆ ಆಗಿದೆ. ಹಾಗೇ ಇನ್ನೊಂದು ಕಡೆ ರಷ್ಯಾ ದೇಶದ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಉಕ್ರೇನ್ ಕೂಡ ಅಟ್ಯಾಕ್ ಮಾಡೋಕೆ ಮುಂದೆ ನುಗ್ಗುತ್ತಿದೆ.

ಯುದ್ಧ ನಿಲ್ಲುವುದು ಯಾವಾಗ?
ಪ್ರಪಂಚದಲ್ಲಿ ಇದೀಗ ಎಲ್ಲೆಲ್ಲೂ ಬರೀ ಯುದ್ಧ.. ಹಿಂಸೆ.. ಸಾವಿನ ಸುದ್ದಿಯೇ ಕೇಳಿಬರುತ್ತಿದೆ. 2022 ಫೆಬ್ರವರಿ ತಿಂಗಳಲ್ಲಿ ಶುರುವಾಗಿದ್ದ ರಷ್ಯಾ & ಉಕ್ರೇನ್ ವಾರ್ ಜೋರಾಗಿದೆ. ಎರಡೂ ದೇಶಗಳ ನಡುವೆ ಯುದ್ಧ ನಿಲ್ಲುವ ಯಾವುದೇ ಮುನ್ಸೂಚನೆ ಕಾಣುತ್ತಿಲ್ಲ. ಈ ಕಾರಣಕ್ಕೆ ರಷ್ಯಾ & ಉಕ್ರೇನ್ ವಾರ್ ನಿಲ್ಲಿಸಬೇಕು ಅಂತಾ ಭಾರಿ ದೊಡ್ಡ ಮಟ್ಟದಲ್ಲಿ ಪ್ರಯತ್ನ ನಡೆಯುತ್ತಲೇ ಇವೆ. ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಈ ವಿಚಾರವಾಗಿ ನೇರವಾಗಿ ವಾರ್ನಿಂಗ್ ಕೊಟ್ಟಿದ್ದರೂ ಯುದ್ಧ ಮಾತ್ರ ನಿಲ್ಲುತ್ತಿಲ್ಲ. ಬದಲಾಗಿ ಮತ್ತಷ್ಟು ಜಾಸ್ತಿ ಆಗುತ್ತಿದೆ...
3ನೇ ಮಹಾಯುದ್ಧದ ಆತಂಕವೂ ಇದೆ
ಒಟ್ನಲ್ಲಿ ಇವರ ಬಡಿದಾಟಕ್ಕೆ ಸಾಮಾನ್ಯ ಜನರು ಬಲಿಯಾಗುತ್ತಿದ್ದಾರೆ, ಒಂದು ಕಡೆ ಇಸ್ರೇಲ್ & ಗಾಜಾ ನಡುವೆ ಭಾರಿ ಘೋರ ಯುದ್ಧ ನಡೆಯುತ್ತಿದೆ. ಇದು ಸಾಲದು ಎಂಬಂತೆ ರಷ್ಯಾ ಹಾಗೂ ಉಕ್ರೇನ್ ಕೂಡ ಬಡಿದಾಡುತ್ತಿವೆ. ಪ್ರಪಂಚದಲ್ಲಿ ಇದೀಗ ಎಲ್ಲಾ ಹಿಂಸಾಚಾರಕ್ಕೂ ಈ ಎರಡೂ ಯುದ್ಧಗಳೇ ಕಾರಣ ಆಗುವ ಭಯ ಕೂಡ ಆವರಿಸಿದ್ದು, 3ನೇ ಮಹಾಯುದ್ಧದ ಆತಂಕ ಕೂಡ ಇದ್ದೇ ಇದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications